ಸರ್ಕಾರಕ್ಕೆ ₹19.84 ಕೋಟಿ ಲಾಭಾಂಶ ಹಸ್ತಾಂತರಿಸಿದ ಕೆಎಸ್ಐಐಡಿಸಿ

Date:

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ (ಕೆಎಸ್ಐಐಡಿಸಿ) ನಿಯಮಿತವು 2022-23ನೇ ಆರ್ಥಿಕ ವರ್ಷದಲ್ಲಿ ತಾನು ಗಳಿಸಿರುವ ನಿವ್ವಳ ಲಾಭಾಂಶದಲ್ಲಿ ಶೇಕಡ 30ರಷ್ಟನ್ನು ಡಿವಿಡೆಂಡ್ ಎಂದು ಘೋಷಿಸಿದ್ದು, ಈ ಬಾಬ್ತಿನ ₹19.84 ಕೋಟಿ ರೂ.ಗಳನ್ನು ಕೈಗಾರಿಕಾ ಸಚಿವ ಎಂ ಬಿ ಪಾಟೀಲ್‌ ಅವರು ಗುರುವಾರ ಚೆಕ್ ರೂಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಸ್ತಾಂತರಿಸಿದರು.

“ನಿಗಮದಲ್ಲಿ ಸರಕಾರವು 10 ರೂ. ಮುಖಬೆಲೆಯ 69.47 ಕೋಟಿಗೂ ಹೆಚ್ಚು ಷೇರುಗಳನ್ನು ಹೊಂದಿದ್ದು, 2022-23ರಲ್ಲಿ ಇವುಗಳ ಮೌಲ್ಯ 694.70 ಕೋಟಿ ರೂ.ಗಳಿಗೂ ಹೆಚ್ಚಾಗಿತ್ತು. ಫೆ.20ರಂದು ನಡೆದ ನಿಗಮದ ಆಡಳಿತ ಮಂಡಲಿಯ ಸಭೆಯಲ್ಲಿ ಇದರಲ್ಲಿ ಶೇಕಡ 30ರಷ್ಟನ್ನು ಡಿವಿಡೆಂಡ್ ಎಂದು ಘೋಷಿಸುವ ನಿರ್ಣಯವನ್ನು ಮಾಡಲಾಗಿತ್ತು. ಅದರಂತೆ, ಈ ಲಾಭಾಂಶವನ್ನು ಸರಕಾರಕ್ಕೆ ಹಸ್ತಾಂತರಿಸಲಾಗುತ್ತಿದೆ” ಎಂದು ಸಚಿವ ಪಾಟೀಲ್ ತಿಳಿಸಿದ್ದಾರೆ.

ಮೂಲಸೌಕರ್ಯ ಇಲಾಖೆ ಕಾರ್ಯದರ್ಶಿ ಎನ್ ಮಂಜುಳಾ, ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಬಿ ಸಿ ಸತೀಶ್, ಕಾರ್ಯನಿರ್ವಾಹಕ ನಿರ್ದೇಶಕ ಡಿ ಪಿ ಪ್ರಕಾಶ ಮುಂತಾದವರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...