ಸಂತ್ರಸ್ತೆಯ ಅಪಹರಣ ಪ್ರಕರಣ | ವಿಚಾರಣೆಗೆ ಹಾಜರಾಗದ ಭವಾನಿ ರೇವಣ್ಣ ಕಾರು ಚಾಲಕ; ನಾಪತ್ತೆ

Date:

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಅಪಹರಣ ಪ್ರಕರಣ ಸಂಬಂಧ ಸಂಸದರ ತಾಯಿ ಭವಾನಿ ರೇವಣ್ಣ ಅವರ ಕಾರು ಚಾಲಕನಿಗೆ ವಿಶೇಷ ತನಿಖಾ ದಳ (ಎಸ್ಐಟಿ)ದ ತನಿಖೆ ಸಂಕಷ್ಟ ಎದುರಾಗಿದೆ.

ಈ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣ ಅವರ ಕಾರು ಚಾಲಕ ಅಜಿತ್‌ಗೆ ಎರಡು ಬಾರಿ ಎಸ್‌ಐಟಿ ನೋಟಿಸ್ ಜಾರಿಗೊಳಿಸಿತ್ತು. ಆದರೆ ಈ ನೋಟಿಸ್‌ಗೆ ಪ್ರತಿಕ್ರಿಯಿಸದೆ ನಾಪತ್ತೆಯಾಗಿರುವ ಅಜಿತ್‌ ಪತ್ತೆಗೆ ಹಾಸನ, ಮಂಡ್ಯ ಹಾಗೂ ಮೈಸೂರು ಸೇರಿದಂತೆ ಇತರೆಡೆ ಎಸ್‌ಐಟಿ ಹುಡುಕಾಟ ನಡೆಸಿದೆ ಎಂದು ತಿಳಿದು ಬಂದಿದೆ.

ಮೈಸೂರು ಜಿಲ್ಲೆ ಕೆ.ಆರ್‌.ನಗರ ತಾಲೂಕಿನ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಅಜಿತ್ ಪಾತ್ರ ವಹಿಸಿರುವ ಆರೋಪ ಕೇಳಿ ಬಂದಿದೆ. ಇದೇ ಪ್ರಕರಣದಲ್ಲಿ ಮಾಜಿ ಸಚಿವ ರೇವಣ್ಣ ಬಂಧನದ ಬಳಿಕ ಅಜಿತ್‌ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಹೀಗಾಗಿ ವಿಚಾರಣೆಗೆ ಬರುವಂತೆ ಹೊಳೆನರಸೀಪುರ ತಾಲೂಕಿನಲ್ಲಿರುವ ಅಜಿತ್‌ ಮನೆಗೆ ತೆರಳಿ ಎಸ್‌ಐಟಿ ಅಧಿಕಾರಿಗಳು ನೋಟಿಸ್‌ ಅಂಟಿಸಿದ್ದರು. ಆದರೆ ವಿಚಾರಣೆಗೆ ಮಾತ್ರ ಕಾರು ಚಾಲಕ ಆಗಮಿಸದೆ ನಾಪತ್ತೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನೊಂದೆಡೆ ಅಜಿತ್ ಸಂಪರ್ಕಿಸಲು ಅವರ ಕುಟುಂಬ ಸದಸ್ಯರ ಮೂಲಕ ಎಸ್‌ಐಟಿ ಪ್ರಯತ್ನ ವಿಫಲವಾಗಿದೆ. ಕೊನೆಗೆ ಕಾರು ಚಾಲಕನ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಿ ಅಧಿಕಾರಿಗಳು ಕಾರ್ಯಾಚರಣೆಗಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ಲೈಂಗಿಕ ದೌರ್ಜನ್ಯ ಹಗರಣ | ಪ್ರಜ್ವಲ್ ರೇವಣ್ಣನಿಗೆ ‘ಎಚ್ಚರಿಕೆ ಪತ್ರ’ ಬರೆದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ

ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ಬಳಿಗೆ ತೆರಳಿದ್ದ ಕಾರು ಚಾಲಕ ಅಜಿತ್, ಆಕೆಯ ಬಳಿ ತೆರಳಿ ಬಲವಂತದ ಹೇಳಿಕೆ ನೀಡುವಂತೆ ತಿಳಿಸಿದ್ದ. ಅಜಿತ್ ಹೇಳಿದಂತೆ ಸಂತ್ರಸ್ತೆ ಹೇಳಿಕೆ ನೀಡಿದ್ದರು. ಆ ಹೇಳಿಕೆಯನ್ನು ತನ್ನ ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿಕೊಂಡಿದ್ದ. ಆ ಬಳಿಕ ಆ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿತ್ತು. ಈ ಹಿನ್ನೆಲೆಯಲ್ಲಿ ಕಾರು ಚಾಲಕನಿಗೂ ಎಸ್‌ಐಟಿ ನೋಟಿಸ್ ಜಾರಿಗೊಳಿಸಿತ್ತು. ಈಗ ನಾಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.

ನೋಟಿಸ್‌ಗೆ ಉತ್ತರಿಸದ ಭವಾನಿ ರೇವಣ್ಣ?

ಇನ್ನು ಇದೇ ಅಪಹರಣ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೀಡಿದ್ದ ನೋಟಿಸ್‌ಗಳಿಗೆ ಭವಾನಿ ರೇವಣ್ಣ ಕೂಡ ಉತ್ತರಿಸಿಲ್ಲ ಎಂದು ತಿಳಿದು ಬಂದಿದೆ.

ಅಪಹರಣ ಪ್ರಕರಣದ ಎಫ್‌ಐಆರ್‌ನಲ್ಲಿ ಭವಾನಿ ರೇವಣ್ಣರವರ ಹೆಸರು ಕೂಡಾ ಉಲ್ಲೇಖವಾಗಿತ್ತು. ಈ ಹಿನ್ನಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಹೊಳೇನರಸೀಪುರದಲ್ಲಿ ಮನೆಗೆ ತೆರಳಿ ಭವಾನಿ ಅವರಿಗೆ ಎರಡು ಬಾರಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಆದರೆ, ಇದುವರೆಗೆ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ತಿಳಿದುಬಂದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...