ಜಮ್ಮು| ಕಾಶ್ಮೀರಿ ಪಂಡಿತರ ಸಂಘಟನೆ ಕಾಂಗ್ರೆಸ್ ಜೊತೆ ವಿಲೀನ

Date:

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಜಮ್ಮುವಿನಲ್ಲಿ ಕಾಶ್ಮೀರಿ ಪಂಡಿತ ಸಂಘಟನೆ ಆಲ್ ಇಂಡಿಯಾ ಕಾಶ್ಮೀರಿ ಹಿಂದೂ ಫೋರಮ್ (ಎಐಕೆಎಚ್‌ಎಫ್) ಶನಿವಾರ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್‌ನೊಂದಿಗೆ ವಿಲೀನಗೊಂಡಿದೆ ಎಂದು ವರದಿಯಾಗಿದೆ.

ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ವಿಕಾರ್ ರಸೂಲ್ ವಾನಿ ಅವರು ಎಐಕೆಎಚ್‌ಎಫ್ ಅಧ್ಯಕ್ಷ ರತ್ತನ್ ಲಾಲ್ ಭಾನ್ ಮತ್ತು ಇತರ ಪದಾಧಿಕಾರಿಗಳನ್ನು ಪಕ್ಷಕ್ಕೆ ಸ್ವಾಗತಿಸಿದರು.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ವಿಕಾರ್ ರಸೂಲ್ ವಾನಿ, “ಎಐಕೆಎಚ್‌ಎಫ್ ಅನ್ನು 1998ರಲ್ಲಿ ಸ್ಥಾಪಿಸಲಾಗಿದ್ದು ಅದರ ನೂರಾರು ಸದಸ್ಯರು ಕಾಂಗ್ರೆಸ್‌ಗೆ ಸೇರುವುದು ಪಕ್ಷಕ್ಕೆ ದೊಡ್ಡ ಉತ್ತೇಜನವಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?   ಲೋಕಸಭೆ ಚುನಾವಣೆ | ಜಮ್ಮುವಿನಲ್ಲಿ ಕಾಂಗ್ರೆಸ್‌ಗೆ ಶಿವಸೇನೆ ಸಾಥ್

ಎಲ್ಲಾ ಕಾಶ್ಮೀರಿ ಪಂಡಿತರ ಸಂಘಟನೆಗಳನ್ನು ಪಕ್ಷಕ್ಕೆ ಸೇರುವಂತೆ ಕರೆ ನೀಡಿದ ಅವರು, “ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಕಳೆದ 10 ವರ್ಷಗಳಿಂದ ಸಮುದಾಯವನ್ನು ಮುರ್ಖರನ್ನಾಗಿಸಿದೆ” ಎಂದು ಆರೋಪಿಸಿದರು.

“ಬಿಜೆಪಿ ಅಧಿಕಾರಕ್ಕೆ ಬರಲು ದೇಶಾದ್ಯಂತ ಹಲವಾರು ಸಂಸ್ಥೆಗಳನ್ನು ಮಾರಾಟ ಮಾಡಿದೆ. ಕಾಶ್ಮೀರಿ ಪಂಡಿತರಿಗೆ ಹಲವಾರು ಭರವಸೆಗಳನ್ನು ನೀಡಿದೆ. ಕಳೆದ 10 ವರ್ಷಗಳಿಂದ ಬಿಜೆಪಿ ಅಧಿಕಾರದಲ್ಲಿದ್ದರೂ ಅವರು 10 ಪೈಸೆಯಷ್ಟು ಕೆಲಸ ಮಾಡುವಲ್ಲಿ ವಿಫಲವಾಗಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ?  5 ವರ್ಷ ಜೈಲಿನಲ್ಲಿದ್ದು ಬಿಡುಗಡೆಯಾದ ಕಾಶ್ಮೀರಿ ಪತ್ರಕರ್ತ, ಮತ್ತೆ ಬಂಧನ

“ಕಳೆದ 10 ವರ್ಷಗಳಿಂದ ಬಿಜೆಪಿ ಕಾಶ್ಮೀರಿ ಪಂಡಿತರನ್ನು ಮೂರ್ಖರನ್ನಾಗಿಸುತ್ತಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್‌ಗೆ ಹಿಂತಿರುಗುವಂತೆ ನಾನು ಇತರ ಕಾಶ್ಮೀರಿ ಪಂಡಿತರ ಗುಂಪುಗಳಿಗೆ ಮನವಿ ಮಾಡುತ್ತೇನೆ. ನೆಹರೂ ಕುಟುಂಬವು ಮೂಲತಃ ಕಾಶ್ಮೀರಕ್ಕೆ ಸೇರಿದ್ದು ಮತ್ತು ಸ್ಥಳಾಂತರಗೊಂಡ ಪಂಡಿತರ ಬಗ್ಗೆ ಹೆಚ್ಚಿನ ಸಹಾನುಭೂತಿಯನ್ನು ಹೊಂದಿದೆ ಮತ್ತು ಒಟ್ಟಾರೆಯಾಗಿ ಕಾಂಗ್ರೆಸ್ ಪಕ್ಷವೂ ಸಹ ಸಹಾನುಭೂತಿ ಹೊಂದಿದೆ” ಎಂದು ಹೇಳಿದರು.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರವು ಕಾಶ್ಮೀರಿ ಪಂಡಿತರಿಗಾಗಿ ಹಲವಾರು ಕಾರ್ಯಗಳನ್ನು ಮಾಡಿರುವ ಕಾರಣದಿಂದಾಗಿ ನಾವು ಕಾಂಗ್ರೆಸ್‌ನೊಂದಿಗೆ ನಮ್ಮ ಸಂಘಟನೆಯನ್ನು ವಿಲೀನಗೊಳಿಸಲು ನಿರ್ಧರಿಸಿದ್ದೇವೆ ಎಂದು ಎಐಕೆಎಚ್‌ಎಫ್ ಅಧ್ಯಕ್ಷ ರತ್ತನ್ ಲಾಲ್ ಭಾನ್ ತಿಳಿಸಿದ್ದಾರೆ.

“ನಾವು ನಮ್ಮ ಕುಟುಂಬಕ್ಕೆ ಹಿಂತಿರುಗಿದಂತೆ ಭಾವಿಸುತ್ತೇವೆ. ಬಿಜೆಪಿಯವರು ಪಂಡಿತರನ್ನು ಶೋಷಣೆ ಮಾಡಿದ್ದು, ನಮಗಾಗಿ ಏನನ್ನೂ ಮಾಡಿಲ್ಲ” ಎಂದು ದೂರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...