ಕೋಲಾರ – ವರುಣಾ: ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸಲಿರುವ ಸಿದ್ದರಾಮಯ್ಯ; ರಾಹುಲ್ ಜೊತೆ ಚರ್ಚೆಯಷ್ಟೇ ಬಾಕಿ

Date:

  • ಅಭ್ಯರ್ಥಿಗಳ ಎರಡನೇ ಅಥವಾ ಮೂರನೇ ಪಟ್ಟಿಯಲ್ಲಿ ಕೋಲಾರ ಸಹ ಇರಲಿದೆ
  • ಸಿದ್ದರಾಮಯ್ಯ ಹೆಸರು ಮೊದಲ ಪಟ್ಟಿಯಲ್ಲಿ ಇರಬೇಕೆಂಬ ಕಾರಣ ಪಟ್ಟಿ ಬಿಡುಗಡೆ ವಿಳಂಬ

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರು ವರುಣಾ ಕ್ಷೇತ್ರದ ಜೊತೆಗಿದೆಯಾದರೂ, ಅವರು ಕೋಲಾರ ಕ್ಷೇತ್ರದಿಂದಲೂ ಸ್ಪರ್ಧಿಸುವುದು ಖಚಿತವಾಗಿದೆ. ಈದಿನ.ಕಾಮ್ ಜೊತೆಗೆ ಮಾತನಾಡಿದ ಉನ್ನತ ಮೂಲಗಳು ಇದನ್ನು ಖಚಿತಪಡಿಸಿದ್ದಾರೆ.

2018ರಲ್ಲಿ ತಮ್ಮ ಸ್ವಕ್ಷೇತ್ರ ವರುಣಾವನ್ನು ಪುತ್ರ ಯತೀಂದ್ರಗೆ ಬಿಟ್ಟುಕೊಟ್ಟು ಪಕ್ಕದ ಚಾಮುಂಡೇಶ್ವರಿಯಲ್ಲಿ ಸ್ಪರ್ಧಿಸಲು ಬಯಸಿದ್ದ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಲ್ಲಿ ಸೋಲು ಉಂಟಾಗುತ್ತದೆಂಬುದರ ವಾಸನೆ ಗೊತ್ತಾಗಿತ್ತು. ಹಾಗಾಗಿ ಬಾದಾಮಿಯಿಂದಲೂ ಸ್ಪರ್ಧಿಸಿ ಅಲ್ಲಿ ಗೆದ್ದಿದ್ದರು. ಎರಡೂ ಕಡೆ ಅವರನ್ನು ಸೋಲಿಸಲು ವಿರೋಧ ಪಕ್ಷಗಳು ಮತ್ತು ಸ್ವಪಕ್ಷದ ವಿರೋಧಿಗಳು ಕೈ ಜೋಡಿಸಿದ್ದರೆಂಬುದು ‘ಓಪೆನ್ ಸೀಕ್ರೆಟ್’.

ಹಾಗಾಗಿಯೇ ಈ ಸಾರಿ ಕ್ಷೇತ್ರ ಆಯ್ಕೆ ಮಾಡಿಕೊಳ್ಳುವಾಗಲೂ ಅವರ ವಿರೋಧಿಗಳೆಲ್ಲಾ ಒಟ್ಟು ಸೇರಿ ಸೋಲಿಸುವ ಸಾಧ್ಯತೆ ಇದ್ದೇ ಇದೆ ಎಂಬುದು ಅವರಿಗೂ ಗೊತ್ತಿತ್ತು. ಹಾಗಾಗಿಯೇ ಅವರ ಕೋಲಾರ ಜಿಲ್ಲೆಯ ಆಪ್ತ ಶಾಸಕರ ಒತ್ತಾಸೆಯ ಮೇರೆಗೆ ಕೋಲಾರ ವಿಧಾನಸಭಾ ಕ್ಷೇತ್ರದತ್ತ ಚಿತ್ತ ಹರಿದಿತ್ತು. ಆದರೆ, ಮೇಲಿನ ಕಾರಣದಿಂದಲೇ ಕೋಲಾರದಲ್ಲಿ ಸ್ಪರ್ಧಿಸುವುದು ಬೇಡ ಎಂಬ ಸಲಹೆಯನ್ನು ರಾಹುಲ್ ಗಾಂಧಿಯವರು ಸಿದ್ದರಾಮಯ್ಯನವರಿಗೆ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆ ಸಲಹೆಯನ್ನು ಪರಿಗಣಿಸಿರುವ ಮಾಜಿ ಮುಖ್ಯಮಂತ್ರಿ ತಮ್ಮ ಸ್ವಕ್ಷೇತ್ರ ವರುಣಾದಿಂದಲೇ ಸ್ಪರ್ಧಿಸಲು ತೀರ್ಮಾನಿಸಿದ್ದಾರಾದರೂ, ಅದರ ಜೊತೆಗೆ ಕೋಲಾರದಿಂದಲೂ ಸ್ಪರ್ಧಿಸಲೂ ನಿರ್ಧರಿಸಿದ್ದಾರೆ. ಸಿದ್ದರಾಮಯ್ಯನವರ ಹೆಸರು ಮೊದಲ ಪಟ್ಟಿಯಲ್ಲಿ ಇರಬೇಕೆಂಬ ಕಾರಣದಿಂದಲೇ ಪಟ್ಟಿ ಬಿಡುಗಡೆ ಮೂರು ದಿನಗಳ ಕಾಲ ತಡವಾಯಿತು ಎಂದು ಕಾಂಗ್ರೆಸ್ಸಿನ ಮೂಲಗಳು ಈದಿನ.ಕಾಮ್ ಗೆ ತಿಳಿಸಿದರು.

ಆದರೆ ಈ ಮಧ್ಯೆ ರಾಹುಲ್ ಗಾಂಧಿಯವರು ಸೂರತ್ ಕೋರ್ಟಿನ ತೀರ್ಪು ಹಾಗೂ ಸಂಸತ್ ಸ್ಥಾನದ ಅನರ್ಹತೆಯ ಕಾರಣದಿಂದ ಬೇರೆ ಕೆಲಸಗಳಲ್ಲಿ ವ್ಯಸ್ತರಾದ್ದರಿಂದ, ಈ ಬಗ್ಗೆ ಚರ್ಚೆ ಮಾಡಲಾಗಿಲ್ಲ. ಹಾಗಾಗಿ ಮೊದಲ ಪಟ್ಟಿಯಲ್ಲಿ ವರುಣಾ ಮಾತ್ರ ಇದ್ದು, ಎರಡನೇ ಅಥವಾ ಮೂರನೇ ಪಟ್ಟಿಯಲ್ಲಿ ಕೋಲಾರ ಸಹ ಇರಲಿದೆ ಎಂಬುದು ಖಚಿತಪಟ್ಟಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...