ದೇಶ ಒಡೆಯುವ ಹೇಳಿಕೆ ಕೊಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತನ್ನಿ: ಈಶ್ವರಪ್ಪ ವಿವಾದಾತ್ಮಕ ಹೇಳಿಕೆ

Date:

“ದೇಶದ್ರೋಹ ಮಾಡುವವರು ಹಾಗೂ ದೇಶದ್ರೋಹದ ಹೇಳಿಕೆ ನೀಡುವವರನ್ನ ಗುಂಡಿಕ್ಕಿ ಕೊಲ್ಲುವ ಕಾನೂನು ಜಾರಿಯಾಗಲಿ” ಎಂದು ಹೇಳುವ ಮೂಲಕ ಬಿಜೆಪಿ ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ವಿವಾದ ಸೃಷ್ಟಿಸಿದ್ದಾರೆ.

ದಾವಣಗೆರೆ ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಕಾಂಗ್ರೆಸ್‌‌ ಸರ್ಕಾರದ ವಿರುದ್ಧ ಕಿಡಿಕಾರುವ ವೇಳೆ ಈ ರೀತಿಯ ಹೇಳಿಕೆ ನೀಡಿದ್ದಾರೆ.

“ಸಂಸದ ಡಿ.ಕೆ. ಸುರೇಶ್, ವಿನಯ್ ಕುಲಕರ್ಣಿ​ ದೇಶ ವಿಭಜನೆಯ ಹೇಳಿಕೆ ನೀಡಿದ್ದಾರೆ. ಇಬ್ಬರೂ ಕೂಡ ರಾಷ್ಟ್ರದ್ರೋಹಿಗಳು. ಇಂತಹ ಹೇಳಿಕೆ ಕೊಡುವವರನ್ನು ಗುಂಡಿಕ್ಕಿ ಕೊಲ್ಲಬೇಕು. ಕೊಲ್ಲುವ ಕಾನೂನು ತರಬೇಕು” ಎಂದು ಈಶ್ವರಪ್ಪ ನಾಲಗೆ ಹರಿಯಬಿಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಯಾವ ದೇಶದ ಅಧ್ಯಕ್ಷರಾಗಿದ್ದಾರೆ ಎಂದು ಸ್ಪಷ್ಟವಾಗಿ ಹೇಳಲಿ. ಅವರ ಪಕ್ಷದ ಡಿ.ಕೆ ಸುರೇಶ್, ವಿನಯ್ ಕುಲಕರ್ಣಿ ದೇಶ ಇಬ್ಭಾಗ ಮಾಡಬೇಕು ಅಂತ ಹೇಳುತ್ತಿದ್ದಾರೆ. ತಮ್ಮ ಪಕ್ಷದ ಸಂಸದರೇ ಹೇಳಿದಂತೆ ನೀವು ಉತ್ತರ ಭಾರತದ ಅಧ್ಯಕ್ಷರಾ? ಅಥವಾ ದಕ್ಷಿಣ ಭಾರತದ ಅಧ್ಯಕ್ಷರಾ? ಎಂದು ಸ್ಪಷ್ಟಪಡಿಸಿ” ಎಂದು ಈಶ್ವರಪ್ಪ ಎಂದು ಹೇಳಿಕೆ ನೀಡಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿಯವರಿಗೆ ನಾನು ಮನವಿ ಮಾಡುತ್ತೇವೆ. ದೇಶ ಛಿದ್ರ ಮಾಡುವವರಿಗೆ, ಇಂತವರಿಗೆ ತಕ್ಕ ಪಾಠ ಕಲಿಸಿ. ದೇಶ ವಿಭಜನೆ ಮಾತು ಆಡುವವರಿಗೆ ಗುಂಡಿಕ್ಕಿ ಕೊಲ್ಲುವ ಕಾನೂನು ತನ್ನಿ. ದೇಶ ತುಂಡು ಮಾಡುವ ಮಾತು ನೆಹರು ಕಾಲದಿಂದಲೂ ಬಂದಿದೆ. ಜಿನ್ನಾ ಸಂಸ್ಕೃತಿಯೇ ಡಿ.ಕೆ ಸುರೇಶ್ ಅವರಿಗೆ ಬಂದಿದೆ. ನಾವು ದೇಶವನ್ನು ಇಬ್ಭಾಗ ಮಾಡಲು ಬಿಡುವುದಿಲ್ಲ. ಬೇಕಾದರೆ ಪಾಕಿಸ್ತಾನವನ್ನೂ ಸೇರಿಸಿಕೊಂಡು ಅಖಂಡ ಭಾರತವನ್ನಾಗಿ ಮಾಡುತ್ತೇವೆ ” ಎಂದು ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

