‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂಬುದು ಗೊತ್ತಾಗಿ ಬಿಜೆಪಿಯಿಂದ ಎಲ್ಲರಿಗೂ ಕಿರುಕುಳ: ಡಿ ಕೆ ಶಿವಕುಮಾರ್

Date:

ಲೋಕಸಭೆ ಚುನಾವಣೆಯಲ್ಲಿ ಸೋಲಿನ ಭೀತಿಯಿಂದಾಗಿ ಕೇಂದ್ರ ಬಿಜೆಪಿ ಸರ್ಕಾರ, ಕಾಂಗ್ರೆಸ್ ಮತ್ತು ಕಮ್ಯುನಿಷ್ಟ್ ಪಕ್ಷ ಸೇರಿದಂತೆ ವಿರೋಧ ಪಕ್ಷಗಳಿಗೆ ಕಿರುಕುಳ ನೀಡುತ್ತಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.

ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, “1800 ಕೋಟಿ ತೆರಿಗೆ ಪಾವತಿಸಬೇಕು ಎಂದು ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್ ಪಕ್ಷಕ್ಕೆ ನೋಟಿಸ್ ಜಾರಿ ಮಾಡಿದೆ. ಇದು ಪ್ರಜಾಪ್ರಭುತ್ವ ದೇಶ. ಆದರೂ ಬಿಜೆಪಿ ಸರ್ಕಾರ ಅಧಿಕಾರಿಗಳ ಮೂಲಕ ವಿರೋಧ ಪಕ್ಷಗಳಿಗೆ ಕಿರುಕುಳ ನೀಡುತ್ತಿದೆ” ಎಂದು ಆರೋಪಿಸಿದರು.

“ಸೂರ್ಯ ಮುಳುಗುತ್ತಾನೆ, ಮತ್ತೆ ಹುಟ್ಟುತ್ತಾನೆ. ಇಲ್ಲಿ ಯಾವುದೂ ಶಾಶ್ವತವಲ್ಲ. ಕಾಂಗ್ರೆಸ್ ಹಾಗೂ ಇಂಡಿಯಾ ಮೈತ್ರಿಕೂಟಕ್ಕೆ ಬಿಜೆಪಿ ಸರ್ಕಾರ ಬೆದರಿದೆ. ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ಅವರಿಗೆ ಅರಿವಾಗಿದೆ. ಹೀಗಾಗಿ ಅವರು ಎಲ್ಲರಿಗೂ ಕಿರುಕುಳ ನೀಡುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನನಗೂ ನೋಟಿಸ್ ಬಂದಿದೆ

“ನನ್ನ ವಿರುದ್ಧದ ಪ್ರಕರಣ ಮುಕ್ತಾಯವಾಗಿದ್ದರೂ ನಿನ್ನೆ ರಾತ್ರಿ ನನಗೆ ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್ ಜಾರಿ ಮಾಡಲಾಗಿದೆ. ಕರ್ನಾಟಕದಿಂದ ಆಯ್ಕೆಯಾಗಿರುವ ಹಾಲಿ ಕೇಂದ್ರ ಸಚಿವರು ಸೇರಿದಂತೆ ಅನೇಕ ಬಿಜೆಪಿ ನಾಯಕರ ವಿರುದ್ಧವೂ ಪ್ರಕರಣಗಳಿವೆ. ಕಳೆದ ನಾಲ್ಕೈದು ವರ್ಷಗಳಿಂದ ಆ ಪ್ರಕರಣಗಳಲ್ಲಿ ಯಾವುದೇ ವಿಚಾರಣೆ, ನೋಟಿಸ್, ಆರೋಪಪಟ್ಟಿ ಸಲ್ಲಿಕೆ, ಕ್ರಮ ಇಲ್ಲವಾಗಿದೆ. ಕೇವಲ ಕಾಂಗ್ರೆಸ್ ನಾಯಕರನ್ನು ಮಾತ್ರ ಗುರಿ ಮಾಡಲಾಗುತ್ತಿದೆ. ಬಿಜೆಪಿ ಸೇರಿದರೆ ಮಾತ್ರ ಬಿ ರಿಪೋರ್ಟ್ ಸಲ್ಲಿಕೆ ಮಾಡಿ ಅವರ ವಿರುದ್ಧ ಪ್ರಕರಣ ಮುಚ್ಚಿಹಾಕಲಾಗುತ್ತದೆ” ಎಂದು ತಿಳಿಸಿದರು.

ಕೇಂದ್ರ ಸಚಿವ ಅಮಿತ್ ಶಾ ಅವರು ಚನ್ನಪಟ್ಟಣದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು ಡಿ.ಕೆ. ಸಹೋದರರನ್ನು ಟಾರ್ಗೆಟ್ ಮಾಡಲಾಗುತ್ತಿದೆಯೇ ಎಂದು ಕೇಳಿದಾಗ, “ನಾವು ಬಲಿಷ್ಠವಾದಷ್ಟು ನಮಗೆ ಹೆಚ್ಚು ಶತ್ರುಗಳು, ನಾವು ಬಲಿಷ್ಠವಾದಷ್ಟು ನಮಗೆ ಹೆಚ್ಚು ಅಧಿಕಾರ. ನಮಗೆ ಇದು ಹೊಸತಲ್ಲ. ಅಮಿತ್ ಶಾ ಅವರಾದರೂ ಬರಲಿ, ಪ್ರಧಾನಮಂತ್ರಿಗಳಾದರೂ ಬರಲಿ. ನಾವು ರಾಜಕೀಯವಾಗಿ ದೇವೇಗೌಡರು, ಅವರ ಪುತ್ರ ಕುಮಾರಸ್ವಾಮಿ, ಸೊಸೆ ಹಾಗೂ ಮೊಮ್ಮಗನನ್ನು ಎದುರಿಸಿದ್ದೇವೆ. ನಮ್ಮ ಜನಕ್ಕೆ ಪ್ರಜ್ಞೆ ಇದೆ” ಎಂದರು

ಪಕ್ಷದ ಲಕ್ಷ್ಮಣ ರೇಖೆ ಯಾರೂ ದಾಟುವಂತಿಲ್ಲ

ಕೋಲಾರದ ಅಭ್ಯರ್ಥಿ ಘೋಷಣೆಯಾಗಿರುವ ಬಗ್ಗೆ ಕೇಳಿದಾಗ, “ನಾನು ಮುನಿಯಪ್ಪ, ಬೇರೆ ನಾಯಕರ ಜತೆ ಚರ್ಚೆ ಮಾಡಿದ್ದು, ಎಲ್ಲರೂ ತಮ್ಮ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಲ್ಲಿ ಗುಂಪು ರಾಜಕೀಯಕ್ಕೆ ಅವಕಾಶವಿಲ್ಲ. ಶಿಸ್ತು ಇಲ್ಲಿ ಬಹಳ ಮುಖ್ಯ. ಯಾವುದೇ ಸಚಿವರು, ಶಾಸಕರು ಪಕ್ಷದ ಲಕ್ಷ್ಮಣ ರೇಖೆ ದಾಟಲು ಸಾಧ್ಯವಿಲ್ಲ ಎಂದು ಹೇಳಿದ್ದೇವೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...