ಕೇರಳ | ಸಿಪಿಐ(ಎಂ) ಶಾಸಕನಿಗೆ ಕಚೇರಿ ಖಾಲಿ ಮಾಡುವಂತೆ BJP ಕೌನ್ಸಿಲರ್ ತಾಕೀತು

Date:

ತಿರುವನಂತಪುರದ ವಟ್ಟಿಯೂರ್ಕಾವು ಕ್ಷೇತ್ರದ ಶಾಸಕ ವಿ.ಕೆ ಪ್ರಶಾಂತ್ ಅವರಿಗೆ ತಮ್ಮ ಕಚೇರಿಯನ್ನು ಖಾಲಿ ಮಾಡುವಂತೆ ಬಿಜೆಪಿ ಕೌನ್ಸಿಲರ್ ಆರ್ ಶ್ರೀಲೇಖಾ ಅವರು ದುಂಬಾಲು ಬಿದಿದ್ದಾರೆ ಎಂದು ಆರೋಪಿಸಲಾಗಿದೆ. ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ತಿರುವನಂತಪುರಂ ಪುರಸಭೆಯಲ್ಲಿ ಬಿಜೆಪಿ ಗೆಲುವು ಸಾಧಿಸಿ, ಅಧಿಕಾರ ಹಿಡಿದಿದೆ. ಈ ಬೆನ್ನಲ್ಲೇ, ಸಿಪಿಐ(ಎಂ) ಶಾಸಕ ಪ್ರಶಾಂತ್ ಅವರಿಗೆ ಬಿಜೆಪಿ ಕೌನ್ಸಿಲರ್ ಕಚೇರಿ ತೆರವಿಗೆ ತಾಕೀತು ಮಾಡಿದ್ದಾರೆ.

ನಿವೃತ್ತ ಡಿಜಿಪಿ ಶ್ರೀಲೇಖಾ ಅವರು ಇತ್ತೀಚೆಗೆ ನಡೆದ ತಿರುವನಂತಪುರಂ ಪುರಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.

ವಟ್ಟಿಯೂರ್ಕಾವು ಶಾಸಕ ವಿ.ಕೆ ಪ್ರಶಾಂತ್ ಅವರು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದು, “ಬಿಜೆಪಿ ಕೌನ್ಸಿಲರ್ ಆರ್ ಶ್ರೀಲೇಖಾ ಅವರು ದೂರವಾಣಿ ಮೂಲಕ ನನಗೆ ಕರೆ ಮಾಡಿದ್ದರು. ಸಾಸ್ತಮಂಗಲಂನಲ್ಲಿರುವ ಕಾರ್ಪೊರೇಷನ್ ಕಟ್ಟಡದಲ್ಲಿರುವ ನನ್ನ ಕಚೇರಿಯನ್ನು ಖಾಲಿ ಮಾಡುವಂತೆ ಅವರು ದುಂಬಾಲು ಬಿದಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನ್ನ ಕಚೇರಿಯನ್ನು ಖಾಲಿ ಮಾಡುವಂತೆ ಅವರು ನನಗೆ ಕರೆ ಮಾಡಿದ್ದಾರೆ. ಅದೇ ಕಟ್ಟಡದಲ್ಲಿರುವ ಕೌನ್ಸಿಲರ್ ಕಚೇರಿಯಲ್ಲಿ ಸಾಕಷ್ಟು ಸೌಲಭ್ಯಗಳಿಲ್ಲ. ಹೀಗಾಗಿ, ಅವರು ನಮ್ಮ ಕಚೇರಿಯನ್ನು ಆಕ್ರಮಿಸಿಕೊಳ್ಳಲು ಹವಣಿಸುತ್ತಿದ್ದಾರೆ” ಎಂದು ಪ್ರಶಾಂತ್ ಹೇಳಿದ್ದಾರೆ.

“ಕಳೆದ ಏಳು ವರ್ಷಗಳಿಂದ ತಾವು ಅದೇ ಕಟ್ಟಡದಲ್ಲಿ ನನ್ನ ಶಾಸಕರ ಕಚೇರಿ ಕಾರ್ಯನಿರ್ವಹಿಸುತ್ತಿದೆ. ಈ ಹಿಂದೆ ಬಿಜೆಪಿ ಕೌನ್ಸಿಲರ್ ಕೂಡ ಅದೇ ಕಟ್ಟಡದ ಒಂದು ಭಾಗವನ್ನು ಕಚೇರಿಯಾಗಿ ಬಳಸುತ್ತಿದ್ದರು” ಎಂದು ಪ್ರಶಾಂತ್ ವಿವರಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ವಿಜಯ್ ಕೊನೆಯ ಚಿತ್ರ ‘ಜನ ನಾಯಗನ್’ ಮತ್ತು ತಮಿಳುನಾಡಿನ ರಾಜಕಾರಣ

ಒಂದು ವೇಳೆ, ನಾನು ಕಚೇರಿ ಖಾಲಿ ಮಾಡಬೇಕೆಂದರೆ, ಕಾರ್ಯವಿಧಾನದ ಪ್ರಕಾರ ನಿಗಮ ಕಾರ್ಯದರ್ಶಿಯಿಂದ ತೆರವು ನೋಟಿಸ್ ಕೊಡಬೇಕು. ಆದರೆ, ಬಿಜೆಪಿ ಕೌನ್ಸಿಲರ್ ನೇರವಾಗಿ ನನಗೆ ಕರೆ ಮಾಡಿ, ಖಾಲಿ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಇದು, ಪೊಲೀಸ್‌ ಠಾಣೆಯ ಮೆಟ್ಟಿಲೇರುವ ವಿಷಯಗಳನ್ನು ನಿಭಾಯಿಸುವ ರೀತಿಯಲ್ಲಿದೆ” ಎಂದು ಪ್ರಶಾಂತ್ ಹೇಳಿದ್ದಾರೆ.

“ಅವರು ನನ್ನನ್ನು ಸಂಪರ್ಕಿಸುವ ಮೊದಲು ಇತರರೊಂದಿಗೆ ಸಮಾಲೋಚಿಸಿರಬಹುದು. ಮುಂದಿನ ವರ್ಷ (2026) ಮಾರ್ಚ್ ವರೆಗೆ ಜಾಗವನ್ನು ನನಗೆ ಮಂಜೂರು ಮಾಡಲಾಗಿದೆ. ಅದಕ್ಕೂ ಮೊದಲು ಅದನ್ನು ಖಾಲಿ ಮಾಡಲು ಸಾಧ್ಯವಿಲ್ಲ. ಅವರು ತಕ್ಷಣದ ತೆರವು ಬಯಸಿದರೆ, ಅವರು ಕಾನೂನು ಕ್ರಮಗಳನ್ನು ಅನುಸರಿಸಲಿ. ನಾವು ಕಾನೂನುಬದ್ಧವಾಗಿ ಎದುರಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...