ದೆಹಲಿಯಲ್ಲಿ ರಾಜ್ಯ ಕಾಂಗ್ರೆಸ್‌ ನಾಯಕರ ಸಭೆ: ಲೋಕಸಭೆ ಚುನಾವಣೆ ಗೆಲ್ಲಲು ರಣತಂತ್ರ

Date:

ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆಲ್ಲುವುದಕ್ಕೆ ಕಾರ್ಯಸೂಚಿ ಸಿದ್ಧಪಡಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್‌ ನಾಯಕರು, ಸಚಿವರೊಂದಿಗೆ ಬುಧವಾರ(ಆಗಸ್ಟ್ 2) ದೆಹಲಿಯ ಅಕ್ಬರ್‌ ರಸ್ತೆಯಲ್ಲಿನ ಎಐಸಿಸಿ ಮುಖ್ಯ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಲಿದೆ. 

ಲೋಕಸಭೆ ಚುನಾವಣೆಯನ್ನೇ ಮುಖ್ಯ ಗುರಿಯಾಗಿಟ್ಟುಕೊಂಡು ಎರಡು ಹಂತಗಳಲ್ಲಿ ಸಭೆ ನಡೆಯಲಿದ್ದು, ಮೊದಲ ಹಂತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ, ಎಐಸಿಸಿ ಸದಸ್ಯರು, ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಎಐಸಿಸಿ ಕಾರ್ಯದರ್ಶಿಗಳು, ಪ್ರಮುಖ ಸಚಿವರು ಸೇರಿ ಸುಮಾರು 37 ಮಂದಿಯನ್ನು ಉದ್ದೇಶಿಸಿ ರಾಹುಲ್‌ಗಾಂಧಿ ಅವರು ಮಾತನಾಡಲಿದ್ದಾರೆ.

ರಾಹುಲ್‌ ಗಾಂಧಿ ಮುಖ್ಯವಾಗಿ ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಕ್ಷೇತ್ರವಾರು ಮಾಹಿತಿ ಪಡೆಯಲಿದ್ದಾರೆ. ಪ್ರತಿ ಕ್ಷೇತ್ರದಲ್ಲೂ ಗೆಲ್ಲುವ ಅಭ್ಯರ್ಥಿಗಳ ಬಗ್ಗೆ ಪ್ರಾಥಮಿಕ ಚರ್ಚೆ ನಡೆಯಲಿದೆ. ಗೆಲ್ಲುವ ಅಭ್ಯರ್ಥಿಗಳು ಕಣಕ್ಕಿಳಿಸಲು ಈ ಕ್ಷಣದಿಂದಲೇ ಕೆಲಸ ಮಾಡುವಂತೆ ರಾಜ್ಯ ನಾಯಕರಿಗೆ ರಾಹುಲ್‌ ಗಾಂಧಿ ಸೂಚನೆ ನೀಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಲ್ಲ ಸಮೀಕರಣಗಳನ್ನೂ ಕ್ರೋಡೀಕರಿಸಲು ಚುನಾವಣೆ ಗೆಲ್ಲಲು ಯಾವ ಕಾರ್ಯಸೂಚಿಯನ್ನು ಮುಂದಿಟ್ಟುಕೊಂಡು ಹೋಗಬೇಕು ಎಂಬ ಬಗ್ಗೆ ಮಾರ್ಗಸೂಚಿ ಸಿದ್ಧಪಡಿಸಲಿದ್ದಾರೆ. ಮುಖ್ಯವಾಗಿ ನಿಗದಿತ ಕ್ಷೇತ್ರಗಳಲ್ಲಿ ಗೆಲ್ಲುವ ಸಾಮರ್ಥ್ಯವಿರುವ ಶಾಸಕರು ಹಾಗೂ ಸಚಿವರನ್ನೇ ಲೋಕಸಭೆಗೆ ಕಣಕ್ಕಿಳಿಸುವ ಬಗ್ಗೆಯೂ ಚರ್ಚೆಯಾಗಲಿದೆ. ಗೆಲ್ಲುವ ಸಾಧ್ಯತೆ ಹೆಚ್ಚಿದ್ದರೆ ಅವರನ್ನೇ ಮನವೊಲಿಸಲು ಸಾಧ್ಯತೆಯಿದೆ.

