ಕೋಲಾರ | ಇಬ್ಬರ ಜಗಳದಲ್ಲಿ ಮೂರನೇಯವರಿಗೆ ಲಾಭ; ಗೌತಮ್‌ಗೆ ಕಾಂಗ್ರೆಸ್‌ ಟಿಕೆಟ್

Date:

ಲೋಕಸಭಾ ಚುನಾವಣೆ ಘೋಷಣೆಯಾಗಿದ್ದು, ಕರ್ನಾಟಕದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆಯಲಿದೆ. ರಾಜ್ಯದ 28 ಕ್ಷೇತ್ರಗಳ ಪೈಕಿ 27 ಕ್ಷೇತ್ರಗಳಿಗೆ ಈಗಾಗಲೇ ಕಾಂಗ್ರೆಸ್‌ ಟಿಕೆಟ್ ಘೋಷಿಸಿತ್ತು. ಆದರೆ, ಕಗ್ಗಂಟಾಗಿ ಉಳಿದಿದ್ದ ಕೋಲಾರ ಕ್ಷೇತ್ರದಲ್ಲಿ ಎಲ್ಲ ಬಣಗಳನ್ನು ಬದಿಗೊತ್ತಿರುವ ಕಾಂಗ್ರೆಸ್‌, ಅಚ್ಚರಿ ಎಂಬಂತೆ ಕೋಲಾರದ ಮಾಜಿ ಮೇಯರ್ ವಿಜಯ್ ಕುಮಾರ್ ಪುತ್ರ ಕೆ ವಿ ಗೌತಮ್‌ ಅವರಿಗೆ ಟಿಕೆಟ್‌ ಘೋಷಿಸಿದೆ.

ಶುಕ್ರವಾರ ರಾಜ್ಯದ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದ ಕಾಂಗ್ರೆಸ್‌, ಕೋಲಾರ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಿಸಿರಲಿಲ್ಲ. ಇದೀಗ, ಆ ಕ್ಷೇತ್ರಕ್ಕೂ ಅಭ್ಯರ್ಥಿಯನ್ನು ಘೋಷಿಸಿಸುವ ಮೂಲಕ ಎಲ್ಲ 28 ಕ್ಷೇತ್ರಗಳಿಗೂ ಟಿಕೆಟ್‌ ಘೋಷಿಸಿದಂತಾಗಿದೆ.

ಕೋಲಾರದಲ್ಲಿ ಲೋಕಸಭೆ ಚುನಾವಣಾ ಟಿಕೆಟ್‌ ಸಂಬಂಧ ಕಾಂಗ್ರೆಸ್‌ನಲ್ಲಿ ಸಚಿವ ಕೆ ಎಚ್‌ ಮುನಿಯಪ್ಪ ಮತ್ತು ಮಾಜಿ ಸ್ಪೀಕರ್ ರಮೇಶ್‌ ಕುಮಾರ್‌ ಬಣಗಳ ನಡುವೆ ಜಗ್ಗಾಟ ನಡೆಯುತ್ತಿತ್ತು. ಮುನಿಯಪ್ಪ ಅವರು ತಮ್ಮ ಅಳಿಯ ಚಿಕ್ಕ ಪೆದ್ದಣ್ಣ ಅವರಿಗೆ ಟಿಕೆಟ್ ಕೊಡಿಸಲು ಯತ್ನಿಸುತ್ತಿದ್ದರು. ಹನುಮಂತಯ್ಯಗೆ ಟಿಕೆಟ್ ನೀಡಬೇಕೆಂದು ರಮೇಶ್ ಕುಮಾರ್ ಬಣ ಒತ್ತಾಯಿಸಿತ್ತು. ಆದರೆ, ಈ ಎರಡೂ ಬಣಗಳ ಕಿತ್ತಾಟದಿಂದಾಗಿ, ಯಾರಿಗೆ ಟಿಕೆಟ್ ನೀಡಬೇಕು ಎಂಬುದು ಕಾಂಗ್ರೆಸ್‌ಗೆ ತಲೆನೋವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚೆಗೆ ಸಿಎಂ ಮತ್ತು ಡಿಸಿಎಂ ನೇತೃತ್ವದಲ್ಲಿ ನಡೆದಿದ್ದ ಸಭೆಯಲ್ಲಿಯೂ ಜಿಲ್ಲೆಯ ಕೆಲವು ಶಾಸಕರು ಚಿಕ್ಕ ಪೆದ್ದಣ್ಣ ಅವರಿಗೆ ಟಿಕೆಟ್ ನೀಡಿದರೆ, ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದ್ದರು. ಇತ್ತ, ‘ರಮೇಶ್ ಕುಮಾರ್ ಮತ್ತು ನಾನು ಒಗ್ಗೂಡಿದರೆ, ಕ್ಷೇತ್ರದಲ್ಲಿ ಕಾಂಗ್ರೆಸ್‌ಅನ್ನು ಗೆಲ್ಲಿಸಬಹುದು’ ಎಂದು ಮುನಿಯಪ್ಪ ಹೇಳಿದ್ದರು.

