ಬಿಜೆಪಿ ಟಿಕೆಟ್‌ಗಾಗಿ ಹಣ | ಚೈತ್ರಾ ಗ್ಯಾಂಗ್‌ನ ವಂಚನೆ ಪ್ರಕರಣ ಬಳಿಕ ಮತ್ತೊಂದು ಪ್ರಕರಣ ತಡವಾಗಿ ಬೆಳಕಿಗೆ

Date:

  • ಕನಕಗಿರಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಗಾಯತ್ರಿ ತಿಮ್ಮಾರೆಡ್ಡಿ
  • ಕಳೆದ ಜು.19ರಂದು ಬೆಂಗಳೂರಿನ ಅಶೋಕ ನಗರ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್

ಉದ್ಯಮಿ ಗೋವಿಂದ ಪೂಜಾರಿ ಎಂಬುವವರಿಗೆ ಬೈಂದೂರು ಕ್ಷೇತ್ರದ ಬಿಜೆಪಿ ಶಾಸಕ ಟಿಕೆಟ್‌ ಕೊಡಿಸುವುದಾಗಿ ಕೋಟ್ಯಾಂತರ ರೂಪಾಯಿ ಹಣ ಕಳೆದುಕೊಂಡ ಘಟನೆ ಈಗಾಗಲೇ ರಾಜ್ಯಾದ್ಯಂತ ಸುದ್ದಿಯಾಗಿರುವ ಬೆನ್ನಲ್ಲೇ, ಕೊಪ್ಪಳ ಜಿಲ್ಲೆಯಲ್ಲೂ ಬಿಜೆಪಿ ಮುಖಂಡನಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಕೊಪ್ಪಳ ಜಿಲ್ಲೆಯ ಕನಕಗಿರಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಗಾಯತ್ರಿ ತಿಮ್ಮಾರೆಡ್ಡಿ ಅವರಿಗೆ ಟಿಕೆಟ್​ ಕೊಡಿಸುವಲ್ಲಿ ಅವರ ಪತಿ ಜಿ‌. ತಿಮ್ಮಾರೆಡ್ಡಿ ಗಿಲ್ಲೆಸೂಗುರ್ ಹಲವು ಪ್ರಯತ್ನ ಮಾಡಿದ್ದರು. ಈ ವೇಳೆ ಟಿಕೆಟ್​ ಕೊಡಿಸುತ್ತೇವೆಂದು ನಂಬಿಸಿ, ಮೂವರು ಚೈತ್ರಾ ಕುಂದಾಪುರ ಗ್ಯಾಂಗ್ ರೀತಿಯಲ್ಲೆ ವಂಚನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಕನಕಗಿರಿ ಪರಿಶಿಷ್ಟ ಮೀಸಲು ಕ್ಷೇತ್ರದ ಆಕಾಂಕ್ಷಿಯಾಗಿದ್ದ ಗಾಯತ್ರಿ ತಿಮ್ಮಾರೆಡ್ಡಿ ಅವರು ಬಿಜೆಪಿ ಟಿಕೆಟ್​ಗಾಗಿ ಪ್ರಯತ್ನಿಸಿದ್ದರು. ಈ ವೇಳೆ ದೆಹಲಿ ಮೂಲದ ವಿಶಾಲ್ ನಾಗ್ ಮತ್ತು ಬೆಂಗಳೂರಿನ ಜೀತು, ಗೌರವ್ ಟಿಕೆಟ್ ಕೊಡಿಸುತ್ತೇವೆಂದು ಸುಮಾರು 21 ಲಕ್ಷ ಹಣ ವಂಚನೆ ಮಾಡಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ನಡೆದು ಸುಮಾರು 3-4 ತಿಂಗಳುಗಳಾಗಿದ್ದು, ಚೈತ್ರಾ ಪ್ರಕರಣದ ಹಿನ್ನೆಲೆಯಲ್ಲಿ ಈ ಪ್ರಕರಣ ಈಗ ಮುನ್ನೆಲೆಗೆ ಬಂದಿದೆ. ಈ ಸಂಬಂಧ ಮೂವರ ವಿರುದ್ಧ ಬೆಂಗಳೂರಿನ ಅಶೋಕ ನಗರ ಠಾಣೆಯಲ್ಲಿ ತಿಮ್ಮಾರೆಡ್ಡಿ ಅವರು ಕಳೆದ ಜುಲೈ 19ರಂದು ದೂರು ದಾಖಲಿಸಿದ್ದು, ಎಫ್‌ಐಆರ್ ಕೂಡ ದಾಖಲಾಗಿದೆ.

