ಕಾವೇರಿ-5ನೇ ಹಂತ‌ | ಯೋಜನೆ ನಮ್ಮದು, ಕ್ರೆಡಿಟ್ ಕಾಂಗ್ರೆಸ್‌ನದ್ದು: ಆರ್‌ ಅಶೋಕ್

Date:

  • ‘ಬಿಜೆಪಿ ಅವಧಿಯಲ್ಲಿ 2019 ಜನವರಿ 1ರಂದು ಯೋಜನೆಯ ಕಾಮಗಾರಿ ಆರಂಭ’
  • ‘110 ಹಳ್ಳಿಗಳನ್ನು ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆ ಮಾಡಿಸಿದ್ದು ನನ್ನ ಅವಧಿಯಲ್ಲಿ

ಪೂಜೆ ಮುಗಿದ ನಂತರ ಕೊನೆಯಲ್ಲಿ ಬಂದು ಮಂಗಳಾರತಿ ಪಡೆಯುವಂತೆ ಕಾವೇರಿ-5ನೇ ಕಾಮಗಾರಿ ಮುಗಿದ ಬಳಿಕ ಕಾಂಗ್ರೆಸ್‌ ಮುಂದೆ ಬಂದು ಹೆಸರು ಪಡೆದುಕೊಳ್ಳುತ್ತಿದೆ. ಈ ಯೋಜನೆ ಮಾಡಿದ್ದು ಬಿಜೆಪಿ ಎಂದು ಗೊತ್ತಿದ್ದರೂ, ನಾವೇ ಮಾಡಿದ್ದೆಂದು ಡಿ ಕೆ ಶಿವಕುಮಾರ್‌ ಜಂಭ ಕೊಚ್ಚಿಕೊಳ್ಳುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “2018 ಜನವರಿ 24ರಂದು ಈ ಯೋಜನೆಗೆ 5,500 ಕೋಟಿ ರೂ. ಸಾಲ ಪಡೆಯಲು ಅಂದಿನ ಬಿಜೆಪಿ ಮುಖ್ಯಮಂತ್ರಿ ಯಡಿಯೂರಪ್ಪ ಒಪ್ಪಂದಕ್ಕೆ ಸಹಿ ಹಾಕಿದ್ದರು. ಆಗ ಕಾಮಗಾರಿಗೆ 90 ತಿಂಗಳ ಗಡುವು ವಿಧಿಸಲಾಗಿತ್ತು. 2019 ಜನವರಿ 1ರಂದು ಯೋಜನೆಯ ಕಾಮಗಾರಿ ಆರಂಭವಾಗಿತ್ತು. ಆಗಲೂ ಬಿಜೆಪಿ ಸರ್ಕಾರವೇ ಇತ್ತು” ಎಂದರು.

“ಪ್ಯಾಕೇಜ್‌ 2ನಲ್ಲಿ ನಿತ್ಯ 77.5 ಕೋಟಿ ಲೀಟರ್‌ ನೀರು ಶುದ್ಧೀಕರಣ ಘಟಕ, ಪ್ಯಾಕೇಜ್‌ 3 ರಲ್ಲಿ ಟಿ.ಕೆ.ಹಳ್ಳಿ ಪಂಪಿಂಗ್‌ ಘಟಕ, ಪ್ಯಾಕೇಜ್‌ 4ರಲ್ಲಿ ಹಾರೋಹಳ್ಳಿ ಹಾಗೂ ತಾತಗುಣಿಯಲ್ಲಿ ಎರಡು ಪಂಪಿಂಗ್‌ ಸ್ಟೇಶನ್‌, ಪ್ಯಾಕೇಜ್‌ 7ರಲ್ಲಿ ಟಿ.ಕೆ.ಹಳ್ಳಿ-ಹಾರೋಹಳ್ಳಿ ಪೈಪ್‌ಲೈನ್‌, ಪ್ಯಾಕೇಜ್‌ 8ರಲ್ಲಿ ಹಾರೋಹಳ್ಳಿ-ವಾಜರಹಳ್ಳಿ ಪೈಪ್‌ಲೈನ್‌, ಪ್ಯಾಕೇಜ್‌ 10 ರಲ್ಲಿ ಪಶ್ಚಿಮ ಭಾಗದಲ್ಲಿ ಪೈಪ್‌ಲೈನ್‌, ಪ್ಯಾಕೇಜ್‌ 12 ರಲ್ಲಿ ಪೂರ್ವ ಭಾಗದಲ್ಲಿ ನೆಲಮಟ್ಟದ ಜಲಾಗಾರ, ಪ್ಯಾಕೇಜ್‌ 13 ರಲ್ಲಿ ಪಶ್ಚಿಮ ಭಾಗದಲ್ಲಿ ನೆಲಮಟ್ಟದ ಜಲಾಗಾರ ನಿರ್ಮಿಸಲು ಯೋಜನೆ ರೂಪಿಸಲಾಗಿತ್ತು” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಕಾಮಗಾರಿ ಶೇ.80ರಷ್ಟು ಪೂರ್ಣಗೊಂಡಿತ್ತು. ಡಿಪಿಆರ್‌, ಹಣ ಹೊಂದಿಕೆ, ಕಾಮಗಾರಿ ಆರಂಭ, ಹೀಗೆ ಎಲ್ಲವನ್ನೂ ಮುಚ್ಚಿಟ್ಟು ಹೆಸರು ತೆಗೆದುಕೊಳ್ಳುತ್ತಿದ್ದಾರೆ. ದೇವರನ್ನು ಕೂರಿಸಿ ಹೋಮವನ್ನು ನಾವು ಮಾಡಿದರೆ, ಮಂಗಳಾರತಿ ಸಮಯದಲ್ಲಿ ಕಾಂಗ್ರೆಸ್‌ ನಾಯಕರು ಬಂದು ಇದು ನಮ್ಮದು ಎಂದು ಹೇಳಿಕೊಳ್ಳುತ್ತಿದ್ದಾರೆ. ನಾನು ಬೆಂಗಳೂರು ಉಸ್ತುವಾರಿ ಸಚಿವನಾಗಿದ್ದಾಗ 110 ಹಳ್ಳಿಗಳನ್ನು ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆ ಮಾಡಿಸಿದ್ದೆ. ಈಗ ಏಕಾಏಕಿ ನಾವೇ ಕಷ್ಟಪಟ್ಟಿದ್ದು ಎನ್ನುವಂತೆ ಹೇಳಿಕೊಳ್ಳುತ್ತಿದ್ದಾರೆ” ಹರಿಹಾಯ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಾರಾಷ್ಟ್ರ, ಝಾರ್ಖಂಡ್ ಚುನಾವಣೆ- ಬಿಜೆಪಿ ಪಾಲಿಗೆ ವರವೇ ಅಥವಾ ಶಾಪವೇ?

