ಚುನಾವಣಾ ಭದ್ರತೆಗೆ ಸಿದ್ಧವಾದ ಖಾಕಿಪಡೆ; 1.60 ಲಕ್ಷ ಪೊಲೀಸರಿಂದ ಪಹರೆ

Date:

  • ಮೇ 10 ರ ಮತದಾನದ ದಿನಕ್ಕೆ ಖಾಕಿ ಬಿಗಿ ಭದ್ರತೆ
  • ರಾಜ್ಯಾದ್ಯಂತ ಕಟ್ಟೆಚ್ಚರದ ಕಾನೂನು ಪಾಲನೆ

ಮೇ 10ರಂದು ನಡೆಯಲಿರುವ ಮತದಾನ ಪ್ರಕ್ರಿಯೆಯನ್ನೂ ಒಳಗೊಂಡಂತೆ ರಾಜ್ಯ ಚುನಾವಣಾ ಭದ್ರತೆಗೆ ಖಾಕಿ ಪಡೆ ಸರ್ವ ಸನ್ನದ್ಧವಾಗಿದೆ.

ಮತದಾನದ ದಿನಕ್ಕೂ ಮುಂಚಿತವಾಗಿ ಕಾರ್ಯಾಚರಣೆ ಆರಂಭಿಸಲಿರುವ ಪೊಲೀಸ್ ಇಲಾಖೆ ಇದಕ್ಕೆ ಅಗತ್ಯ ಪ್ರಕ್ರಿಯೆಗಳನ್ನು ಮಾಡಿ ಮುಗಿಸಿಕೊಂಡಿದೆ. ಚುನಾವಣಾ ಭದ್ರತೆ ಸಲುವಾಗಿಯೇ 1.60 ಲಕ್ಷ ಪೊಲೀಸರನ್ನು ನಿಯೋಜಿಸಲಾಗಿದ್ದು ಮತ ಏಣಿಕೆ ಮುಗಿಯುವವರೆಗೂ ಇವರು ಕಾರ್ಯ ನಿರ್ವಹಿಸಲಿದ್ದಾರೆ ಎಂದು ಪೊಲೀಸ್ ಉನ್ನತ ಮೂಲಗಳು ತಿಳಿಸಿವೆ.

ಭದ್ರತಾ ಕಾರ್ಯದಲ್ಲಿ 304 ಡಿವೈಎಸ್ಪಿ, 991 ಪೊಲೀಸ್ ಇನ್ಸ್ ಪೆಕ್ಟರ್, 2,610 ಪಿಎಸ್ಐ, 5,803 ಎಎಸ್ಐ ಸೇರಿದಂತೆ 84,000 ಸಿಬ್ಬಂದಿ ನಿಯೋಜನೆ ಮಾಡಿದ್ದೇವೆ. ಇವರೊಂದಿಗೆ 8.5 ಸಾವಿರ ಹೋಂಗಾರ್ಡ್‌ಗಳನ್ನು, 650 ಸಿಆರ್‌ಪಿಎಫ್‌ ತುಕಡಿ, ಕೆಎಸ್ಆರ್‌ಪಿ ತುಕಡಿಗಳ ನಿಯೋಜನೆ ಮಾಡಲಾಗಿದೆ. ಹಾಗೆಯೇ ಹೆಚ್ಚಿನ ಭದ್ರತೆಗಾಗಿ ನೆರೆಯ ತಮಿಳುನಾಡು, ಆಂಧ್ರಪ್ರದೇಶ, ಗೋವಾ ಸಿಬ್ಬಂದಿ ಕರೆಸಿಕೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೂಕ್ಷ್ಮ ಮತಗಟ್ಟೆಗಳ ಮಾಹಿತಿ

ಈ ಬಾರಿ ಚುನಾವಣೆಯಲ್ಲಿ11,617 ಮತಗಟ್ಟೆಗಳು ಸೂಕ್ಷ್ಮ ಮತಗಟ್ಟೆಗಳಾಗಿ ಪರಿಗಣಿಸಲಾಗಿದ್ದು, ವರುಣಾ, ಚಾಮುಂಡೇಶ್ವರಿ, ಹಾಸನ, ಚನ್ನಪಟ್ಟಣ, ಶಿಗ್ಗಾಂವಿ, ರಾಮನಗರಗಳಲ್ಲಿ ಹೆಚ್ಚಿನ ನಿಗಾ ಇರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?:ದಾವಣಗೆರೆ | ನೀತಿ ಸಂಹಿತೆ ಉಲ್ಲಂಘನೆ; 14 ಮಂದಿ…

ಇನ್ನು ರಾಜಧಾನಿ ಬೆಂಗಳೂರಿನಲ್ಲೂ ಭದ್ರತೆಗೆ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗಿದೆ. ಇಲ್ಲಿ 16 ಸಾವಿರ ಪೊಲೀಸರು, ಕೆಎಸ್ಆರ್‌ಪಿ ಹಾಗೂ ಹೋಮ್ ಗಾರ್ಡ್‌ಗಳು ಕೆಲಸ ಮಾಡಲಿದ್ದಾರೆ ಎಂದು ಉನ್ನತಾಧಿಕಾರಿಗಳು ಹೇಳಿದ್ದಾರೆ.

ನಗರದಾದ್ಯಂತ ಒಟ್ಟು 7916 ಮತಗಟ್ಟೆಗಳಿವೆ. ಇದರಲ್ಲಿ 1907ನ್ನು ಅತಿಸೂಕ್ಷ್ಮ ಪ್ರದೇಶಗಳೆಂದು ಗುರುತಿಸಲಾಗಿದೆ. ಅತಿಸೂಕ್ಷ್ಮ ಪ್ರದೇಶಗಳಲ್ಲಿ ಬಿಎಸ್ ಎಫ್, ಆರ್ ಪಿ ಎಫ್ , ಸಿಆರ್‌ಪಿಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಹಾಗೆಯೇ ರಾಜ್ಯಾದ್ಯಂತ ಚುನಾವಣಾ ನೀತಿ ಸಂಹಿತಿ ಘೋಷಣೆಯಾದ ಬಳಿಕ 230 ಕೋಟಿ ಮೌಲ್ಯದ ವಸ್ತುಗಳು, 105 ಕೋಟಿ ನಗದು ವಶಕ್ಕೆ ಪಡೆಯಲಾಗಿದೆ.

ಇಲ್ಲಿಯವರೆಗೆ 53,406 ವ್ಯಕ್ತಿಗಳ ವಿರುದ್ಧ ಬಾಂಡ್ ಓವರ್, ಭದ್ರತಾ ಪ್ರಕರಣ ಉಲ್ಲಂಘಿಸಿದ 115 ಪ್ರಕರಣ ದಾಖಲಿಸಲಾಗಿದೆ. ಹಾಗೆಯೇ 714 ಜನರ ವಿರುದ್ಧ ಗಡಿಪಾರು ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರು ನಗರದಲ್ಲೇ 10ಕೋಟಿ ನಗದು 28.5 ಕೆಜಿ ಚಿನ್ನ, 140 ಕೆಜಿ ಬೆಳ್ಳಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...