ಕೆಎಚ್ಐಆರ್‌ಸಿಟಿ ಯೋಜನೆ | ಎಂ ಬಿ ಪಾಟೀಲ್‌ರಿಂದ ಪಾತ್ಯಕ್ಷಿಕೆ ವೀಕ್ಷಣೆ; ‌1000 ಎಕರೆಯಲ್ಲಿ ಅಭಿವೃದ್ಧಿ ಉದ್ದೇಶ

Date:

ಬೆಂಗಳೂರು ನಗರದ ಸಮೀಪ ಅಭಿವೃದ್ಧಿಪಡಿಸಲು ಉದ್ದೇಶಿಸಿರುವ ಕೆಎಚ್ಐಆರ್ (KHIR – Knowledge, Health, Innovation and Research) ಸಿಟಿಯ ವಿನ್ಯಾಸ ಮತ್ತು ರೂಪುರೇಷೆ ಕುರಿತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರು ಬೋಸ್ಟನ್‌ ಕನ್ಸಲ್ಟೆನ್ಸಿ ಗ್ರೂಪ್ (ಬಿಸಿಜಿ) ಸಿದ್ಧಪಡಿಸಿರುವ ಪ್ರಾತ್ಯಕ್ಷಿಕೆಯನ್ನು ಗುರುವಾರ ವೀಕ್ಷಿಸಿದರು.

ಜೊತೆಗೆ, ಅಧಿಕಾರಿಗಳು ಮತ್ತು ಪರಿಣತರೊಂದಿಗೆ ಯೋಜನೆಯ ಸಂಬಂಧ ಮೊದಲ ಹಂತದ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಉದ್ದೇಶಿತ ಕೆಎಚ್ಐಆರ್ ಸಿಟಿಯಲ್ಲಿ ಸಂಶೋಧನೆ, ನಾವೀನ್ಯತೆ ಮತ್ತು ಮೂಲ ಮಾದರಿಗಳ ಅಭಿವೃದ್ಧಿಗೆ (ಪ್ರೋಟೋಟೈಪ್ಸ್) ಒತ್ತು ಕೊಡಲಾಗುವುದು” ಎಂದರು.

“ಇಲ್ಲಿ ತಯಾರಿಕಾ ಚಟುವಟಿಕೆಗಳು ನಡೆಯುವುದಿಲ್ಲ. ಮೊದಲ ಹಂತದಲ್ಲಿ ಒಟ್ಟು 1,000 ಎಕರೆಯಲ್ಲಿ ಈ ಸಿಟಿ ಬರಲಿದ್ದು, ತಲಾ 200-300 ಎಕರೆಗಳಂತೆ ಹಂತಹಂತವಾಗಿ ಅಭಿವೃದ್ಧಿಪಡಿಸಬೇಕು ಎಂಬ ಸಲಹೆಯನ್ನು ತಜ್ಞರು ನೀಡಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೆಎಚ್ಐಆರ್ ಸಿಟಿ ಸಂಪೂರ್ಣವಾಗಿ ಖಾಸಗಿ ಉದ್ದಿಮೆಗಳ ಹೂಡಿಕೆಯಿಂದ ಆಗಲಿದೆ. ಸರಕಾರವು ಇದಕ್ಕೆ ಭೂಮಿಯನ್ನು ಒದಗಿಸಲಿದೆ. ಈ ಸಂಬಂಧ ಜಗತ್ತಿನ ಬೇರೆಬೇರೆ ದೇಶಗಳಲ್ಲಿ ಇರುವ ಇಂತಹ ಸಿಟಿಗಳ ಅಧ್ಯಯನ ಮಾಡಲಾಗಿದೆ” ಎಂದು ವಿವರಿಸಿದರು.

“ಉದ್ದೇಶಿತ ಸಿಟಿಯು ರಸ್ತೆ, ಮೆಟ್ರೋ, ಸಬ್‌ಅರ್ಬನ್ ರೈಲಿನ ತರಹದ ಅತ್ಯುತ್ತಮ ಸಂಪರ್ಕ ಜಾಲ ಹೊಂದಿರಬೇಕಾಗುತ್ತದೆ. ಜೊತೆಗೆ ನಗರದಿಂದ ಒಂದು ಗಂಟೆ ಕಾಲದ ಪ್ರಯಾಣದಲ್ಲಿ ಈ ಸಿಟಿಯನ್ನು ತಲುಪುವಂತೆ ಇರಬೇಕು ಎನ್ನುವ ಅಭಿಪ್ರಾಯ ಕೇಳಿ ಬಂದಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೇಸಿಗೆ ಬೇಗ ಬಂದಿದೆ; ಜೀವಜಲಕ್ಕೆ ತತ್ವಾರ ತಂದಿದೆ