ashok nagar

ಈ ಬಗ್ಗೆ ಈ ದಿನ.ಕಾಮ್ ಜೊತೆಗೆ ಮಾತನಾಡಿರುವ ಬಿಜೆಪಿ ಮುಖಂಡ ಜಿ‌. ತಿಮ್ಮಾರೆಡ್ಡಿ ಗಿಲ್ಲೆಸೂಗುರ್, “ಈ ಬೆಳವಣಿಗೆ ನಡೆದು ಸುಮಾರು ಮೂರು-ನಾಲ್ಕು ತಿಂಗಳು ಆಗಿದೆ. ಬೆಂಗಳೂರಿನ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೇನೆ. ಅಲ್ಲದೇ, ಈ ಬಗ್ಗೆ ಸಂಬಂಧಪಟ್ಟವರ ಜೊತೆಗೆ ಮಾತುಕತೆಯೂ ಆಗಿದೆ. ಚೈತ್ರಾ ಕುಂದಾಪುರ ಅವರ ವಂಚನೆ ಪ್ರಕರಣದ ಹಿನ್ನೆಲೆಯಲ್ಲಿ ನಮ್ಮ ಘಟನೆ ಕೂಡ ಚರ್ಚೆಯಾಗುತ್ತಿರಬಹುದು. ಯಾವುದಕ್ಕೂ ನಾಳೆ(ಸೆ.16) ಸಂಜೆಯೊಳಗೆ ಹಣ ವಾಪಸ್ ನೀಡುವ ಮಾತುಕತೆ ಮುಗಿಯಬಹುದು” ಎಂದು ಮಾಹಿತಿ ನೀಡಿದ್ದಾರೆ.

ಇದೀಗ ಬಿಜೆಪಿ ಹೆಸರಿನಲ್ಲಿ ಟಿಕೆಟ್ ಕೊಡುವ ಭರವಸೆ ನೀಡಿ, ವಂಚಿಸಿರುವ ಇಂತಹ ಪ್ರಕರಣಗಳು ಒಂದೊಂದಾಗಿ ಬೆಳಕಿಗೆ ಬರುತ್ತಿದ್ದು, ಚುನಾವಣೆಯ ವೇಳೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಟಿಕೆಟ್​ಗಾಗಿ ಬಹುದೊಡ್ಡ ‘ಡೀಲ್’ಗಳು ನಡೆದಿದೆಯಾ ಎಂಬ ಪ್ರಶ್ನೆಗಳು ರಾಜಕೀಯ ವಲಯದಲ್ಲಿ ಹೊಸ ಚರ್ಚೆ ಹಾಗೂ ಅನುಮಾನಕ್ಕೆ ವೇದಿಕೆಯೊಗಿಸಿದೆ.

ಈ ಪ್ರಕರಣದಲ್ಲಿ ಆಗಿದ್ದೇನು?
ಈ ಪ್ರಕರಣದಲ್ಲೂ ಚೈತ್ರಾ ಕುಂದಾಪುರ ಗ್ಯಾಂಗ್ ರೀತಿಯಲ್ಲೇ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ.

ದೆಹಲಿ ಮೂಲದ ವಿಶಾಲ್ ನಾಗ್ ಮತ್ತು ಬೆಂಗಳೂರಿನ ಜೀತು, ಗೌರವ್ ಎಂಬುವರಿಂದ ವಂಚನೆ ನಡೆದಿದೆ. ಸುಮಾರು 21 ಲಕ್ಷ ರೂಪಾಯಿ ಹಣ ಪಂಗನಾಮ ಹಾಕಿರುವುದಾಗಿ ವರದಿಯಾಗಿದೆ.

‘ತಮಗೆ ಅಮಿತ್ ಶಾ ಪರಿಚಯವಿದೆ. ರಾಜ್ಯದಲ್ಲಿ ಸಮೀಕ್ಷೆ ಮಾಡುತ್ತಿದ್ದೇವೆ. ಅದರಲ್ಲಿ ನಿಮ್ಮ ಪತ್ನಿಯ ಹೆಸರು ಮುಂಚೂಣಿಗೆ ತರುತ್ತೇವೆ’ ಎಂದು ವಂಚಕರು ಯಾಮಾರಿಸಿದ್ದಾರೆ.

ತಾನು ಕೇಂದ್ರ ಬಿಜೆಪಿ ಚುನಾವಣೆ ಸಮೀಕ್ಷೆ ಮುಖ್ಯಸ್ಥನೆಂದು ಪರಿಚಯಿಸಿಕೊಂಡಿದ್ದ ವಿಶಾಲ್ ನಾಗ್‌ನನ್ನು ನಂಬಿ ಆಕಾಂಕ್ಷಿಯ ಪತಿ ತಿಮ್ಮಾರೆಡ್ಡಿ, ಬ್ಯಾಂಕ್ ಖಾತೆಗೆ 19 ಲಕ್ಷ ಹಾಗೂ ನಗದು ರೂಪದಲ್ಲಿ ಎರಡು ಲಕ್ಷ ರೂಪಾಯಿ ನೀಡಿದ್ದಾರೆ. ಕೊನೆಗೆ ಟಿಕೆಟ್ ಸಿಗದೇ ಹಣವೂ ವಾಪಸ್ ಬಾರದ ಹಿನ್ನೆಲೆಯಲ್ಲಿ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...