ಕೆರಗೋಡು ಧ್ವಜ ವಿವಾದ: ಜನರ ವಿರೋಧ ಅರಿತು ಬಿಜೆಪಿ-ಜೆಡಿಎಸ್‌ ಹಿಂದೆ ಸರಿದಿವೆ: ಸಚಿವ ಚಲುವರಾಯಸ್ವಾಮಿ

Date:

ಕೆರಗೋಡು ಧ್ವಜ ವಿವಾದದಲ್ಲಿ ಸಂಘಪರಿವಾರದ ನಡೆಗೆ ಮಂಡ್ಯದ ಜನರು ವಿರುದ್ಧವಿದ್ದಾರೆ. ಇದು ಅರ್ಥವಾದ ಮೇಲೆ ಮಂಡ್ಯ ಬಂದ್‌ನಿಂದ ಬಿಜೆಪಿ, ಜೆಡಿಎಸ್‌ ಹಿಂದೆ ಸರಿದಿವೆ. ಜೆಡಿಎಸ್‌ ಸಂಪೂರ್ಣವಾಗಿ ದೂರ ಉಳಿದರೆ, ಬಿಜೆಪಿ ನಾಮ್ ಕೆ ವಾಸ್ತೆಗೆ ಪ್ರತಿಭಟನೆ ನಡೆಸಿದೆ ಎಂದು ಬಿಜೆಪಿ-ಜೆಡಿಎಸ್‌ ವಿರುದ್ಧ ಕೃಷಿ ಸಚಿವ ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಅವರು, “ಕೇಸರಿ ಧ್ವಜ ವಿವಾದದಲ್ಲಿ ರಾಜಕೀಯ ಲಾಭ ಪಡೆಯಲು ಬಿಜೆಪಿ-ಜೆಡಿಎಸ್‌ ಯತ್ನಿಸಿದ್ದವು. ಅದರೆ, ಜಿಲ್ಲೆಯ ಜನರು ಅದಕ್ಕೆ ವಿರುದ್ಧವಿದ್ದಾರೆ. ಬಂದ್‌ಗೆ ಬೆಂಬಲ ವ್ಯಕ್ತವಾಗಿಲ್ಲ. ಬಿಜೆಪಿಗರು ಬೈಕ್ ರ್‍ಯಾಲಿ ಮಾಡಿದ್ದಾರೆ. ಎಷ್ಟು ಸಾವಿರ ಜನ ಬಂದಿದ್ದರೋ ನಮಗೆ ಲೆಕ್ಕವಿಲ್ಲ” ಎಂದು ವ್ಯಂಗ್ಯವಾಡಿದ್ದಾರೆ.

“ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ರಾಷ್ಟ್ರಧ್ವಜದ ವಿರುದ್ಧ ಬಿಜೆಪಿಗರು ಘೋಷಣೆ ಕೂಗಿದ್ದಾರೆ. ಕೇಸರಿ ಧ್ವಜ ಹಾರಿಸಲು ಬೇರೆ ಜಾಗ ಇದೆ. ನಮ್ಮ ಮೊದಲನೇ ಆದ್ಯತೆ ರಾಷ್ಟ್ರ, ಸಂವಿಧಾನ, ಪ್ರಜಾಪ್ರಭುತ್ವ. ಆದರೆ, ಕೇಸರಿ ಧ್ವಜ ಹಾರಿಸಿ, ಬಿಜೆಪಿ-ಜೆಡಿಎಸ್‌ ತಪ್ಪು ಮಾಡಿವೆ. ಅವರಿಗೆ ಜನರು ಉತ್ತರ ಕೊಡಬೇಕು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಂಡ್ಯದಲ್ಲಿ ಧರ್ಮಗಳ ನಡುವಿನ ಘರ್ಷಣೆಗೆ ಅವಕಾಶವಿಲ್ಲ. ಇದು ಕುವೆಂಪು ಅವರನ್ನು ಪ್ರೀತಿಸುವ ಜಿಲ್ಲೆ. ಪ್ರಚೋದನೆಗೆ ಇಲ್ಲಿನ ಜನರು ಬಲಿಯಾಗುವುದಿಲ್ಲ. ಮೊನ್ನೆ ದೇವೇಗೌಡರು ಕೇಸರಿ ಶಾಲು ಹಾಕಿದ್ದು ತಪ್ಪು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ-ಜೆಡಿಎಸ್‌ ತಮ್ಮ ತಪ್ಪು ಒಪ್ಪಿಕೊಳ್ಳಲಾಗದೆ, ವ್ಯರ್ಥ ಬಂದ್‌ ಮಾಡಿದ್ದಾರೆ. ಅವರಿಗೆ ಜನರ ಉತ್ತರ ಕೊಡುತ್ತಾರೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...