ಕೇರಳ | ಬಿಜೆಪಿ ಜೊತೆ ಕೈ ಜೋಡಿಸಿದ ಕಾಂಗ್ರೆಸ್ ಸದಸ್ಯರು

Date:

ಕೇರಳದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಗ್ರಾಮ ಪಂಚಾಯತಿಯ ಆಡಳಿತ ರಚನೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಕೌನ್ಸಿಲರ್‌ಗಳು ಪರಸ್ಪರರೊಂದಿಗೆ ಕೈ ಜೋಡಿಸಿದ್ದಾರೆ. ಈ ಬೆಳವಣಿಗೆ ಕೇರಳದ ತ್ರಿಶೂರ್ ಜಿಲ್ಲೆಯ ಮತ್ತತ್ತೂರು ಗ್ರಾಮ ಪಂಚಾಯತಿಯಲ್ಲಿ ನಡೆದಿದೆ.

ಮತ್ತತ್ತೂರು ಗ್ರಾಮ ಪಂಚಾಯತಿಯ ಅಧ್ಯಕ್ಷರ ನೇಮಕದಲ್ಲಿ ಬಿಜೆಪಿ ಜೊತೆ ಕಾಂಗ್ರೆಸ್‌ ಕೌನ್ಸಿಲರ್‌ಗಳು ಕೈ ಜೋಡಿಸಿದ್ದಾರೆ. ಸ್ವತಂತ್ರ ಅಭ್ಯರ್ಥಿ ಟೆಸ್ಸಿ ಜೋಸ್ ಕಲ್ಲರಕ್ಕಲ್ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

ಮತ್ತತ್ತೂರು ಗ್ರಾಮ ಪಂಚಾಯತಿಯ ಒಟ್ಟು 24 ಸ್ಥಾನಗಳಲ್ಲಿ, ಯುಡಿಎಫ್ 8, ಎಲ್‌ಡಿಎಫ್ 10 ಹಾಗೂ ಎನ್‌ಡಿಎ 4 ಸ್ಥಾನಗಳನ್ನು ಗೆದ್ದಿದ್ದವು. ಇಬ್ಬರು ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಈ ಇಬ್ಬರು ಸ್ವತಂತ್ರ ಕೌನ್ಸಿಲರ್‌ಗಳಲ್ಲಿ ಒಬ್ಬರಾದ ಔಸೆಫ್ ಎಂಬವರನ್ನು ಅಧ್ಯಕ್ಷೀಯ ಅಭ್ಯರ್ಥಿಯಾಗಿ ಎಲ್‌ಡಿಎಫ್‌ ನೇಮಿಸಿದರೆ, ಮತ್ತೊಬ್ಬ ಸ್ವತಂತ್ರ ಕೌನ್ಸಿಲರ್ ಟೆಸ್ಸಿ ಅವರನ್ನು ಕಾಂಗ್ರೆಸ್‌ ನೇತೃತ್ವದ ಯುಡಿಎಫ್ ಕಣಕ್ಕಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯುಡಿಎಫ್‌ ಬೆಂಬಲದೊಂದಿಗೆ ಕಣದಲ್ಲಿದ್ದ ಟೆಸ್ಸಿ ಅವರಿಗೆ ಯುಡಿಎಫ್‌ನ 8 ಮತ್ತು ಎನ್‌ಡಿಎ (ಬಿಜೆಪಿ) 4 ಮತಗಳು ಚಲಾವಣೆಯಾಗಿದ್ದು, ಟೆಸ್ಸಿ ಅವರು ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಗ್ರಾಮ ಪಂಚಾಯತಿ ಅಧ್ಯಕ್ಷರ ಆಯ್ಕೆಯಲ್ಲಿ ಕಾಂಗ್ರೆಸ್‌-ಬಿಜೆಪಿ ಪರಸ್ಪರ ಕೈ ಜೋಡಿಸಿವೆ.

ಇನ್ನು, 8 ಮಂದಿ ಕೌನ್ಸಿಲರ್‌ಗಳು ಕಾಂಗ್ರೆಸ್‌ಗೆ ರಾಜೀನಾಮೆ ಕೂಡ ನೀಡಿದ್ದಾರೆ. “ಜಿಲ್ಲಾ ಮತ್ತು ಬ್ಲಾಕ್ ಮಟ್ಟದ ನಾಯಕತ್ವವು ಆಂತರಿಕ ವಿವಾದಗಳನ್ನು ಬಗೆಹರಿಸುವಲ್ಲಿ ವಿಫಲವಾಗಿದೆ. ಅಭ್ಯರ್ಥಿಗ: ಆಯ್ಕೆ ಹಂತದಿಂದಲೇ ಸಮಸ್ಯೆಗಳು ಎದುರಾಗಿದ್ದವು. ಫಲಿತಾಂಶಗಳು ಘೋಷಣೆಯಾದ ಬಳಿಕ ಬಿಕ್ಕಟ್ಟು ಮತ್ತಷ್ಟು ಮುನ್ನೆಲೆ ಬಂದಿತ್ತು. ಆದರೂ, ಸ್ಥಳೀಯ ನಾಯಕತ್ವದಿಂದ ಯಾವುದೇ ಸ್ಪಂದನೆ ದೊರೆತಿಲ್ಲ” ಎಂದು ರಾಜೀನಾಮೆ ನೀಡಿದ ಕಾಂಗ್ರೆಸ್ ಕೌನ್ಸಿಲರ್‌ಗಳಲ್ಲಿ ಒಬ್ಬರಾದ ಲಿಂಟೊ ಪಲ್ಲಿಪರಂಬಿಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅವರ ರಾಜೀನಾಮೆಗಳನ್ನು ಕಾಂಗ್ರೆಸ್‌ ಅಂಗೀಕರಿಸಿಲ್ಲ. ಅವರ ಮನವೊಲಿಸುವ ಪ್ರಯತ್ನದಲ್ಲಿದೆ. ಅಲ್ಲದೆ, ತ್ರಿಶೂರ್ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಟಿ ಎಂ ಚಂದ್ರನ್ ಮತ್ತು ಮಂಡಲ ಅಧ್ಯಕ್ಷ ಶಫಿ ಕಲ್ಲುಪರಂಬಿಲ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಸನ್ನಿ ಜೋಸೆಫ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...