ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗುತ್ತಿಗೆದಾರ ಪಿ ಎಸ್ ಗೌಡರ್ ಕೆಆರ್ಐಡಿಎಲ್ ಅಧಿಕಾರಿಗಳ ವರ್ತನೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿರುವ ಪ್ರಕರಣವನ್ನು ಇಲಾಖಾ ತನಿಖೆಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಆದೇಶಿಸಿದ್ದಾರೆ.
ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (KRIDL)ನಿಂದ 2023-24ನೇ ಸಾಲಿನ ಬಾಕಿ ಬಿಲ್ ಪಾವತಿಯಾಗದ ಹಿನ್ನೆಲೆಯಲ್ಲಿ ಮನನೊಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಗುತ್ತಿಗೆದಾರ ಪಿ ಎಸ್ ಗೌಡರ್ (48) ಡೆತ್ನೋಟ್ ಬರೆದಿರುವ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ಸಮಿತಿ ರಚಿಸಿ ವರದಿ ನೀಡುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆ ಎಸಿಎಸ್ಗೆ ಸಚಿವರು ಸೂಚನೆ ನೀಡಿದ್ದಾರೆ.
ಕೌಟುಂಬಿಕ ಕಲಹವೂ ಇತ್ತು
ಗೌಡರ್ ಆತ್ಮಹತ್ಯೆಗೆ ಕೌಟುಂಬಿಕ ಕಾರಣವೂ ಒಂದು ಎಂಬ ಅಂಶ ಡೆತ್ ನೋಟ್ನಲ್ಲಿದೆ. ಗುತ್ತಿಗೆದಾರ ಪಿ.ಎಸ್. ಗೌಡರ್ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಿದ್ದಲಿಂಗಪ್ಪ ಅವರ ಪುತ್ರ. ಆಸ್ತಿ ಹಂಚಿಕೆ ವಿಚಾರದಲ್ಲಿ ಸಹೋದರರ ನಡುವೆ ಮನಸ್ತಾಪವಿತ್ತು. ಒಮ್ಮೆ ದೈಹಿಕ ಹಲ್ಲೆಯೂ ನಡೆದಿತ್ತು, ನಂತರ ರಾಜಿ ಮಾಡಲಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಗೌಡರ್ ಅಣ್ಣ ಜಿ ಎಸ್ ನಾಗರಾಜ್, ತಮ್ಮ ಗೌಡರ ಶ್ರೀನಿವಾಸ್ ಅವರೊಂದಿಗೆ ಆಸ್ತಿ ಹಂಚಿಕೆ ವಿಚಾರವಾಗಿ ಮನಸ್ತಾಪವಿತ್ತು. ಹಲವು ಬಾರಿ ಪಂಚಾಯಿತಿ ಮಾಡಲಾಗಿತ್ತು. ಗೌಡರ ಶ್ರೀನಿವಾಸ್ ಅವರ ಪತ್ನಿ ಇಂದುಮತಿ ಮತ್ತು ಅವರ ತಂದೆ ಚಿತ್ರಶೇಖರಪ್ಪ ಅವರು ನಮಗೆ ಮಾನಸಿಕ ಹಿಂಸೆ ನೀಡಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ.
ಕೆಆರ್ಐಡಿಎಲ್ ಅಡಿಯಲ್ಲಿ ಒಂದು ಕಾಮಗಾರಿ ನಿರ್ವಹಿಸಿದ್ದು (ಕೃಷಿ ಇಲಾಖೆ ಆವರಣ, ಸಂತೇಬೆನ್ನೂರು) ಇದು 2023-24ನೇ ಸಾಲಿನಲ್ಲಿ ಪೂರ್ಣಗೊಂಡಿದೆ. ಆದರೆ ಇದುವರೆಗೂ ನನಗೆ ಕಾಮಗಾರಿ ಮೊತ್ತವನ್ನು ನೀಡದೆ ಮಾನಸಿಕವಾಗಿ ಹಿಂಸೆ ನೀಡಿರುತ್ತಾರೆ. ಹಾಗೂ ಈ ಸಂಸ್ಥೆಯಿಂದ ನನ್ನ ಕುಟುಂಬಕ್ಕೆ ದೊಡ್ಡ ಮೊತ್ತದ ಪರಿಹಾರ ಒದಗಿಸಿಕೊಡಬೇಕು ಎಂದು ಡೆತ್ನೋಟ್ನಲ್ಲಿ ಕೋರಿರುವುದಾಗಿ ತಿಳಿದು ಬಂದಿದೆ.
ಡೆತ್ ನೋಟ್ ಆಧರಿಸಿ ಎಸ್ ಗೌಡರ್ ಪತ್ನಿ ವಸಂತಕುಮಾರಿ ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಕೆಆರ್ಐಡಿಎಲ್ ಸಂಸ್ಥೆ ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.
I have instruced the ACS RDPR to form a committee of senior officers to enquire and submit a report on these allegations on KRIDL.
KRIDL is an engineering corporation and sub contracting isn’t encouraged. pic.twitter.com/FWzgl5mFoi
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) May 31, 2024





