ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೇಜ್ರಿವಾಲ್

Date:

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಪಾದಿತ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿರುವ ಕೇಜ್ರಿವಾಲ್, ಜೈಲಿನಿಂದ ಬಿಡುಗಡೆಯಾದ ನಾಲ್ಕು ದಿನಗಳ ನಂತರ, ಮಂಗಳವಾರ ಸಂಜೆ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಕೇಂದ್ರಾಡಳಿತ ಪ್ರದೇಶವಾದ ದೆಹಲಿಯಲ್ಲಿ ಕೇಂದ್ರದ ಪ್ರತಿನಿಧಿ ಲೆಫ್ಟಿನೆಂಟ್ ಗವರ್ನರ್‌ ವಿ.ಕೆ ಸಕ್ಸೇನಾ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ ಕೇಜ್ರಿವಾಲ್, ರಾಜೀನಾಮೆ ಸಲ್ಲಿಸಿದ್ದಾರೆ.

ಮಂಗಳವಾರ ಬೆಳಗ್ಗೆ ನಡೆದ ಎಎಪಿ ಸಭೆಯಲ್ಲಿ ದೆಹಲಿ ಸಚಿವೆ ಅತಿಶಿ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ಕೇಜ್ರಿವಾಲ್ ಪ್ರಸ್ತಾಪಿಸಿದ್ದರು. ಅವರ ಪ್ರಸ್ತಾಪವನ್ನು ಎಲ್ಲರೂ ಒಪ್ಪಿಕೊಂಡಿದ್ದು, ದೆಹಲಿಯ ಮುಂದಿನ ಮುಖ್ಯಮಂತ್ರಿಯಾಗಿ ಅತಿಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಜ್ರಿವಾಲ್ ರಾಜೀನಾಮೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅತಿಶಿ, “ಇಂದು ಅರವಿಂದ್ ಕೇಜ್ರಿವಾಲ್ ರಾಜೀನಾಮೆ ಸಲ್ಲಿಸಿದ್ದಾರೆ. ಇದು ಪಕ್ಷ ಮತ್ತು ದೆಹಲಿಯ ಜನರಿಗೆ ಭಾವನಾತ್ಮಕ ಕ್ಷಣವಾಗಿದೆ. ಅದೇ ಸಮಯದಲ್ಲಿ, ಕೇಜ್ರಿವಾಲ್ ಅವರನ್ನು ಮತ್ತೆ ಮುಖ್ಯಮಂತ್ರಿ ಮಾಡಲು ದೆಹಲಿ ಜನರು ಸಂಕಲ್ಪ ಮಾಡಿದ್ದಾರೆ. ಚುನಾವಣೆ ನಡೆಯುವವರೆಗೆ ನಾನು ದೆಹಲಿ ಸರ್ಕಾರವನ್ನು ಮುನ್ನಡೆಸುತ್ತೇನೆ” ಎಂದಿದ್ದಾರೆ.

ಇತ್ತೀಚೆಗೆ, ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್‌ ಷರತ್ತುಬದ್ದ ಜಾಮೀನು ನೀಡಿತ್ತು. ಕೇಜ್ರಿವಾಲ್ ಮುಖ್ಯಮಂತ್ರಿ ಕಚೇರಿಗೆ ಹೋಗುವಂತಿಲ್ಲ. ಲೆಫ್ಟಿನೆಂಟ್ ಗವರ್ನರ್ ಅನುಮತಿ ಇಲ್ಲದೆ ಕಡತಗಳಿಗೆ ಸಹಿ ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಷರತ್ತು ವಿಧಿಸಿತ್ತು.

ಜೈಲಿನಿಂದ ಹೊರಬಂದ ಬಳಿಕ, ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಕೇಜ್ರಿವಾಲ್, ಇನ್ನೆರಡು ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೆನೆಂದು ಘೋಷಿಸಿದ್ದರು. “ಈಗಿನ ಬಿಜೆಪಿ ಸರ್ಕಾರದ ಆಡಳಿತ ಆಂಗ್ಲರ ಕಾನೂನಿಗಿಂತ ಕೆಟ್ಟದಾಗಿದೆ. ಜನರ ತೀರ್ಪು ನೀಡುವವರೆಗೂ ನಾನು ವಿರಮಿಸುವುದಿಲ್ಲ. ನಮ್ಮ ಬಂಡೆಯಂತಹ ಸಂಕಲ್ಪವನ್ನು ಕೇಂದ್ರ ಸರ್ಕಾರದ ಪಿತೂರಿಗಳಿಂದ ಮುರಿಯಲು ಸಾಧ್ಯವಿಲ್ಲ” ಎಂದು ಹೇಳಿದ್ದರು.

ಅಲ್ಲದೆ, “ನನಗೆ ಕಾನೂನು ನ್ಯಾಯಾಲಯಗಳಿಂದ ನ್ಯಾಯ ಸಿಕ್ಕಿದೆ… ಈಗ ನನಗೆ ಜನತಾ ನ್ಯಾಯಾಲಯದಿಂದ ನ್ಯಾಯ ಸಿಗಬೇಕಿದೆ. ನಾನು ದೆಹಲಿಯ ಜನರಿಂದ ನ್ಯಾಯ ಕೇಳಲು ಬಯಸುತ್ತೇನೆ. ಕೇಜ್ರಿವಾಲ್ ನಿರಪರಾಧಿಯೇ ಅಥವಾ ಅಪರಾಧಿಯೇ? ನಾನು ಸರಿಯಾಗಿ ಕೆಲಸ ಮಾಡಿದ್ದರೆ, ನನಗೆ ದೆಹಲಿ ಜನರು ಮತ ನೀಡುತ್ತಾರೆ” ಎಂದಿದ್ದರು.

ಈ ವರದಿ ಓದಿದ್ದೀರಾ?: ಕೇಜ್ರಿವಾಲ್ ‘ನಾನು ಪ್ರಾಮಾಣಿಕ’ ಎನ್ನುತ್ತಿರುವುದೇಕೆ?

“ದೆಹಲಿಯ ಪ್ರತಿ ಮನೆ ಪ್ರತಿ ಬೀದಿಗೂ ತೆರಳುವೆ. ಜನರಿಂದ ತೀರ್ಪು ಸ್ವೀಕರಿಸುವವರೆಗೂ ನಾನು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ. ನಾನು ಜೈಲಿನಲ್ಲಿದ್ದಾಗ ಸ್ವತಂತ್ರ ದಿನಾಚರಣೆ ಸಂದರ್ಭದಲ್ಲಿ ಸಚಿವೆ ಅತಿಶಿ ಅವರಿಂದ ಧ್ವಜಾರೋಹಣ ಮಾಡಿಸಲು ದೆಹಲಿ ಲೆಫ್ಟಿನೆಂಟ್ ಗವರ್ನರ್‌ ಅವರಿಗೆ ಪತ್ರ ಬರೆದಿದ್ದೆ.ಆದರೆ ಪತ್ರವು ಯಾವುದೇ ಉತ್ತರವಿಲ್ಲದೆ ವಾಪಸ್‌ ಬಂದಿತು. ಇನ್ನೊಮ್ಮೆ ಪತ್ರ ಬರೆದರೆ ನಿಮ್ಮ ಕುಟುಂಬದವರನ್ನು ಭೇಟಿ ಮಾಡಿಸಲು ಬಿಡುವುದಿಲ್ಲ ಎಂಬ ಎಚ್ಚರಿಕೆಯನ್ನು ನೀಡಲಾಗಿತ್ತು” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...