ಯೋಗ್ಯತೆ ಇಲ್ಲವೆಂದರೆ ಚುನಾವಣೆಗೆ ಹೋಗೋಣ; ರಾಜಣ್ಣ ವಿರುದ್ಧ ಡಿಕೆಸು ಕಿಡಿ

Date:

ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲಾದ ಕಾಂಗ್ರೆಸ್‌, ಇದೀಗ ಒಳಜಗಳಕ್ಕಿಳಿದಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹುದ್ದೆಗಳ ಬಗ್ಗೆ ಪಕ್ಷದ ಸಚಿವರು ಹಾಗೂ ಮಠಗಳ ಸ್ವಾಮೀಜಿಗಳು ಮಾತನಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಬಣಗಳ ಹೆಸರಿನಲ್ಲಿ ನಡೆಯುತ್ತಿದ್ದ ಆಂತರಿಕ ಕಲಹ ಬಹಿರಂಗಗೊಂಡಿದ್ದು, ಕಾಂಗ್ರೆಸ್‌ ನಾಯಕರು ಒಬ್ಬರ ಮೇಲೊಬ್ಬರು ಕಿಡಿಕಾರುತ್ತಿದ್ದಾರೆ.

ಮೂರು ಉಪಮುಖ್ಯಮಂತ್ರಿಗಳ ಹುದ್ದೆಗೆ ಸಚಿವ ಕೆ.ಎನ್ ರಾಜಣ್ಣ, ಸತೀಶ್‌ ಜಾರಕಿಹೊಳಿ, ಪರಮೇಶ್ವರ ಬೇಡಿಕೆ ಇಡುತ್ತಿದ್ದರೆ, ಮುಖ್ಯಮಂತ್ರಿ ಸ್ಥಾನವನ್ನು ಡಿ.ಕೆ ಶಿವಕುಮಾರ್‌ಗೆ ಬಿಟ್ಟುಕೊಡಿ ಎಂದು ಸಿದ್ದರಾಮಯ್ಯ ಎದುರು ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿ ಬೇಡಿಕೆ ಇಟ್ಟಿದ್ದರು. ಇದು ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.

ಸ್ವಾಮೀಜಿ, ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರುತ್ತಿರುವ ಸಚಿವ ಕೆ.ಎನ್ ರಾಜಣ್ಣ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಡಿಕೆ ಶಿವಕುಮಾರ್ ತ್ಯಜಿಸಬೇಕು ಎಂದು ಹೇಳಿದ್ದಾರೆ. ಅವರ ಹೇಳಿಕೆಗೆ ತೀವ್ರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಂಸದ ಡಿ.ಕೆ ಸುರೇಶ್, “ಉತ್ತಮ ಆಡಳಿತ ನಡೆಸಬೇಕೆಂದು ಡಿಕೆ ಶಿವಕುಮಾರ್‌ಗೆ ಹೈಕಮಾಂಡ್ ಜವಾಬ್ದಾರಿ ನೀಡಿದೆ. ಅವರಿಗೆ ಯೋಗ್ಯತೆ ಇಲ್ಲವೆಂದು ಹೇಳುವುದಾದರೆ, ಚುನಾವಣೆಗೆ ಹೋಗುವುದು ವಾಸಿ. ನಾವೆಲ್ಲರೂ ಚುನಾವಣೆಗೆ ಹೋಗೋಣ” ಎಂದು ಆಕ್ರೋಶ ವ್ಯಕ್ತಪಡಿಸಿಸದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಡಿಕೆ ಶಿವಕುಮಾರ್ ಅವರಿಗೆ ಜವಾಬ್ದಾರಿ ಕೊಟ್ಟಿರುವುದು ಪಕ್ಷದ ವರಿಷ್ಠರು. ಯಾರೂ ಶಾಶ್ವತ ಅಲ್ಲ, ಯಾವ ಹುದ್ದೆಯೂ ಶಾಶ್ವತ ಅಲ್ಲ. ಹೇಳಿಕೆ ಕೊಡುತ್ತಿರುವವರು ಹಿಂದೆ ತಿರುಗಿ ಅವರ ಬೆನ್ನು ನೋಡಿಕೊಳ್ಳಬೇಕು” ಎಂದು ಕಿಡಿಕಾರಿದ್ದಾರೆ.

“ಮುಖ್ಯಮಂತ್ರಿ ಸ್ಥಾನದ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ. ಈಗ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಆ ಸ್ಥಾನ‌ ಖಾಲಿಯಾದ ಮೇಲೆ ಆ ಹುದ್ದೆ ಚರ್ಚೆಗೆ ಬರುತ್ತದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...