ಹಣ ವಾಪಸ್‌

“ಬಿಜೆಪಿ ಸರ್ಕಾರ ಬೆಂಗಳೂರಿನಲ್ಲಿ ರಸ್ತೆ ಅಭಿವೃದ್ಧಿಗೆ 8,000 ಕೋಟಿ ರೂ. ಬಿಡುಗಡೆ ಮಾಡಿತ್ತು. ಅದರಲ್ಲಿ ಸುಮಾರು 50% ಕೆಲಸ ಆರಂಭವಾಗಿತ್ತು. ರಾಜಕಾಲುವೆ ಸುಧಾರಣೆಗೆ 1,600 ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು. ಡಿ.ಕೆ.ಶಿವಕುಮಾರ್‌ ಬ್ರ್ಯಾಂಡ್‌ ಬೆಂಗಳೂರು ಮಾಡುತ್ತೇನೆಂದು ಹೇಳಿ ಇದೇ ಹಿಂದಿನ ಅನುದಾನಗಳನ್ನು ವಾಪಸ್‌ ಪಡೆದುಕೊಂಡರು. ಬಳಿಕ ಹೊಸದಾಗಿ ನಯಾ ಪೈಸೆ ಬಿಡುಗಡೆ ಮಾಡಿಲ್ಲ” ಎಂದು ಕಿಡಿಕಾರಿದರು.

ಮಳೆ ಹಾನಿ, ಬ್ಯಾಂಡ್‌ ಬೆಂಗಳೂರು

“ಬೆಂಗಳೂರಿನ ಬೆಳ್ಳಂದೂರು, ಮಹದೇವಪುರ ಮೊದಲಾದ ಕಡೆ ಮಳೆಯಿಂದ ಹಾನಿಯಾಗಿದೆ. ಇಂತಹ ಸಮಯದಲ್ಲೂ ಬ್ರ್ಯಾಂಡ್‌ ಬೆಂಗಳೂರು ಎನ್ನುತ್ತಿದ್ದಾರೆ. ಆದರೆ ಕೇವಲ ಸದ್ದು ಕೇಳಿಬರುತ್ತಿದ್ದು, ಬ್ರ್ಯಾಂಡ್‌ ಬದಲು ಬ್ಯಾಂಡ್‌ ಬೆಂಗಳೂರು ಆಗಿದೆ. ನಿಯಂತ್ರಣ ಕೊಠಡಿ ತೆರೆದಿದ್ದಾರೆಯೇ ಹೊರತು ಯಾವ ಕೆಲಸವೂ ಆಗಿಲ್ಲ. ಗುತ್ತಿಗೆದಾರರಿಗೆ ಬಿಲ್‌ ಬಾಕಿ ಇದೆ. ಒಂದೋ ಬ್ರ್ಯಾಂಡ್‌ ಬೆಂಗಳೂರು ಘೋಷಣೆಯನ್ನು ವಾಪಸ್‌ ಪಡೆಯಲಿ, ಇಲ್ಲವಾದರೆ ಏನು ಮಾಡುತ್ತೇವೆಂದು ಸರಿಯಾದ ಮಾಹಿತಿ ನೀಡಲಿ” ಎಂದು ಆಗ್ರಹಿಸಿದರು.

“ಮುಡಾ ಅಧ್ಯಕ್ಷ ಈಗ ರಾಜೀನಾಮೆ ನೀಡಿದ್ದಾರೆ. ಏನೂ ಅಕ್ರಮ ನಡೆದಿಲ್ಲವೆಂದಾದರೆ ಈಗ ರಾಜೀನಾಮೆ ನೀಡಿದ್ದು ಏಕೆ ಎಂದು ಕಾಂಗ್ರೆಸ್‌ ಸ್ಪಷ್ಟನೆ ನೀಡಬೇಕು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಬಳ್ಳಾರಿ ಚುನಾವಣೆಗೆ ಬಳಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ದಾಖಲೆ ನೀಡಿದೆ. ಇಲ್ಲಿ ನಾಗೇಂದ್ರ ಅಮಾಯಕನಾಗಿದ್ದರೆ ಅವರು ರಾಜೀನಾಮೆ ನೀಡಿದ್ದೇಕೆ, ಸಿದ್ದರಾಮಯ್ಯ ಇನ್ನೂ ಏಕೆ ರಾಜೀನಾಮೆ ನೀಡಿಲ್ಲ” ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...