ಕೆರಗೋಡು ಧ್ವಜ ವಿವಾದ: ಫೆ.7ರಂದು ಕರೆ ಕೊಟ್ಟಿದ್ದ ಮಂಡ್ಯ ಬಂದ್‌ ವಾಪಸ್‌

Date:

ಸಂಘಪರಿವಾರ, ಬಿಜೆಪಿ ರಾಜಕೀಯಕ್ಕಾಗಿ ಸೃಷ್ಟಿಸಿದ್ದ ಕೆರಗೋಡು ಧ್ವಜ ವಿವಾದವನ್ನು ಖಂಡಿಸಿ ಮಂಡ್ಯದ ಸಮಾನ ಮನಸ್ಕರ ವೇದಿಕೆ  ಫೆಬ್ರವರಿ 7ರಂದು ಮಂಡ್ಯ ಬಂದ್‌ಗೆ ಕರೆಕೊಟ್ಟಿತ್ತು. ಇದೀಗ, ಬಂದ್‌ಅನ್ನು ಹಿಂಪಡೆದಿದೆ. ಮಂಡ್ಯ ಜಿಲ್ಲಾಡಳಿತದ ಮನವಿಗೆ ಸ್ಪಂದಿಸಿರುವ ವೇದಿಕೆ ಬಂದ್‌ ಕರೆಯನ್ನು ಹಿಂಪಡೆದಿದೆ ಎಂದು ವರದಿಯಾಗಿದೆ.

ಕೆರಗೋಡು ಗ್ರಾಮ ಪಂಚಾಯತಿ ಎದುರಿನ ಧ್ವಜಸ್ಥಂಭದಲ್ಲಿ ರಾಷ್ಟ್ರಧ್ವಜ ಹಾರಿಸುವಾಗಿ ಅನುಮತಿ ಪಡೆದಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತರು ಕೇಸರಿ ಧ್ವಜ ಹಾರಿಸಿದ್ದರು. ಅದನ್ನು ತೆರವುಗೊಳಿಸಿ ಅಧಿಕಾರಿಗಳು ರಾಷ್ರಧ್ವಜ ಹಾರಿಸಿದ್ದರು. ಕೇಸರಿ ಧ್ವಜ ತೆರವುಗೊಳಿಸಿದ್ದನ್ನು ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿ, ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯತ್ನಿಸಿತ್ತು. ಅಲ್ಲದೆ, ಫೆ.9ಕ್ಕೆ ಮಂಡ್ಯ ಬಂದ್‌ಗೆ ಹಿಂದುತ್ವ ಕೋಮುವಾದಿ ಸಂಘಟನೆಗಳು ಕರೆಕೊಟ್ಟಿವೆ. ಹಿಂದುತ್ವವಾದಿಗಳ ಬಂದ್‌ ವಿರೋಧಿಸಿ ಸಮಾನ ಮನಸ್ಕರ ವೇದಿಕೆ ಫೆ.7ರಂದು ಮಂಡ್ಯ ಬಂದ್‌ಗೆ ಕರೆಕೊಟ್ಟಿತ್ತು.

ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ್, ಎಸ್‌ಪಿ ಎನ್ ಯತೀಶ್ ನೇತೃತ್ವದಲ್ಲಿ ಸಭೆ ನಡೆದಿದೆ. ಬಂದ್‌ನಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ, ವ್ಯಾಪಾರಿಗಳಿಗೆ ತೊಂದೆರೆಯಾಗುತ್ತದೆ. ಬಂದ್‌ ಮಾಡುವುದು ಬೇಡವೆಂದು ಜಿಲ್ಲಾಡಳಿತ ಮನವಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾಡಳಿತದ ಮನವಿಗೆ ಸ್ಪಂದಿಸಿರುವ ವೇದಿಕೆ, ‘ಫೆ.9ರ ಬಂದ್‌ಗೆ ಅವಕಾಶ ಕೊಡಬಾರದು. ಒಂದು ವೇಳೆ, ಅಂದು ಹಿಂದುತ್ವವಾದಿಗಳು ಬಂದ್‌ ಮಾಡಿದರೆ, ಮತ್ತೊಂದು ದಿನ ಬಂದ್‌ ಮಾಡುತ್ತೇವೆ’ ಎಂಬ ಶರತ್ತಿನ ಮೇಲೆ ಬಂದ್‌ ಕರೆಯನ್ನು ಹಿಂಪಡೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...