ಕೋಲಾರ ಟಿಕೆಟ್‌ ಸಮಸ್ಯೆ ಜಟಿಲವಾಗುತ್ತಿರುವುದನ್ನು ಅರಿತ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್, ರಮೇಶ್ ಕುಮಾರ್ ಬಣದ ಹನುಮಂತಯ್ಯ ಮತ್ತು ಮುನಿಯಪ್ಪ ಬಣದ ಚಿಕ್ಕಪೆದ್ದಣ್ಣ ಇಬ್ಬರಿಗೂ ಟಿಕೆಟ್ ನೀಡದೇ, ಬಣಗಳಿಂದ ದೂರ ಉಳಿದಿದ್ದ ಗೌತಮ್ ಅವರಿಗೆ ಟಿಕೆಟ್‌ ನೀಡಿ ಅಚ್ಚರಿ ಮೂಡಿಸಿದೆ. ಎಲ್ಲ ಬಣಗಳ ಮುಖಂಡರೂ, ಕಾರ್ಯಕರ್ತರು ಕ್ಷೇತ್ರದಲ್ಲಿ ಗೌತಮ್ ಗೆಲುವಿಗಾಗಿ ಕೆಲಸ ಮಾಡಬೇಕೆಂಬ ಸಂದೇಶ ರವಾನಿಸಿದೆ.

ಆದರೆ, ಮೂರನೇ ವ್ಯಕ್ತಿಯನ್ನು ಕಣಕ್ಕಿಳಿಸಿ, ಪಕ್ಷ ಸೋತರೆ ಅದಕ್ಕೆ ನಾನು ಜವಾಬ್ದಾರಿಯಲ್ಲ ಎಂದು ಈಗಾಗಲೇ ಸಚಿವ ಮುನಿಯಪ್ಪ ಎಚ್ಚರಿಕೆ ನೀಡಿರುವುದನ್ನು ಇಲ್ಲಿ ಗಮನಿಸಬಹುದು. ರಮೇಶ್‌ ಕುಮಾರ್‌ ಬಣ ಯಾರೇ ಅಭ್ಯರ್ಥಿಯಾದರೂ ನಾವು ಬೆಂಬಲಿಸುತ್ತೇವೆ ಎಂದಿದ್ದಾರೆ. ಆದರೆ ರಮೇಶ್‌ ಕುಮಾರ್‌ ಮಾತ್ರ ಈ ಬಗ್ಗೆ ಎಲ್ಲಿಯೂ ತುಟಿ ಬಿಚ್ಚಿಲ್ಲ.

ಲೋಕಸಭೆ ಚುನಾವಣೆಗೂ ಮುನ್ನವೇ ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಅದರಂತೆ, ಕೋಲಾರ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲದೊಂದಿಗೆ ಕಣಕ್ಕಿಳಿದಿರುವ ಜೆಡಿಎಸ್ ಅಭ್ಯರ್ಥಿ ಎಂ. ಮಲ್ಲೇಶ್ ಬಾಬು ಸ್ಪರ್ಧೆಯಲ್ಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...