ಕಾವೇರಿ ಆರತಿ | ಅಧ್ಯಯನಕ್ಕೆ ಮತ್ತೊಮ್ಮೆ ಅಧಿಕಾರಿಗಳ ನಿಯೋಗ ಏಕೆ: ಆರ್‌ ಅಶೋಕ್‌ ಪ್ರಶ್ನೆ

Date:

ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ನಡೆಸುವ ಸಲುವಾಗಿ ಈಗ ಮತ್ತೊಮ್ಮೆ ಅಧಿಕಾರಿಗಳ ನಿಯೋಗ ಹೋಗಬೇಕು ಎನ್ನುವುದಾದರೆ ಈ ಮೊದಲು ಸಚಿವರು ತಮ್ಮ ತಂಡದೊಂದಿಗೆ ಅಲ್ಲಿ ಹೋಗಿ ಮಾಡಿದ್ದಾದರೂ ಏನು? ಸರ್ಕಾರಿ ಹಣದಲ್ಲಿ ಮೋಜು-ಮಸ್ತಿ ಮಾಡಲು ಹೋಗಿದ್ದಾ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಪ್ರಶ್ನಿಸಿದ್ದಾರೆ.

“ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ನಡೆಸುವ ಸಲುವಾಗಿ ಮಂಡ್ಯ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಮಂಡ್ಯ, ಮೈಸೂರು ಭಾಗದ ಶಾಸಕರು, ವಿಧಾನಪರಿಷತ್‌ ಸದಸ್ಯರು, ಕಾವೇರಿ ಅಭಿವೃದ್ಧಿ ನಿಗಮದ ಹಿರಿಯ ಅಧಿಕಾರಿಗಳು ಈಗಾಗಲೇ ಮೂರು ದಿನಗಳ ಕಾಲ ಹರಿದ್ವಾರ ಹಾಗೂ ಕಾಶಿಗೆ ಭೇಟಿ ನೀಡಿ ಅಧ್ಯಯನ ನಡೆಸಿ ಬಂದಿರುವಾಗ ಈಗ ಮತ್ತೊಮ್ಮೆ ಅಧಿಕಾರಿಗಳ ನಿಯೋಗ ಕಳುಹಿಸುತ್ತಿರುವುದು ಯಾತಕ್ಕೆ” ಎಂದು ಎಕ್ಸ್‌ ತಾಣದಲ್ಲಿ ಪ್ರಶ್ನಿಸಿ ಬರೆದುಕೊಂಡಿದ್ದಾರೆ.

“ಅಯೋಧ್ಯೆ ರಾಮಮಂದಿರದ ಉದ್ಘಾಟನೆ ವೇಳೆ 30 ವರ್ಷ ಹಳೆ ಕೇಸುಗಳನ್ನು ರೀ ಓಪನ್ ಮಾಡಿ ಕರಸೇವಕರನ್ನ ಜೈಲಿಗೆ ಹಾಕಿದ್ದ ಈ ಕಾಂಗ್ರೆಸ್ ಸರ್ಕಾರ, ಗಣೇಶನ ಮೂರ್ತಿಯನ್ನು ಪೊಲೀಸ್ ವ್ಯಾನ್ ಹತ್ತಿಸಿದ ಈ ಕಾಂಗ್ರೆಸ್ ಸರ್ಕಾರ, ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುದಳ್ಳುರಿಯನ್ನ ಸಣ್ಣ ಘಟನೆ, ಆಕಸ್ಮಿಕ ಘಟನೆ ಎಂದು ತಿಪ್ಪೆ ಸಾರಿಸಿದ ಕಾಂಗ್ರೆಸ್ ಸರ್ಕಾರ ಈಗ ದಿಢೀರನೆ ಹಿಂದೂ ಧರ್ಮದ ಬಗ್ಗೆ, ಹಿಂದೂಗಳ ಆಚಾರ-ವಿಚಾರದ ಬಗ್ಗೆ, ಸಂಪ್ರದಾಯ-ಪರಂಪರೆ ಬಗ್ಗೆ ಎಲ್ಲಿಲ್ಲದ ಆಸಕ್ತಿ ತೋರುವ ನಾಟಕ ಮಾಡುತ್ತಿದೆ” ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಡಿಸಿಎಂ ಡಿ ಕೆ ಶಿವಕುಮಾರ್‌ ಅವರೇ, ನಿಮಗೆ ನಿಜವಾಗಿಯೂ ದೇಶ-ಧರ್ಮದ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ, ಮೊದಲು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಬ್ರದರ್ಸ್ ಗಳನು ಒದ್ದು ಒಳಗೆ ಹಾಕಿ, ನಾಗಮಂಗಲದಲ್ಲಿ, ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ಎಬ್ಬಿಸಿದ ಬ್ರದರ್ಸ್‌ಗಳನ್ನು ಒಳಗೆ ಹಾಕಿ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ಟೈನ್ ಧ್ವಜ ಹಿಡಿದು ಪುಂಡಾಟಿಕೆ ಮಾಡಿದ ಬ್ರದರ್ಸ್‌ಗಳನ್ನ ಒದ್ದು ಒಳಗೆ ಹಾಕಿ. ಅದು ಬಿಟ್ಟು ಬರೀ ತೋರಿಕೆಗೆ ಕಾವೇರಿ ಆರತಿ ಮಾಡುವ ನಾಟಕ ಮಾಡಿದರೆ ಆ ತಾಯಿ ಕಾವೇರಿ ಮೆಚ್ಚುತ್ತಾಳಾ” ಎಂದು ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...