ಕೇರಳ ಶೀಘ್ರ ‘ಕಡು ಬಡತನ ಮುಕ್ತ ರಾಜ್ಯ’ವಾಗಲಿದೆ: ವಿಜಯನ್ ಸರ್ಕಾರ

Date:

ಕಡು ಬಡತನವನ್ನು ಯಶಸ್ವಿಯಾಗಿ ನಿರ್ಮೂಲನೆ ಮಾಡುವ ವಿಷಯದಲ್ಲಿ ಕೇರಳ ದೇಶದಲ್ಲಿ ಮೊದಲ ಸ್ಥಾನದಲ್ಲಿದೆ. ಚೀನಾದ ಬಳಿಕ ವಿಶ್ವದಲ್ಲಿ ಎರಡನೇ ಸ್ಥಾನದಲ್ಲಿದೆ. ಇದು ದೇಶಕ್ಕೆ ಹೆಮ್ಮೆಯ ಕ್ಷಣವಾಗಿದೆ. ಕೇರಳ ಶೀಘ್ರ ಕಡು ಬಡತನ ಮುಕ್ತ ರಾಜ್ಯವಾಗಲಿದೆ ಎಂದು ಕೇರಳ ಸರ್ಕಾರ ಹೇಳಿದೆ.

ಕೇರಳದಲ್ಲಿ ಅತ್ಯಂತ ಬಡತನದ ಸ್ಥಿತಿಯಲ್ಲಿ ವಾಸಿಸುತ್ತಿರುವ 64,006 ಕ್ಕೂ ಹೆಚ್ಚು ಕುಟುಂಬಗಳಿಗೆ ಸರ್ಕಾರವು ಆಹಾರ, ಆರೋಗ್ಯ ರಕ್ಷಣೆ, ಜೀವನೋಪಾಯದ ಮೂಲ ಮತ್ತು ಸುರಕ್ಷಿತ ವಸತಿಯ ನಿರಂತರ ಪೂರೈಕೆಯನ್ನು ಮಾಡುತ್ತಿದೆ. ನವೆಂಬರ್ 1ರಂದು ರಾಜ್ಯ ರಚನೆಯ ದಿನದಂದು ಕೇರಳ ದೇಶದ ಮೊದಲ ‘ಕಡು ಬಡತನ ಮುಕ್ತ ರಾಜ್ಯ’ ಎಂದು ಘೋಷಿಸಲು ಸಜ್ಜಾಗಿದೆ.

ಇದನ್ನು ಓದಿದ್ದೀರಾ? ಹೆಸರಾಯಿತು ಕರ್ನಾಟಕ, ಹಸಿರಾಯಿತೆ ಬದುಕು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಗಿನ ಎಲ್‌ಡಿಎಫ್ ಸರ್ಕಾರದ ಮೊದಲ ಸಚಿವ ಸಂಪುಟವು ತೆಗೆದುಕೊಂಡ ಮೊದಲ ನಿರ್ಧಾರ ತೀವ್ರ ಬಡತನ ನಿರ್ಮೂಲನಾ ಯೋಜನೆ (EPEP) ಆಗಿದೆ. ತೀವ್ರ ಬಡತನವನ್ನು ನಿರ್ಮೂಲನೆ ಮಾಡುವ ಐದು ವರ್ಷಗಳ ಯೋಜನೆಯಾಗಿ ಇದನ್ನು ರೂಪಿಸಲಾಗಿತ್ತು. ಈಗ ನಾವು ನಮ್ಮ ಗುರಿಯ ಶೇ.100ರಷ್ಟು ಸಾಧಿಸಿದ್ದೇವೆ” ಎಂದು ಪಿಟಿಐಗೆ ಕೇರಳ ಗ್ರಾಮೀಣಾಭಿವೃದ್ಧಿ ಸಚಿವ ಎಂಬಿ ರಾಜೇಶ್ ಹೇಳಿದ್ದಾರೆ.

“ರಾಜ್ಯಾದ್ಯಂತ ನಡೆಸಿದ ಸಮೀಕ್ಷೆಯ ಮೂಲಕ ಅತ್ಯಂತ ಬಡವರೆಂದು ಗುರುತಿಸಲ್ಪಟ್ಟ 1,03,099 ವ್ಯಕ್ತಿಗಳನ್ನು ಒಳಗೊಂಡ 64,006 ಕುಟುಂಬಗಳಿಗೆ ಆಹಾರ, ಆರೋಗ್ಯ, ಶಿಕ್ಷಣ, ಜೀವನೋಪಾಯ ಉತ್ತಮಗೊಳಿಸಲಾಗಿದೆ. ಯೋಜನೆಯನ್ನು ರೂಪಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ವಿವಿಧ ಇಲಾಖೆಗಳ ಕಾರ್ಯಾಚರಣೆಗಳನ್ನು ಪ್ರತಿ ಹಂತದಲ್ಲೂ ಪರಿಶೀಲಿಸಿದರು” ಎಂದು ಸಚಿವರು ಹೇಳಿದ್ದಾರೆ.

“ಅಸ್ತಿತ್ವದಲ್ಲಿರುವ ಸರ್ಕಾರಿ ಕಾರ್ಯಕ್ರಮಗಳ ಬಗ್ಗೆ ತಿಳಿದಿಲ್ಲದ ಅಥವಾ ಅವುಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕೆಂದು ತಿಳಿದಿಲ್ಲದ ಅಲೆಮಾರಿಗಳು ಸೇರಿದಂತೆ ಸಮಾಜದ ಅತ್ಯಂತ ಅಂಚಿನಲ್ಲಿರುವ ಮತ್ತು ದುರ್ಬಲ ವರ್ಗಗಳನ್ನು ಗುರುತಿಸಲಾಗಿದೆ. ಈ ಯೋಜನೆಯಡಿಯಲ್ಲಿ ಒಳಗೊಳ್ಳಿಸಲಾಗಿದೆ” ಎಂದೂ ಸಚಿವರು ಹೇಳಿದ್ದಾರೆ.

“ಪ್ರತಿ ಕುಟುಂಬದ ಅಗತ್ಯಗಳಿಗೆ ಅನುಗುಣವಾಗಿ ಮೈಕ್ರೋಪ್ಲಾನ್‌ಗಳನ್ನು ಸಿದ್ಧಪಡಿಸಲಾಗಿದೆ. ಕೆಲವು ಕುಟುಂಬಗಳಿಗೆ ವೈದ್ಯಕೀಯ ಆರೈಕೆಯೇ ಆದ್ಯತೆ. ಇನ್ನು ಕೆಲವರಿಗೆ ಆಹಾರ. ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಮತ್ತು ಆದಾಯದ ಅಗತ್ಯವಿದೆ. ಆಸ್ಪತ್ರೆಗಳಿಗೆ ಹೋಗಲು ಸಹಾಯ ಕೇಳಿದ ವ್ಯಕ್ತಿಗಳು ಸಹ ಇದ್ದರು” ಎಂದು ಸಚಿವರು ವಿವರಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...