ಕೃಷ್ಣ ಜಲಭಾಗ್ಯ ನಿಗಮ ಪರಿಹಾರ ಅಕ್ರಮ; ಶೀಘ್ರ ತನಿಖಾ ತಂಡ ರಚನೆ: ಡಿಸಿಎಂ ಡಿ ಕೆ ಶಿವಕುಮಾರ್

Date:

ಕೃಷ್ಣ ಜಲಭಾಗ್ಯ ನಿಗಮದಲ್ಲಿ ಪರಿಹಾರ ಕೊಡಿಸುವ ನೆಪದಲ್ಲಿ ಅಕ್ರಮ ನಡೆದಿದ್ದು. ಇದರಲ್ಲಿ ಒಂದಷ್ಟು ಜನ ಶಾಮೀಲಾಗಿದ್ದಾರೆ. ಇಲ್ಲಿ ನಮ್ಮ ರೈತರನ್ನು ಉಳಿಸಲು ತನಿಖಾ ತಂಡ ರಚಿಸಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ವಿಧಾನಸಭೆ ಅಧಿವೇಶನದ ಪ್ರಶ್ನೋತ್ತರ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ, ಕೃಷ್ಣ ಜಲಭಾಗ್ಯ ನಿಗಮದ ಅಡಿ ಸಮರ್ಪಕವಾದ ನೀರಾವರಿ ಕೆಲಸಗಳು ನಡೆಯುತ್ತಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, “ನ್ಯಾಯಲಯಗಳಲ್ಲಿ ಭೂಸ್ವಾಧೀನದ ಕುರಿತು ಪ್ರಕರಣಗಳು ನಡೆಯುತ್ತಿವೆ. ವಿಜಯಪುರ, ಬಾಗಲಕೋಟೆ, ರಾಯಚೂರು ಭಾಗದಲ್ಲಿ ನ್ಯಾಯಲಯದ ಮೂಲಕ ಎಕರೆಗೆ 74 ಲಕ್ಷ ಹಾಗೂ ಸಬ್ಅರ್ಬ್ ಭೂಮಿಗೆ 1 ಕೋಟಿ 26 ಲಕ್ಷ ಪರಿಹಾರ ಪಡೆಯುತ್ತಿದ್ದಾರೆ. ಸುಮಾರು 285 ಪ್ರಕಣಗಳಲ್ಲಿ ಈ ರೀತಿಯಾಗಿದೆ. 367 ಪ್ರಕರಣಗಳಿಗೆ ಪುನರ್ ವಸತಿ ಕಲ್ಪಿಸುವ ವಿಚಾರವಾಗಿ ಒಂದು ಎಕರೆಗೆ 5 ಕೋಟಿ 18 ಲಕ್ಷ ಪರಿಹಾರ ನೀಡಬೇಕು ಎಂದು ಕೋರ್ಟ್ ಆದೇಶ ಮಾಡಿದೆ. ಪೆರಿಫೆರಲ್ ರಿಂಗ್ ರಸ್ತೆಗೆ ಬೆಂಗಳೂರಿನಲ್ಲೇ ಇಷ್ಟು ದೊಡ್ಡ ಮೊತ್ತದ ಪರಿಹಾರ ನೀಡಲು ಆಗುತ್ತಿಲ್ಲ” ಎಂದರು.

“ಭೂ ಸ್ವಾಧೀನ ಪ್ರಕರಣಗಳನ್ನು ನಡೆಸುತ್ತಿರುವ ಎಲ್ಲ ಸರ್ಕಾರಿ ವಕೀಲರನ್ನು ಹಿಂದಕ್ಕೆ ಪಡೆಯಲಾಗುವುದು. ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಲಾಗುವುದು. ಇದರ ಬಗ್ಗೆ ಕಾನೂನು ಸಚಿವರ ಬಳಿ ಚರ್ಚೆ ನಡೆಸಲಾಗುವುದು” ಎಂದು ಡಿ ಕೆ ಶಿವಕುಮಾರ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಸವರಾಜ ಬೊಮ್ಮಾಯಿ ಅವರ ಕಾಲದಲ್ಲಿ ಸಚಿವ ಸಂಪುಟ ಉಪಸಮಿತಿ ಮಾಡಿ ಎಕರೆಗೆ 25 ಲಕ್ಷ ಪರಿಹಾರ ನೀಡಬೇಕು ಎಂದು ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಈಗ ದುಪ್ಪಟ್ಟು ಪರಿಹಾರ ನೀಡಬೇಕು ಎಂದು ನ್ಯಾಯಲಯ ಹೇಳಿದೆ. ಇದಕ್ಕೆ ಎಲ್ಲಿಂದ ಹಣ ತರುವುದು” ಎಂದು ಪ್ರಶ್ನಿಸಿದರು.

