ವಿದ್ಯಾರ್ಥಿಗಳಿಗೆ ಆಡಳಿತ, ರಾಜಕೀಯದ ಅರಿವು ಮುಖ್ಯ: ಸಚಿವ ಸಂತೋಷ್ ಲಾಡ್

Date:

“ವಿದ್ಯಾರ್ಥಿ ಜೀವನ ಪ್ರತಿಯೊಬ್ಬರ ಬದುಕಿನಲ್ಲೂ ಮುಖ್ಯ. ಶಾಲಾ ಶಿಕ್ಷಣದೊಂದಿಗೆ ನಮ್ಮ ಆಡಳಿತ ವ್ಯವಸ್ಥೆ, ರಾಜಕೀಯ ಪದ್ದತಿಗಳನ್ನು ಅರ್ಥೈಸಿಕೊಳ್ಳಬೇಕು” ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್  ಹೇಳಿದರು.

ಅವರು ಇಂದು ಮಧ್ಯಾಹ್ನ ವಿಧಾನಮಂಡಲ ಅಧಿವೇಶನ ವೀಕ್ಷಣೆಗಾಗಿ ತಮ್ಮ ಮತಕ್ಷೇತ್ರ ಕಲಘಟಗಿಯ ಸರಕಾರಿ ಪದವಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದಿಂದ ಆಗಮಿಸಿದ್ದ ವಿದ್ಯಾರ್ಥಿಗಳಿಗೆ ಎರಡು ಸದನಗಳ ಕಾರ್ಯಕಲಾಪ ಪರಿಚಯಿಸಿ, ವಿಧಾನಮಂಡಲ ಅಧಿವೇಶನ ಮತ್ತು ಸುವರ್ಣಸೌಧ ನಿರ್ಮಾಣದ ಬಗ್ಗೆ ಮಾಹಿತಿ ನೀಡಿ, ತಮ್ಮ ಕಚೇರಿ ಸಭಾಂಗಣದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ, ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಧಾನಮಂಡಲ ಅಧಿವೇಶನವು ವಿದ್ಯಾರ್ಥಿಗಳು ಸೇರಿದಂತೆ ಅಧಿವೇಶನಕ್ಕೆ ಆಗಮಿಸುವ ಎಲ್ಲರಿಗೂ ಸಂಸದೀಯ ವ್ಯವಸ್ಥೆ, ಪ್ರಜಾಪ್ರಭುತ್ವದ ಜ್ಞಾನ ನೀಡುತ್ತದೆ. ಮನುಷ್ಯ ರಾಜಕೀಯ ಜೀವಿ. ಬಲಿಷ್ಠ ಭಾರತ ನಿರ್ಮಾಣ ಆಗಬೇಕಾದರೆ ಇಂದಿನ ಯುವ ಸಮುದಾಯ ಪ್ರಾಮಾಣಿಕವಾದ ಸಮಾಜ ಸೇವೆಯ ದೀಕ್ಷೆ ತೊಡಬೇಕು” ಎಂದು ತಿಳಿಸಿದರು.

“ರಾಜಕೀಯ ಪಕ್ಷ, ಆಡಳಿತ, ಸರ್ಕಾರ, ಮಂತ್ರಿಮಂಡಳ, ಅಧಿಕಾರಶಾಹಿ ಬಗ್ಗೆ ಅರಿವು ಹೊಂದಬೇಕು. ಪ್ರತಿಯೊಬ್ಬರೂ ಮತದಾನ, ಚುನಾವಣೆ ಮುಂತಾದ ರಾಜಕೀಯ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದರಿಂದ ಉತ್ತಮ ಜನಪ್ರತಿನಿಧಿ, ಉತ್ತಮ ಸರ್ಕಾರ ಹೊಂದಲು, ಅಭಿವೃದ್ಧಿ ಸಾಧಿಸಲು ಸಾಧ್ಯವಾಗುತ್ತದೆ” ಎಂದು ಸಚಿವ ಸಂತೋಷ್ ಲಾಡ್ ಅವರು ವಿದ್ಯಾರ್ಥಿಗಳಿಗೆ ಹೇಳಿದರು.

“ನನ್ನ ಕ್ಷೇತ್ರದ ನೂರಾರು ಜನ ಅಧಿವೇಶನ ವೀಕ್ಷಣೆಗಾಗಿ ಬೆಳಗಾವಿ ಸುವರ್ಣಸೌಧಕ್ಕೆ ಆಗಮಿಸುತ್ತಾರೆ. ವಿಶೇಷವಾಗಿ ವಿದ್ಯಾರ್ಥಿಗಳಿಗೆ ಅಧಿವೇಶನ ವೀಕ್ಷಿಸಲು ನಮ್ಮ ಸಿಬ್ಬಂದಿಗಳ ಸಹಾಯ, ಮಕ್ಕಳಿಗೆ ಉಪಾಹಾರ, ವಿಧಾನ ಮಂಡಲ ಗ್ರಂಥಾಲಯ ವೀಕ್ಷಣೆಗೆ ಅವಕಾಶ ಮಾಡಿದ್ದೇನೆ. ಈ ಮೂಲಕ ವಿದ್ಯಾರ್ಥಿಗಳಲ್ಲಿ ಸೇವೆಯ ಆಸಕ್ತಿ, ಅಭಿರುಚಿ ಬೆಳೆಸುವ ನನ್ನ ಸಣ್ಣ ಪ್ರಯತ್ನವಿದು” ಎಂದು ಸಚಿವರು ಹೇಳಿದರು.

ಕಾಲೇಜು ವಿದ್ಯಾರ್ಥಿಗಳು ಬೆಳಗ್ಗೆ ಸುವರ್ಣಸೌಧಕ್ಕೆ ಆಗಮಿಸಿದ ತಕ್ಷಣ, ಮೊದಲ ಮಹಡಿಯಲ್ಲಿ ಸ್ಥಾಪಿಸಿರುವ ವಿಶೇಷ ಕೊಠಡಿಯಲ್ಲಿ ಸಂವಿಧಾನದ ಮೌಲ್ಯಗಳು, ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಪಡೆದುಕೊಂಡರು. ಬಳಿಕ ಈ ಕುರಿತು ಪ್ರಸ್ತುತಪಡಿಸಿದ ಸಾಕ್ಷ್ಯಚಿತ್ರ ವೀಕ್ಷಿಸಿದರು.

ಈ ಸಂದರ್ಭದಲ್ಲಿ ಸಚಿವರ ಆಪ್ತ ಕಾರ್ಯದರ್ಶಿ ಪಿ.ಕುಮಾರ, ಉಪ ಕಾರ್ಮಿಕ ಆಯುಕ್ತ ನಾಗೇಶ, ಸಹಾಯಕ ಕಾರ್ಮಿಕ ಆಯುಕ್ತೆ ಎಂ.ಬಿ.ಅನ್ಸಾರಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಮಲ್ಲಿಕಾರ್ಜುನ ಜೋಗುರ, ಹಿರಿಯ ಕಾರ್ಮಿಕ ನಿರೀಕ್ಷಕ ಮಂಜುನಾಥ ಅಸ್ತಿಕಟ್ಟಿ, ಕಲಘಟಗಿ ಸರಕಾರಿ ಪದವಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಮಾಲತಿ ಹಿರೇಮಠ, ಗ್ರಂಥಪಾಲಕಿ ಭಾರತಿ ದಂಡಿನ ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...