“ಈ ಸಿಟಿಯ ಶೇ 15ರಷ್ಟು ಜಾಗದಲ್ಲಿ ಸಂಶೋಧನಾ ವಿ.ವಿ.ಗಳು, ಶೈಕ್ಷಣಿಕ ಸಂಸ್ಥೆಗಳು, ಶೇ.15ರಷ್ಟು ಪ್ರದೇಶದಲ್ಲಿ ಆರೋಗ್ಯಸೇವಾ ಉದ್ದಿಮೆಗಳು, ಶೇ.20ರಷ್ಟು ಜಾಗದಲ್ಲಿ ನಾನಾ ಉದ್ಯಮಗಳ ಆರ್ & ಡಿ ಕೇಂದ್ರಗಳು ಮತ್ತು ಕಾರ್ಪೊರೇಟ್ ಕಚೇರಿಗಳು ಮತ್ತು ಶೇ.10ರಷ್ಟು ಜಾಗದಲ್ಲಿ ಸ್ಟಾರ್ಟಪ್ಸ್, ಶೇ.20ರಷ್ಟು ಜಾಗದಲ್ಲಿ ವಸತಿ ಸಮುಚ್ಚಯಗಳು, ಶೇ.15ರಷ್ಟು ಪ್ರದೇಶದಲ್ಲಿ ವಾಣಿಜ್ಯ ಅಂಗಡಿ ಮುಂಗಟ್ಟುಗಳು ಮತ್ತು ಶೇ.5ರಷ್ಟು ಜಾಗದಲ್ಲಿ ಸರಕಾರಿ ಕಚೇರಿಗಳು ಹಾಗೂ ನಾಗರಿಕ ಸೇವಾಕೇಂದ್ರಗಳು ತಲೆ ಎತ್ತಲಿವೆ” ಎಂದು ಅವರು ಮಾಹಿತಿ ನೀಡಿದರು.

“ಮೊದಲ ಹಂತದ ಸಾವಿರ ಎಕರೆಯಲ್ಲಿ ಶೇ.35ರಷ್ಟು ಪ್ರದೇಶವು ಹಸಿರು ಹೊದಿಕೆಗೆ ಮೀಸಲಿಡಬೇಕು ಎಂದು ಸಲಹೆ ಬಂದಿದೆ. ಅಲ್ಲದೆ ತಲಾ ಶೇ.5ರಷ್ಟು ಜಾಗವನ್ನು ರಸ್ತೆಗಳಿಗೆ ಮತ್ತು ಸಾಮಾನ್ಯ ನಾಗರಿಕ ಸೇವೆಗಳಿಗೆ ಇಡಬೇಕು. ಶೇ.55ರಷ್ಟು ಜಾಗವನ್ನು ಕೆಎಚ್ಐಆರ್ ಸಿಟಿಗಾಗಿ ಬಳಸಿಕೊಳ್ಳಬೇಕು ಎಂದು ಪರಿಣತರು ಹೇಳಿದ್ದಾರೆ” ಎಂದು ಪಾಟೀಲ್ ಹೇಳಿದರು.

“ಉದ್ದೇಶಿತ ಸಿಟಿಯ ನಿರ್ಮಾಣಕ್ಕಾಗಿ ಸರಕಾರ ಮತ್ತು ಮಾಸ್ಟರ್ ಡೆವಲಪರ್ ನಡುವೆ ಸಮನ್ವಯತೆ ಇರುವಂತೆ ನೋಡಿಕೊಳ್ಳಲು ವಿಶೇಷ ಸಂಸ್ಥೆಯೊಂದನ್ನು (ಎಸ್ಪಿವಿ) ಸ್ಥಾಪಿಸಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಜತೆಗೆ ಹೂಡಿಕೆ ಪ್ರೋತ್ಸಾಹಿಸಲು ಆರು ಬಗೆಯ ಪ್ರೋತ್ಸಾಹಕ ಕ್ರಮಗಳ ಬಗ್ಗೆ ಪರಿಶೀಲನೆ ನಡೆದಿದೆ” ಎಂದು ತಿಳಿಸಿದರು.

ಬೋಸ್ಟನ್‌ ಕನ್ಸಲ್ಟನ್ಸಿ ಗ್ರೂಪ್ ನ ಹಿರಿಯ ಸಲಹೆಗಾರ ರಾಂಚ್ ಕಿಮ್ಬಾಲ್, ಕಂಪನಿಯ ಮೂಲಸೌಕರ್ಯ ವಿಭಾಗದ ಮುಖ್ಯಸ್ಥ ಸುರೇಶ್ ಸುಬುಧಿ ಮತ್ತು ಅಭಿವೃದ್ಧಿ ತಜ್ಞ ಅದಿಲ್ ಇಕ್ರಂ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿದ್ದರು. ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಕೈಗಾರಿಕಾ ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...