ಕೆಪಿಸಿಸಿ ಅಂದರೆ ಕರ್ನಾಟಕ ಪ್ರದೇಶ ಕಮಿಷನ್ ಕಮಿಟಿ: ಸಿ ಟಿ ರವಿ ವ್ಯಂಗ್ಯ

Date:

ಪಂಚರಾಜ್ಯಗಳ ಚುನಾವಣೆಗೆ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಎಟಿಎಂ ಮಾಡಿಕೊಂಡಿದ್ದಾರೆ. ಅಂಬಿಕಾಪತಿ, ಬಿಲ್ಡರ್ ಸಂತೋಷ್ ಕೃಷ್ಣಪ್ಪ ಅವರ ಮನೆಯಲ್ಲಿ ಸಿಕ್ಕ ಹಣವೇ ಇದಕ್ಕೆ ಸಾಕ್ಷಿ. ಹಾಗಾಗಿ, ಕೆಪಿಸಿಸಿ ಅಂದರೆ ಕರ್ನಾಟಕ ಪ್ರದೇಶ ಕಮಿಷನ್ ಕಮಿಟಿ ಎಂದು ಮಾಜಿ ಸಚಿವ ಸಿಟಿ ರವಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಿಎಂ ಸಿದ್ದರಾಮಯ್ಯ ಭ್ರಷ್ಟಾಚಾರ ಮುಕ್ತವಾದ ಸರ್ಕಾರ ಅಂತ ಯಾವಾಗಲೂ ಹೇಳುತ್ತಿರುತ್ತಾರೆ. ಆದರೆ ಅವರ ಮೂಗಿನ ಕೆಳಗೆ ಈ ರೀತಿ ಘಟನೆ ನಡೆದಿದೆ. ಕೆಪಿಸಿಸಿ ಅಂದರೆ ಕರ್ನಾಟಕ ಪ್ರದೇಶ ಕಮಿಷನ್ ಕಮಿಟಿ. 42 ಕೋಟಿ ಈಗ ಸಿಕ್ಕಿದೆಯಲ್ವಾ ಅದಕ್ಕೆ ಮೊದಲು ಉತ್ತರ ಕೊಡಿ’ ಎಂದು ಆಗ್ರಹಿಸಿದ್ದಾರೆ.

ಪತ್ತೆಯಾದ ಹಣದ ಬಗ್ಗೆ ಸಿಬಿಐ ತನಿಖೆ ಆಗಲೇಬೇಕು. 100 ಜನ ಬೇನಾಮಿ ಈ ಹಣಕ್ಕೆ ಇದ್ದಾರೆ. ಇಬ್ಬರು ಸಿಕ್ಕಿದ್ದಾರೆ. ಉಳಿದ 98 ಜನ ಬೇನಾಮಿಯ ಹೆಸರು ಹೊರ ಬರಬೇಕು. ಲೋಕಸಭಾ ಚುನಾವಣೆಗೆ 2 ಸಾವಿರ ಕೋಟಿ ಕೊಡುತ್ತೇನೆ ಅನ್ನೋದು ಚರ್ಚೆ ಆಗುತ್ತಿದೆ. ಬ್ರಾಂಡ್ ಬೆಂಗಳೂರು ಅಂದ್ರೆ ಭ್ರಷ್ಟ ಬೆಂಗಳೂರನ್ನ ಮಾಡಿಕೊಳ್ಳಲು ಹೋಗುತ್ತಿದ್ದಾರೆ ಎಂದು ಡಿ ಕೆ ಶಿವಕುಮಾರ್ ವಿರುದ್ಧ ಸಿ ಟಿ ರವಿ ಹರಿಹಾಯ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುತ್ತಿಗೆದಾರರ ಮನೆ ಮೇಲೆ ದಾಳಿ ಮಾಡಿದರೆ ಡಿಸಿಎಂ ಡಿಕೆ ಶಿವಕುಮಾರ್ ಅವರು ರಾಜಕೀಯ ಅಂತ ಹೇಳುತ್ತಾರೆ. ಐಟಿ ದಾಳಿ ಬಗ್ಗೆ ಪ್ರಿಯಾಂಗ್ ಖರ್ಗೆ ಕೂಡ ಪ್ರಶ್ನೆ ಮಾಡುತ್ತಾರೆ. ಹಾಗಾದರೆ 40, 42 ಕೋಟಿ ರೂಪಾಯಿ ಒಬ್ಬೊಬ್ಬರ ಮನೆಯಲ್ಲೂ ಸಿಕ್ಕಿದೆ ಅಲ್ವ, ಇದಕ್ಕೆ ಏನ್ ಹೇಳುತ್ತೀರಿ? ಹಾದಿಬೀದಿಯಲ್ಲಿ ಹೋಗುವವರ ಪ್ರಶ್ನೆಗೆ ಉತ್ತರಿಸಬೇಡಿ. ಈ ಹಣಕ್ಕೂ ನಿಮಗೂ ಸಂಬಂಧ ಇಲ್ಲವೆಂದಾದರೆ ಪ್ರಕರಣವನ್ನು ಸಿಬಿಐಗೆ ವಹಿಸಿ ಎಂದು ಸಿಟಿ ರವಿ ಸವಾಲು ಹಾಕಿದರು.

ಪತ್ರಿಕಾಗೋಷ್ಠಿಯಲ್ಲಿ ಎಂಎಲ್​ಸಿ ಛಲವಾದಿ ನಾರಾಯಣಸ್ವಾಮಿ, ಭಾಸ್ಕರ್ ರಾವ್ ಅವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...