ದುಡ್ಡು ಮಾಡಲು ಅಡ್ಡ ಬರದ ಎಲೆಕ್ಷನ್, ಜನರ ಕೆಲಸಕ್ಕೆ ಅಡ್ಡ ಬರುತ್ತಾ? ಅಧಿಕಾರಿಗಳ ವಿರುದ್ಧ ಕೃಷ್ಣ ಬೈರೇಗೌಡ ಕಿಡಿ

Date:

ದುಡ್ಡು ಮಾಡಲು ಎಲೆಕ್ಷನ್ ಅಡ್ಡ ಬರಲ್ಲ, ಆದ್ರೆ ಜನರ ಕೆಲಸ ಮಾಡೋಕೆ ಮಾತ್ರ ಎಲೆಕ್ಷನ್ ಅಡ್ಡ ಬರುತ್ತಾ..? ಹೀಗೆ ಅಧಿಕಾರಿಗಳನ್ನು ಪ್ರಶ್ನಿಸುವ ಮೂಲಕ ಕಂದಾಯ ಸಚಚ ಕೃಷ್ಣ ಬೈರೇಗೌಡ ಅವರು ಉಪ ವಿಭಾಗಾಧಿಕಾರಿಗಳನ್ನು (ಎಸಿ) ತೀವ್ರ ತರಾಟೆಗೆ ತೆಗೆದುಕೊಂಡರು.

ಎಸಿ ನ್ಯಾಯಾಲಯಗಳಲ್ಲಿ ಹೆಚ್ಚು ಸಂಖ್ಯೆಯಲ್ಲಿ ತಕರಾರು ಪ್ರಕರಣಗಳನ್ನು ಇತ್ಯರ್ಥಗೊಳಿಸದೆ ಬಾಕಿ ಉಳಿಸಿಕೊಂಡಿರುವ ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ತುಮಕೂರು, ಕೊಪ್ಪಳ, ಮೈಸೂರು, ಮಂಗಳೂರು ಹಾಗೂ ಬೆಳಗಾವಿ ಜಿಲ್ಲೆಗಳ ಆಯ್ದ 30 ಉಪ-ವಿಭಾಧಿಕಾರಿಗಳು ಹಾಗೂ ವಲಯ ಆಯುಕ್ತರ ಜೊತೆ ಇಂದು ವಿಕಾಸಸೌಧದಲ್ಲಿ ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಾಯಿತು.

“ಕೋರ್ಟ್‌ನಲ್ಲಿ ಬಾಕಿ ಇರುವ ತಕರಾರು ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಅಂದ್ರೆ ಎಲೆಕ್ಷನ್‌ ಕೆಲಸ ಇತ್ತು ಅಂತ ಸಾಬೂಬು ಹೇಳ್ತೀರಾ. ಹಲವು ವರ್ಷಗಳಿಂದ ಎಸಿ ನ್ಯಾಯಾಲಯಗಳಿಗೆ ಅಲೆದಾಡಿ ಜನ ಬಸವಳಿಸಿದ್ದಾರೆ. ಹೀಗಾಗಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಬೇಕು ಎಂದು ನಾವು ಕಳೆದ ಒಂದು ವರ್ಷದಿಂದ ರಾಜ್ಯಾದ್ಯಂತ ಓಡಾಡಿ ಸಭೆ ನಡೆಸಿ ಎಲ್ಲಾ ಅಧಿಕಾರಿಗಳಿಗೂ ಗುರಿ ನಿಗದಿ ಮಾಡಲಾಗಿದೆ. ಆದರೆ, ಕಳೆದ ಮಾರ್ಚ್‌ನಿಂದ ಪ್ರಕರಣ ವಿಲೇವಾರಿ ಕೆಲಸ ಮತ್ತೆ ನಿಂತ ನೀರಾಗಿದೆ” ಎಂದ ತೀವ್ರ ಅಸಮಾಧಾನ ಹೊರಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯಾದ್ಯಂತ ಎಸಿ ನ್ಯಾಯಾಲಯಗಳಲ್ಲಿ ಒಟ್ಟಾರೆ 36,430 ಪ್ರಕರಣಗಳು ಬಾಕಿ ಇವೆ. ಈ ಪೈಕಿ ಅತ್ಯಧಿಕ ಬೆಂಗಳೂರು ಉತ್ತರ ವಲಯದಲ್ಲಿ 5,419 ಹಾಗೂ ಬೆಂ.ದಕ್ಷಿಣ ವಲಯದಲ್ಲಿ 4,351 ಪ್ರಕರಣಗಳು ಬಾಕಿ ಇವೆ. ಅಲ್ಲದೆ, ಈ ಎರಡೂ ವಿಭಾಗದಲ್ಲಿ ಅಧಿಕಾರಿಗಳು ಶೇ.65ಕ್ಕಿಂತ ಹೆಚ್ಚು ತನ್ನ ಕಾರ್ಯಕ್ಷೇತ್ರದ (ಜ್ಯೂರಿ ಸೆಕ್ಷನ್) ಹೊರಗಿನ ಪ್ರಕರಣಗಳನ್ನೂ ದಾಖಲಿಸಿಕೊಂಡಿದ್ದಾರೆ. ಪ್ರಕರಣಗಳ ಇತ್ಯರ್ಥವೂ ಆಮೆ ಗತಿಯಲ್ಲಿ ಸಾಗಿದೆ” ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಬೆಂ.ಉತ್ತರ ವಿಭಾಗಾಧಿಕಾರಿ ಪ್ರಮೋದ್‌ ಪಾಟೀಲ್‌ ಹಾಗೂ ಬೆಂ.ದಕ್ಷಿಣ ವಿಭಾಗಾಧಿಕಾರಿ ರಜನೀಕಾಂತ ಚೌಹ್ಹಾಣ್‌ ವಿರುದ್ಧ ಆಕ್ರೋಶ ಹೊರಹಾಕಿದ ಸಚಿವರು, “ನಿಮ್ಮ ಕಾರ್ಯಕ್ಷೇತ್ರದ ಹೊರಗಿನ ಪ್ರಕರಣಗಳನ್ನೂ ಕಾನೂನು ಬಾಹೀರವಾಗಿ ದಾಖಲಿಸಿಕೊಂಡಿದ್ದೀರ. ಹೀಗೆ ಮಾಡಲು ಎಷ್ಟು ಹಣ ತೆಗೆದುಕೊಂಡಿರಿ” ಎಂದು ಖಾರವಾಗಿ ಪ್ರಶ್ನಿಸಿದರು.

ಸಭೆಯಲ್ಲಿ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಆಯುಕ್ತರಾದ ಸುನೀಲ್‌ ಕುಮಾರ್‌, ಪ್ರಾದೇಶಿಕ ಆಯುಕ್ತರಾದ ಆದಿತ್ಯ ಬಿಸ್ವಾಸ್‌ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...