“ಕೃಷ್ಣ ಜಲಭಾಗ್ಯ ನಿಗಮದ ಅಡಿ ಕೈಗೊಂಡಿರುವ ಕಾರ್ಯಕ್ರಮಗಳು ಮುಗಿಯಲು ಹೆಚ್ಚಿನ ಅನುದಾನದ ಅವಶ್ಯಕತೆಯಿದೆ. ನಮ್ಮ ಸರ್ಕಾರ ಆದ್ಯತೆ ಮೇರೆಗೆ ಕೆಲಸ ಮಾಡುತ್ತಿದೆ. ಈ ಯೋಜನೆಯ ಬಗ್ಗೆ ಪುನರ್ ಪರಿಶೀಲನೆ ನಡೆಸಿದಾಗ ಗಾಬರಿ ಹುಟ್ಟಿಸುವ ಸಂಗತಿಗಳು ಬೆಳಕಿಗೆ ಬಂದಿವೆ. ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಕಾಲದಲ್ಲಿ ಈ ಅಣೆಟಕಟ್ಟು ನಿರ್ಮಾಣದ ವೇಳೆ ಅನೇಕ ಜನರು 1-2 ಸಾವಿರ ರೂಪಾಯಿಗೆ ಜಮೀನು ಬಿಟ್ಟುಕೊಟ್ಟಿದ್ದಾರೆ. 5 ವರ್ಷದ ಹಿಂದೆಯೂ ರೈತರು ಎಕರೆಗೆ 5 ಸಾವಿರ ಪಡೆದು ಜಮೀನು ನೀಡಿದ್ದಾರೆ” ಎಂದರು.

ಇನ್ನು ಕನಕನಾಲ ಯೋಜನೆ ಜಾರಿಯ ಬಗ್ಗೆ ಬಸನಗೌಡ ತುರ್ವಿಹಾಳ ಅವರ ಪ್ರಸ್ತಾವನೆಗೆ ಉತ್ತರಿಸಿದ ಅವರು “ಮಸ್ಕಿ ನಾಲೆಯಿಂದ ಕನಕನಾಲಾ ಕಣಿವೆಗೆ ಪ್ರವಾಹದ ನೀರನ್ನು ತಿರುಗಿಸುವ ಹಾಗೂ ಕನಕನಾಲೆಯ ಆಧುನೀಕರಣ ಯೋಜನೆಗೆ ₹ 134.56 ಕೋಟಿ ಮೊತ್ತದ ಡಿಪಿಆರ್ ಗೆ ಅನುಮತಿ ನೀಡುವ ವಿಚಾರ ಸರ್ಕಾರದ ಮುಂದಿದೆ” ಎಂದು ಹೇಳಿದರು.

“ನಾನು ಮತ್ತು ಮುಖ್ಯಮಂತ್ರಿಗಳು ಅನೇಕ ಬಾರಿ ಭೇಟಿ ನೀಡಿ ಈ ಭಾಗವನ್ನು ವೀಕ್ಷಣೆ ಮಾಡಿದ್ದೇವೆ. ಶಾಸಕರ ಕ್ಷೇತ್ರದಲ್ಲಿ ₹ 980 ಕೋಟಿ ಮೊತ್ತದ ನೀರಾವರಿಗೆ ಸಂಬಂಧಿಸಿದ ಕಾಮಗಾರಿ ನಡೆಸಲು ಸರ್ಕಾರ ಮುಂದಾಗಿದೆ. ಇದು ಮುಗಿದ ನಂತರ ಕೆರೆ ತುಂಬಿಸುವ ಯೋಜನೆ ಮಾಡಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...