ರಷ್ಯಾ-ಉಕ್ರೇನ್ ಯುದ್ಧದ ಮಧ್ಯೆ ಸಿಲುಕಿರುವ ಯುವಕರನ್ನು ಕರೆತನ್ನಿ: ಕೇಂದ್ರಕ್ಕೆ ಕೇರಳ ವಿಪಕ್ಷ ನಾಯಕನ ಆಗ್ರಹ

Date:

ಖಾಸಗಿ ಏಜೆನ್ಸಿಗಳಿಂದ ರಷ್ಯಾದ ಸೇನೆಗೆ ನೇಮಕಗೊಂಡಿರುವ ಭಾರತೀಯ ಯುವಕರನ್ನು ಸುರಕ್ಷಿತವಾಗಿ ಮರಳಿ ಕರೆ ತರುವಂತೆ ಕೇಂದ್ರ ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಬೇಕು ಎಂದು ಕೋರಿ ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ ಡಿ ಸತೀಶನ್ ಸೋಮವಾರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರಿಗೆ ಪತ್ರ ಬರೆದಿದ್ದಾರೆ.

“ಯುದ್ಧ ವಲಯದಲ್ಲಿ ಸಿಲುಕಿರುವ ಕೇರಳದ ಮೂವರು ಯುವಕರು ಸುರಕ್ಷಿತವಾಗಿ ಮರಳುವಂತೆ ಮಾಡಲು ಕ್ರಮ ಕೈಗೊಳ್ಳಬೇಕು. ಮಾನವ ಕಳ್ಳಸಾಗಣೆ ಜಾಲದ ಭಾಗವಾಗಿರುವ ನೇಮಕಾತಿ ಏಜೆನ್ಸಿಗಳ ವಿರುದ್ಧ ತನಿಖೆ ನಡೆಸಬೇಕು” ಎಂದು ಕಾಂಗ್ರೆಸ್ ನಾಯಕ ಪತ್ರದಲ್ಲಿ ಒತ್ತಾಯಿಸಿದ್ದಾರೆ.

“ಕೇರಳದ ಕೆಲವು ಖಾಸಗಿ ನೇಮಕಾತಿ ಕಂಪನಿಗಳು ರಷ್ಯಾದಲ್ಲಿ ಲಾಭದಾಯಕ ಉದ್ಯೋಗಾವಕಾಶಗಳನ್ನು ನೀಡುವುದಾಗಿ ಆಮಿಷವೊಡ್ಡಿ, ಯುದ್ಧ ಪೀಡಿತ ಉಕ್ರೇನ್‌ಗೆ ಕಳುಹಿಸಲು ಯುವಕರನ್ನು ಬಹಿರಂಗವಾಗಿ ನೇಮಕ ಮಾಡಿಕೊಳ್ಳುತ್ತಿರುವುದು ಆಘಾತಕಾರಿಯಾಗಿದೆ” ಎಂದು ಸತೀಶನ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಷ್ಯಾದಲ್ಲಿ ಲಾಭದಾಯಕ ಉದ್ಯೋಗದ ಭರವಸೆಯ ಆಮಿಷಕ್ಕೆ ಒಳಗಾಗಿ ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವವರಲ್ಲಿ ಕೇರಳದ ಮೂವರು ಯುವಕರೂ ಸೇರಿದ್ದಾರೆಂಬುದನ್ನು ತಿಳಿದು ಆತಂಕವಾಗಿದೆ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

“ನೇಮಕಾತಿ ಏಜೆನ್ಸಿಯು 2.5 ಲಕ್ಷ ಸಂಬಳ ನೀಡುವುದಾಗಿ ಭರವಸೆ ನೀಡಿ, ಕೇರಳದ ಯುವಕರನ್ನು ರಷ್ಯಾಕ್ಕೆ ಕರೆದೊಯ್ದಿರುವುದಾಗಿ ಅವರ ಸಂಬಂಧಿಕರು ತಿಳಿಸಿದ್ದಾರೆ” ಎಂದು ವಿ ಡಿ ಸತೀಶನ್ ಪತ್ರದಲ್ಲಿ ತಿಳಿಸಿದ್ದಾರೆ.

“ಯುವಕರು ರಷ್ಯಾಕ್ಕೆ ತೆರಳಿದ ವೇಳೆ ಅವರ ಪಾಸ್‌ಪೋರ್ಟ್‌ ಮತ್ತು ಮೊಬೈಲ್ ಫೋನ್‌ಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದು, ಉಕ್ರೇನ್ ವಿರುದ್ಧ ರಷ್ಯಾಕ್ಕಾಗಿ ಹೋರಾಡಲು ಒತ್ತಾಯಿಸಿದ್ದಾರೆ. ಅವರಲ್ಲಿ ಕೆಲವರು ಗಾಯಗೊಂಡಿದ್ದಾರೆ. ಯುವಕರ ಸುರಕ್ಷತೆಯ ಬಗ್ಗೆ ಆತಂಕವಿದೆ” ಎಂದು ಸತೀಶನ್ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಜೆಪಿಗೆ ಈಗಲೂ ಕೇಜ್ರಿವಾಲ್ ಬಹಳ ಅಪಾಯಕಾರಿ: ಸಂಸದ ಸಂಜಯ್ ರಾವತ್

“ರಷ್ಯಾದಲ್ಲಿ ಕೆಲಸ ಮಾಡಲು ಯುವಕರನ್ನು ಪ್ರೇರೇಪಿಸಿದ್ದು, ಬಳಿಕ ಅವರನ್ನು ಯುದ್ಧಕ್ಕೆ ಕಳುಹಿಸುವ ಕಳ್ಳಸಾಗಣೆ ಜಾಲದ ಭಾಗವಾಗಿದೆ” ಎಂದು ಕಾಂಗ್ರೆಸ್ ನಾಯಕ ಸತೀಶನ್ ಆರೋಪಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...