ಕೆಪಿಎಸ್‌ಸಿ ನೇಮಕಾತಿ ಜಟಾಪಟಿ; ಕಾರ್ಯದರ್ಶಿ ಕೆ ಎಸ್ ಲತಾ ಕುಮಾರಿಗೆ 10 ದಿನ ರಜೆ ನೀಡಿದ ಸರ್ಕಾರ

Date:

ಕೆಪಿಎಸ್‌ಸಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಕಾರ್ಯದರ್ಶಿಗಳ ನಡುವಿನ ಶೀತಲ ಸಮರಕ್ಕೆ ತಡೆಯೊಡ್ಡಲು ರಾಜ್ಯ ಸರ್ಕಾರ ಕೆಪಿಎಸ್‌ಸಿ ಕಾರ್ಯದರ್ಶಿ ಕೆ ಎಸ್ ಲತಾ ಕುಮಾರಿ ಅವರಿಗೆ 10 ದಿನ ಗಳಿಕೆ ರಜೆ ನೀಡಿದೆ.

ಅಧ್ಯಕ್ಷರು ಮತ್ತು ಸದಸ್ಯರ ಕಾರ್ಯವೈಖರಿ ಕುರಿತು ಕೆಪಿಎಸ್‌ಸಿ ಕಾರ್ಯದರ್ಶಿ ಕೆ.ಎಸ್. ಲತಾ ಕುಮಾರಿ ಅವರು, “ಆಯೋಗ ಮತ್ತು ಸರ್ಕಾರಕ್ಕೆ ಮುಜುಗರ ಉಂಟಾಗದ ರೀತಿಯಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯಿಂದ ಕಾರ್ಯನಿರ್ವಹಿಸುವಂತೆ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರಿಗೆ ಅರಿವು ಮೂಡಿಸಬೇಕು. ವಿವಿಧ ಹುದ್ದೆಗಳಿಗೆ ನಿಯಮಾನುಸಾರ ಆಯ್ಕೆ ಪೂರ್ಣಗೊಳಿಸಲು ಸೂಚನೆ ನೀಡಬೇಕು” ಎಂದು ರಾಜ್ಯದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು.

ಇದರಿಂದ ಇಕ್ಕಟ್ಟಿಗೆ ಸಿಲುಕಿದ್ದ ರಾಜ್ಯ ಸರ್ಕಾರ ಒಂದು, ಅಧ್ಯಕ್ಷರು ಮತ್ತು ಸದಸ್ಯರ ನಡವಳಿಕೆ ಕುರಿತು ತಿಳಿವಳಿಕೆ ತುಂಬಲು ರಾಜ್ಯಪಾಲರಿಗೆ ಸರ್ಕಾರ ಸೂಚಿಸಬೇಕಿತ್ತು. ಇಲ್ಲ, ಕಾರ್ಯದರ್ಶಿ ಲತಾ ಕುಮಾರಿಯವರನ್ನು ವರ್ಗಾಯಿಸಬೇಕಿತ್ತು. ಇಂತಹ ಇಕ್ಕಟ್ಟಿನಲ್ಲಿ ಅವರಿಗೆ ರಜೆ ಮಂಜೂರು ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗರ ರಥ, ರಕ್ತ ಮತ್ತು ಭಾರತ ರತ್ನ

ಡಿಪಿಎಆರ್ ಇಲಾಖೆಯ ಈ ಕುರಿತು ಬುಧವಾರ ಆದೇಶ ಹೊರಡಿಸಿದೆ. ಕೆ.ಎಸ್. ಲತಾ ಕುಮಾರಿ ಅವರಿಗೆ ಫೆಬ್ರುವರಿ 7 ರಿಂದ ಫೆಬ್ರುವರಿ 17ರವರೆಗೆ ಗಳಿಕೆ ರಜೆ ನೀಡಲಾಗಿದೆ. ಅವರ ರಜೆ ಅವಧಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ರಾಕೇಶ್ ಕುಮಾರ್ ಕೆ ಅವರನ್ನು ಕೆಪಿಎಸ್‌ಸಿ ‍ಪ್ರಭಾರಿ ಕಾರ್ಯದರ್ಶಿಯನ್ನಾಗಿ ನಿಯುಕ್ತಿಗೊಳಿಸಿ ಆದೇಶಿಸಿದೆ.

ಕೆಪಿಎಸ್‌ಸಿಯ ನೇಮಕಾತಿ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್‌. ಸಾಹುಕಾರ್‌, ಕೆಲ ಸದಸ್ಯರು ಮತ್ತು ಲತಾಕುಮಾರಿ ಅವರ ನಡುವೆ ಜಟಾಪಟಿ ನಡೆಯುತ್ತಿದೆ. ಈ ಮಧ್ಯೆಯೇ ಅವರಿಗೆ ರಜೆ ನೀಡಿ ಕಳುಹಿಸಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...