ಕೆರಗೋಡು ಧ್ವಜ ವಿವಾದ | ಧ್ವಜ ತೆರವು ವಿಚಾರವಾಗಿ ಸರ್ಕಾರವೇ ನಕಲಿ ದಾಖಲೆ ಸೃಷ್ಟಿಸಿದೆ: ಕುಮಾರಸ್ವಾಮಿ

Date:

ಧ್ವಜ ತೆರವು ವಿಚಾರವಾಗಿ ಸರ್ಕಾರವೇ ನಕಲಿ ದಾಖಲೆ ಸೃಷ್ಟಿಸಿದೆ. ಕೆರಗೋಡಿನ ಬಸ್ ನಿಲ್ದಾಣದ ಧ್ವಜಸ್ತಂಭ ಸ್ಥಾಪನೆಗೆ ಮನವಿ ಮಾಡಿದ್ದ ಗೌರಿ ಶಂಕರ್ ಸೇವಾ ಟ್ರಸ್ಟ್, ಯಾವ ಧ್ವಜ ಅಂತ ಹೇಳಿರಲಿಲ್ಲ. ಅದಕ್ಕೆ ಅನುಮತಿ ನೀಡಲಾಗಿತ್ತು. ಈಗ ಸರ್ಕಾರವೇ ನಕಲಿ ದಾಖಲೆ ಸೃಷ್ಟಿ ಮಾಡಿಕೊಂಡು ಆರೋಪ ಮಾಡುತ್ತಿದೆ ಎಂದು ಮಾಜಿ ಸಿಎಂ ಎಚ್ ಡಿ‌ ಕುಮಾರಸ್ವಾಮಿ ಆರೋಪಿಸಿದರು.

ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿ ಸಚಿವ ಎನ್​ ಚಲುವರಾಯಸ್ವಾಮಿ ಮಾಡಿರುವ ಆರೋಪಗಳಿಗೆ ಸುದ್ದಿಗೋಷ್ಠಿ ನಡೆಸಿ ತೀಕ್ಷ್ಣ ತಿರುಗೇಟು ನೀಡಿದರು.

“ಗೌರಿ ಶಂಕರ್ ಟ್ರಸ್ಟ್​ಗೆ ನವೆಂಬರ್ ತಿಂಗಳಲ್ಲಿ ಅನುಮತಿ ನೀಡಲಾಗಿತ್ತು. ಇಂಥದ್ದೇ ಧ್ವಜ ಎಂದು ಎಲ್ಲಿಯೂ ಉಲ್ಲೇಖಿಸಿರಲಿಲ್ಲ. 2023ರ ಡಿಸೆಂಬರ್ 29ರಂದು ಮತ್ತೆ ಹೊಸ ಅರ್ಜಿ ತೆಗೆದುಕೊಂಡಿದ್ದಾರೆ. ಅದನ್ನು ತಿದ್ದಿಕೊಂಡಿದ್ದಾರೆ. ಇದರಲ್ಲಿ ತ್ರಿವರ್ಣ ಧ್ವಜ, ಕನ್ನಡ ಧ್ವಜ ಹಾಕಲು ಅನುಮತಿ ನೀಡಿದ್ದೇವೆ ಎಂದಿದೆ. ಜನವರಿ ತಿಂಗಳಲ್ಲಿ ಪತ್ರ ಸೃಷ್ಟಿ ಮಾಡಿಕೊಳ್ಳಲಾಗಿದೆ. ಮುಚ್ಚಳಿಕೆಯಲ್ಲಿರುವ ಹೆಸರು, ಅರ್ಜಿಗಳಲ್ಲಿ ಬೇರೆ ಹೆಸರುಗಳು ಇವೆ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿಮ್ಮಿಂದ ಕಲಿಯಬೇಕಾ ಚಲುವರಾಯಸ್ವಾಮಿ ಅವರೇ?

ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರ ವಿನಯಕ್ಕೆ ನಮಸ್ಕಾರ. ನಾನು ನಿಮ್ಮಿಂದ ಕಲಿಯಬೇಕಾ? 200 ಜನ ರೈತರು ಆತ್ಮಹತ್ಯೆ ಮಾಡಿಕೊಂಡರು. ನೀವು ಒಂದು ರೂಪಾಯಿ ಕೂಡ ಬಿಚ್ಚಿಲ್ಲ. ನನ್ನ ದುಡಿಮೆ ಹಣ ಕೊಟ್ಟು ಬಂದಿದ್ದೇನೆ. ಅದೂ ಸಹ ವರ್ಗಾವಣೆ ದಂಧೆಯಿಂದ ಬಂದ‌ ಹಣ ಅಲ್ಲ. ನಿಮ್ಮಿಂದ ವಿನಯ ಕಲಿಯಬೇಕಿಲ್ಲ. ನಾನು ಜಿಲ್ಲೆ ಹಾಳು ಮಾಡೋಕೆ‌ ಬಂದಿದ್ದೇನೆಯೇ? ಮಂಡ್ಯ ಜಿಲ್ಲೆಯ ಜನರ ಸರ್ಟಿಫಿಕೇಟ್‌ ನನ್ನ ಹತ್ರ ಇದೆ” ಎಂದರು.

“ನಾನು ಸೋಮವಾರದ ಭಾಷಣದಲ್ಲಿ ಬೆಂಕಿ‌‌ ಹಚ್ಚಿ‌, ಫ್ಲೆಕ್ಸ್ ಹರಿಯಿರಿ ಅಂತ ಹೇಳಿಲ್ಲ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂಬುದಾಗಿ ಆಗ್ರಹಿಸಿದ್ದೆ ಅಷ್ಟೆ. ಕೆರಗೋಡಿನ ಜನತೆ ಜನವರಿ 26 ರಂದು ರಾಷ್ಟ್ರ ಧ್ವಜ ಹಾರಿಸಿದ್ದಾರೆಯೇ ವಿನಃ ಸರ್ಕಾರ ಅಲ್ಲ. ಕಾಂಗ್ರೆಸ್ ಶಾಸಕರನ್ನು ಕರೆದಿಲ್ಲ ಎಂದು ಈ ಗಲಾಟೆ ಆರಂಭ ಆಗಿದೆ” ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಮ ನೆಲೆ ನಿಂತರೂ ನಿಲ್ಲದ ನಾಟಕ

ಕೇಸರಿ ಶಾಲು ಹಾಕುವುದು ತಪ್ಪೇ?

“ಪಾಪ ಹಳೆಯ ಸ್ನೇಹಿತರು (ಚಲುವರಾಯಸ್ವಾಮಿ) ಹೇಳಿದ್ದಾರೆ, ಕುಮಾರಸ್ವಾಮಿ ಕೇಸರಿ ಶಾಲು‌‌ ಹಾಕಿಕೊಂಡು ಜೆಡಿಎಸ್ ಕಾರ್ಯಕರ್ತರ ಶಕ್ತಿ ಕೊನೆಗೊಳಿಸಲು ಹೊರಟಿದ್ದಾರೆ ಎಂದು. ನಾನು ಕೇಸರಿ ಶಾಲು ಹಾಕಿಕೊಂಡಿದ್ದು ಮಹಾನ್ ಅಪರಾಧವಾ? ಕಾಂಗ್ರೆಸ್​​ನವರಿಗೆ ಕೇಸರಿ ಮೇಲೆ ಯಾಕೆ ಸಂಕುಚಿತ ಮನೋಭಾವ? ಮಂಡ್ಯ ಉಸ್ತುವಾರಿ ಸಚಿವರಿಂದ ನಾನು ನನ್ನ ಪಕ್ಷವನ್ನು ಹೇಗೆ ಉಳಿಸಿಕೊಳ್ಳಬೇಕು ಎಂಬುದನ್ನು ಕಲಿಯಬೇಕಿಲ್ಲ. ನನಗೆ ಜನ ಕೊಟ್ಟಿರುವ ಪ್ರೀತಿ ಇದೆ” ಎಂದು ತಿರುಗೇಟು ನೀಡಿದರು.