“ಕಾಂಗ್ರೆಸ್ ನಾಯಕರಿಗೆ ಮೋದಿ ಅಂದರೆ ಎದೆ ನಡುಗುತ್ತದೆ. ಏಕೆಂದರೆ ಅವರ ಮನೆಯಲ್ಲಿ ಇರುವವರೆಲ್ಲ ಮೋದಿಗೆ ವೋಟ್‌ ಹಾಕ್ತೀವಿ ಎನ್ನುತ್ತಿದ್ದಾರೆ. ಗುಂಪಿನಲ್ಲಿ ಕೂಡಿದಾಗ ನಾನು ಕೂಡ‌ ಮೋದಿಗೆ ವೋಟ್‌ ಹಾಕ್ತೀನಿ ಅಂತಾ ದೇಶಭಕ್ತ ಕಾಂಗ್ರೆಸ್ ಮುಖಂಡರು ಹೇಳುತ್ತಾರೆ” ಎನ್ನುವ ಮೂಲಕ ಕಾಂಗ್ರೆಸ್‌ನಲ್ಲಿ ಕೂಡ ಮೋದಿ ಅಭಿಮಾನಿಗಳು ಇದ್ದಾರೆ ಎಂದು ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಸಿಎಂ ಜನತಾ ದರ್ಶನ | 12,372 ಸಾವಿರ ಅರ್ಜಿ ಸ್ವೀಕಾರ; ಕಂದಾಯ ಇಲಾಖೆಯದ್ದೇ ಹೆಚ್ಚು!

“900 ವರ್ಷಗಳ‌ ಕಾಲ ಈ ದೇಶವನ್ನ ಮುಸ್ಲಿಮರು ಆಳಿದ್ದರು. ಕಾಶಿ, ಮಥುರಾ, ಅಯೋಧ್ಯೆಯಲ್ಲಿ ಮಸೀದಿಗಳೇ ತಲೆ ಎತ್ತಿದ್ದವು. ಭಾರತೀಯರು ಗುಲಾಮರು ಅಂತಾ ಬಾಬರ್‌ನ ಮಸೀದಿಗಳು ಹೇಳುತ್ತಿದ್ದವು. ಆದರೆ ಅಯೋಧ್ಯೆ ರಾಮಮಂದಿರದಿಂದ ಇಡೀ ದೇಶ ಒಂದುಗೂಡಿತು. ಇದೀಗ ಕಾಶಿ, ಮಥುರಾ ಸಹ ಹಿಂದೂಗಳ ಕೈ ಸೇರಿದರೆ ಹಿಂದೂಗಳಿಗೆ ಯಶಸ್ಸು ಸಿಕ್ಕಂತಾಗುತ್ತದೆ. ಅಲ್ಲದೇ ಅಯೋಧ್ಯೆಗೆ ಮುಸ್ಲಿಮರೂ ಹೋಗಿ ಶ್ರೀರಾಮನ ದರ್ಶನ ಪಡೆಯುತ್ತಿದ್ದಾರೆ. ಇದರಿಂದ ಕಾಂಗ್ರೆಸ್‌ನವರಿಗೆ ಆತಂಕ ಶುರುವಾಗಿದೆ” ಎಂದು ಸದಾ ವಿವಾದಾತ್ಮಕ ಹೇಳಿಕೆ ನೀಡುವವುದರಲ್ಲಿ ಕುಖ್ಯಾತಿ ಪಡೆದಿರುವ ಈಶ್ವರಪ್ಪ ದಾವಣಗೆರೆಯಲ್ಲೂ ಅದನ್ನೇ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...