ಜೈಲಿನಲ್ಲಿ ಕೇಜ್ರಿವಾಲ್: ಭ್ರಷ್ಟಾಚಾರದ ಕಾರಣ ನೀಡಿ ಎಎಪಿಗೆ ಸಚಿವ ರಾಜೀನಾಮೆ

Date:

ಭ್ರಷ್ಟಾಚಾರ ವಿರೋಧಿ ಆಂದೋಲನದಿಂದ ಆರಂಭವಾದ ಪಕ್ಷವು, ಭ್ರಷ್ಟಾಚಾರಿ ಪಕ್ಷವಾಗಿ ಮಾರ್ಪಟ್ಟಿದೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ವಿರುದ್ಧ ದೆಹಲಿ ಸಚಿವ ರಾಜ್ ಕುಮಾರ್ ಆನಂದ್ ಆರೋಪ ಮಾಡಿದ್ದಾರೆ. ತಮ್ಮ ಸಚಿವ ಸ್ಥಾನ ಮತ್ತು ಎಎಪಿಗೆ ರಾಜೀನಾಮೆ ನೀಡಿದ್ದಾರೆ.

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಎಎಪಿ ಮುಖ್ಯಸ್ಥ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಉಪ ಮುಖ್ಯಮಂತ್ರಿ ಮನಿಷ್‌ ಸಿಸೋಡಿಯಾ ಸೇರಿದಂತೆ ಪ್ರಮುಖ ನಾಯಕರನ್ನು ಇಡಿ ಬಂಧಿಸಿದ್ದು, ಜೈಲಿನಲ್ಲಿರಿಸಿದೆ. ಪ್ರಕರಣದ ತನಿಖೆ ನಡೆಯುತ್ತಿದೆ. ಅವರೆಲ್ಲರ ಬಂಧನವನ್ನು ಖಂಡಿಸಿರುವ ‘ಇಂಡಿಯಾ’ ಮೈತ್ರಿಕೂಟ, ‘ವಿಪಕ್ಷಗಳನ್ನು ತುಳಿಯಲು ಬಿಜೆಪಿ ರಾಜಕೀಯ ಪಿತೂರಿ ಮಾಡುತ್ತಿದೆ’ ಎಂದು ಆರೋಪಿಸಿದೆ.

ಇಂತಹ ಸಮಯದಲ್ಲಿ ಆನಂದ್‌ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆ ಬಗ್ಗೆ ಪತ್ರಿಕಾಗೋ‍ಷ್ಠಿಯಲ್ಲಿ ಪ್ರತಿಕ್ರಿಯಿಸಿದ ಎಎಪಿ ನಾಯಕ ಸೌರಭ್ ಭಾರದ್ವಾಜ್, “ಆನಂದ್ ಅವರಿಗೆ ಪಕ್ಷ ತೊರೆಯಲು ಬಿಜೆಪಿ ‘ಒತ್ತಡ’ ಹೇರಿದೆ. ಹೀಗಾಗಿಯೇ, ಅವರು ಪಕ್ಷ ತೊರೆದಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜೀನಾಮೆ ನೀಡಿರುವ ಆನಂದ್, “ಭ್ರಷ್ಟಾಚಾರದ ವಿರುದ್ಧ ಹೋರಾಡುವ ಆಂದೋಲನದಿಂದ ಪಕ್ಷವು ಹೊರಹೊಮ್ಮಿದ ಕಾರಣಕ್ಕೆ ನಾನು ಎಎಪಿ ಸೇರಿದ್ದೆ. ಆದರೆ, ಇಂದು ಪಕ್ಷವು ಭ್ರಷ್ಟಚಾರದಲ್ಲಿ ತೊಡಗಿದೆ. ಅದಕ್ಕಾಗಿಯೇ ನಾನು ಪಕ್ಷ ತೊರೆಯಲು ನಿರ್ಧರಿಸಿದ್ದೇನೆ” ಎಂದು ಹೇಳಿದ್ದಾರೆ.

“ಎಎಪಿಯಲ್ಲಿ ದಲಿತ ಶಾಸಕ, ಕೌನ್ಸಿಲರ್ ಇಲ್ಲ. ನಾಯಕತ್ವ ಸ್ಥಾನಕ್ಕೂ ದಲಿತ ನಾಯಕರನ್ನು ನೇಮಿಸಿಲ್ಲ. ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ನಾನು ಅನುಸರಿಸುತ್ತೇನೆ. ದಲಿತರ ಪರ ಕೆಲಸ ಮಾಡಲು ಸಾಧ್ಯವಾಗದಿದ್ದ ಮೇಲೆ ಪಕ್ಷದಲ್ಲಿ ಇರುವುದರಲ್ಲಿ ಅರ್ಥವಿಲ್ಲ” ಎಂದು ಆನಂದ್ ಹೇಳಿದ್ದಾರೆ.

2023ರ ನವೆಂಬರ್‌ನಲ್ಲಿ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಆನಂದ್ ಅವರ ಮನೆಯ ಮೇಲೂ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...