“ಕಳೆದ ಎರಡು ದಿನಗಳಿಂದ ಮಂಡ್ಯದಲ್ಲಿ ಆರಂಭ ಆಗಿರುವ ಒಂದು ಘಟನೆಯಿಂದಾಗಿ ಈ‌ ಸರ್ಕಾರದ ಕೆಲ ನಡವಳಿಕೆ ಬಗ್ಗೆ ‌ಮತನಾಡಲೇಬೇಕಿದೆ. ಮಾಜಿ ಸಿಎಂ ದಿ. ದೇವರಾಜ ಅರಸು ಅವರಿಗಿಂತ ಸಿಎಂ ಸಿದ್ದರಾಮಯ್ಯ ಒಂದು ಹೆಜ್ಜೆ ಮುಂದೆ ಹೋಗಿ ಶೋಷಿತರ ಧ್ವನಿಯಾಗಿ ಚಿತ್ರದುರ್ಗದಲ್ಲಿ ಮಾಡಿದ ವೀರಾವೇಷದ ಭಾಷಣ ಕೇಳಿದ್ದೇನೆ. ಮತ್ತೊಂದೆಡೆ, ಮಂಡ್ಯದಲ್ಲಿ ನಮ್ಮ ಹಳೆಯ ಸ್ನೇಹಿತ ಮಾತನಾಡಿರುವುದನ್ನೂ ಕೇಳಿದ್ದೇನೆ. ಮಂಡ್ಯವನ್ನು ಹಾಳು ಮಾಡಲು ಕುಮಾರಸ್ವಾಮಿ ಬಂದಿದ್ದಾರೆ ಎಂದಿದ್ದಾರೆ. ಮಂಡ್ಯದಲ್ಲಿ ನೆಡೆದ ಘಟನೆಗೂ ನನಗೂ ಏನೂ ಸಂಬಂಧ ಎಂದು ಸಿಎಂ ಮತ್ತು ಉಸ್ತುವಾರಿ ಸಚಿವರನ್ನು ಕೇಳುತ್ತೇನೆ. ಬಿಜೆಪಿ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ನಾನು ಕೊನೆ ಹಂತದಲ್ಲಿ ಭಾಗಿಯಾಗಿದ್ದೆ” ಎಂದರು.

“ಮಂಡ್ಯ ಸಕ್ಕರೆ ಕಾರ್ಖಾನೆಗೆ ಹಣ ಬಿಡುಗಡೆ ಮಾಡಿಲ್ಲ ಎಂದು ಚಲುವರಾಯಸ್ವಾಮಿ ದೂರಿದ್ದಾರೆ. ನಾನು ಸಿಎಂ ಆಗಿದ್ದಾಗ ಕಾಂಗ್ರೆಸ್​​ನವರು ಕೆಲಸ ಮಾಡಲು ಬಿಡಲಿಲ್ಲ. ನಮ್ಮ ಕೊಡುಗೆ ಮಂಡ್ಯಗೆ ಏನೂ ಅಂತ ಜನ ನಿರ್ಧಾರ ಮಾಡುತ್ತಾರೆ. ನಿಮ್ಮ ಸರ್ಟಿಫಿಕೇಟ್ ಬೇಕಿಲ್ಲ. ಸೋಮವಾರ ನಡೆದ ಅಹಿತಕರ ಘಟನೆಗೆ ಉಸ್ತುವಾರಿ ಸಚಿವರು ಹಾಗೂ ಕಾಂಗ್ರೆಸ್ ಸರ್ಕಾರವೇ ಕಾರಣ. ಮೊದಲು ನಿಮ್ಮ ಮಂಡ್ಯ ಶಾಸಕರಿಗೆ ಯಾವ ರೀತಿ ನಡೆದುಕೊಳ್ಳಬೇಕು ಎಂದು ಪಾಠ ಮಾಡಿ” ಎಂದು ಕಿಡಿಕಾರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...