ಈ ಸುದ್ದಿ ಓದಿದ್ದೀರಾ? ಕ್ರಿಕೆಟ್‌ನಲ್ಲಿ ನಿಮ್ಮ ಪುತ್ರ ಎಷ್ಟು ರನ್ ಸ್ಕೋರ್‌ ಮಾಡಿದ್ದಾರೆ? ಅಮಿತ್ ಶಾಗೆ ಸ್ಟಾಲಿನ್‌ ಪುತ್ರ ತಿರುಗೇಟು

ಸಚಿವರೊಂದಿಗೆ ಪ್ರತ್ಯೇಕ ಸಭೆ

ಸಚಿವರ ಇಲಾಖಾವಾರು ಪ್ರಗತಿಯ ಬಗ್ಗೆ ಮೌಲ್ಯಮಾಪನ ನಡೆಯಲಿದ್ದು, ಜೊತೆಗೆ ಶಾಸಕರ ಅಸಮಾಧಾನದ ಬಗ್ಗೆಯೂ ರಾಹುಲ್‌ ಗಾಂಧಿ ಚರ್ಚೆ ನಡೆಸಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಪ್ರತಿಯೊಬ್ಬ ಸಚಿವರೂ ಬದ್ಧತೆಯಿಂದ ಕೆಲಸ ಮಾಡಬೇಕು. ಕ್ಷೇತ್ರದ ಜನರಲ್ಲಿ ಭರವಸೆ ಮೂಡಿಸಬೇಕು. ಗ್ಯಾರಂಟಿ ಯೋಜನೆಗಳ ಲಾಭ ಮತದ ರೂಪ ಪಡೆಯುವಂತೆ ಕೆಲಸ ಮಾಡಬೇಕು. ಅಗತ್ಯವಾದರೆ ಪಕ್ಷಕ್ಕಾಗಿ ಸ್ಪರ್ಧೆಗೂ ಸಿದ್ಧವಿರಬೇಕು ಎಂದು ರಾಹುಲ್‌ ಗಾಂಧಿ ಸಲಹೆ ನೀಡುವ ಸಾಧ್ಯತೆಯಿದೆ.

ಲೋಕಸಭೆ ಚುನಾವಣೆ ದೃಷ್ಟಿಯಿಂದ ವಿರೋಧಪಕ್ಷಗಳು ಷಡ್ಯಂತ್ರ ನಡೆಸಿ ಭ್ರಷ್ಟಾಚಾರದಲ್ಲಿ ಸಿಲುಕಿಸುವ ಪ್ರಯತ್ನ ಮಾಡಲಿವೆ. ಈ ನಿಟ್ಟಿನಲ್ಲಿ ಜೆಡಿಎಸ್‌ ಹಾಗೂ ಬಿಜೆಪಿ ಒಂದಾಗಲಿವೆ ಎಂಬ ಮಾಹಿತಿಗಳಿವೆ. ಹೀಗಾಗಿ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು ಎಂದು ರಾಹುಲ್‌ಗಾಂಧಿ ಸೂಚನೆ ನೀಡುವ ಸಾಧ್ಯತೆಯಿದೆ.

ಈ ಮೊದಲು ವಿಪಕ್ಷ ನಾಯಕರ ಸಭೆಗೆ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿದ್ದ ರಾಹುಲ್‌ಗಾಂಧಿ ಅವರು ಜು.17 ರಂದೇ ರಾಜ್ಯ ಸಚಿವರೊಂದಿಗೆ ಸಭೆ ನಡೆಸಬೇಕಿತ್ತು. ಆದರೆ ಕೇರಳ ಮಾಜಿ ಮುಖ್ಯಮಂತ್ರಿ ಊಮ್ಮನ್‌ ಚಾಂಡಿ ನಿಧನದಿಂದ ಸಭೆ ಮುಂದೂಡಿಕೆಯಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...