ತೆಲಂಗಾಣ | ಚುನಾವಣಾ ಪ್ರಚಾರ ವಾಹನದಿಂದ ಮಗುಚಿ ಬಿದ್ದ ಸಚಿವ ಕೆಟಿಆರ್; ತಪ್ಪಿದ ಭಾರೀ ದುರಂತ

Date:

ತೆಲಂಗಾಣ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ತೆರೆದ ವಾಹನದಲ್ಲಿ ನಿಝಾಮಾಬಾದ್ ಜಿಲ್ಲೆಯ ಆರ್ಮೂರ್‌ನಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ವಾಹನ ತಕ್ಷಣ ಬ್ರೇಕ್ ಹಾಕಿದ ಪರಿಣಾಮ ತೆಲಂಗಾಣ ಸಚಿವ ಮತ್ತು ಬಿಆರ್‌ಎಸ್ ನಾಯಕ ಕೆಟಿಆರ್ ರಾವ್ ವಾಹನದಿಂದ ಕೆಳಗೆ ಬಿದ್ದಿರುವ ಘಟನೆ ನಡೆದಿದೆ.

ನಿಝಾಮಾಬಾದ್‌ನ ಆರ್ಮೂರಿನಲ್ಲಿ ಆಯೋಜಿಸಿದ್ದ ಬಿಆರ್‌ಎಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ವೇಳೆ ಈ ಘಟನೆ ಇಂದು ನಡೆದಿದೆ. ಬಿಆರ್‌ಎಸ್ ಅಭ್ಯರ್ಥಿ ಜೀವನ್ ರೆಡ್ಡಿ ನಾಮಪತ್ರ ಸಲ್ಲಿಕೆಯಲ್ಲಿ ಸಚಿವ ಕೆಟಿಆರ್ ಹಾಗೂ ಇತರ ಮುಖಂಡರು ಭಾಗವಹಿಸಿದ್ದರು. ಇದಕ್ಕಾಗಿ ಪ್ರಚಾರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ, ವಾಹನ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದರಿಂದ ಕೆಟಿಆರ್, ಸಂಸದ ಸುರೇಶ್ ರೆಡ್ಡಿ ಹಾಗೂ ಅಭ್ಯರ್ಥಿ ಜೀವನ್ ರೆಡ್ಡಿ ವಾಹನದ ಮೇಲೆ ಅಳವಡಿಸಿದ್ದ ರೇಲಿಂಗ್‌ನಿಂದ ಕೆಳಕ್ಕೆ ಬಿದ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಿಢೀರ್ ಬ್ರೇಕ್ ಹಾಕಿದ್ದರಿಂದ ವಾಹನದ ರೈಲಿಂಗ್ ಮೇಲೆ ನಿಂತಿದ್ದ ಜನರ ಭಾರ ತಾಳಲಾರದೆ ಮುರಿದಿದ್ದರಿಂದ ಈ ಘಟನೆ ಸಂಭವಿಸಿದೆ. ತಕ್ಷಣ ಎಚ್ಚೆತ್ತ ಕೆಟಿಆರ್ ಭದ್ರತಾ ಸಿಬ್ಬಂದಿ, ಕೆಟಿಆರ್ ವಾಹನದಿಂದ ಕೆಳಕ್ಕೆ ಬೀಳದಂತೆ ಅವರನ್ನು ರಕ್ಷಣೆ ಮಾಡಿದ್ದಾರೆ. ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.

ಕೆಟಿಆರ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆರ್ಮೂರ್ ಪಟ್ಟಣದ ಹಳೆ ಆಲೂರು ರಸ್ತೆಯಲ್ಲಿ ಈ ಘಟನೆ ನಡೆದಿದೆ. ಹೆಚ್ಚಿನ ಗಾಯಗಳಾಗದ ಕಾರಣ ಜೀವನ್ ರೆಡ್ಡಿ ಜತೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಕೆಟಿಆರ್, ‘ಅದೃಷ್ಟವಶಾತ್ ಯಾವುದೇ ದೊಡ್ಡ ಅವಘಡ ಸಂಭವಿಸಿಲ್ಲ. ನಾನು ಸುರಕ್ಷಿತವಾಗಿದ್ದೇನೆ’ ಎಂದು ಹೇಳಿ ಬಳಿಕ ಕೊಡಂಗಲ್ ರೋಡ್ ಶೋನಲ್ಲಿ ಭಾಗವಹಿಸಲು ತೆರಳಿದರು.

ಕಾಂಗ್ರೆಸ್-ಬಿಆರ್‌ಎಸ್ ಕಾರ್ಯಕರ್ತರ ನಡುವೆ ಘರ್ಷಣೆ

ಹೈದರಾಬಾದ್‌ನ ಇಬ್ರಾಹಿಂ ಪಟ್ಟಣಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾಂಗ್ರೆಸ್-ಬಿಆರ್‌ಎಸ್ ಪಕ್ಷಗಳ ಅಭ್ಯರ್ಥಿಗಳು ಒಂದೇ ಸಮಯದಲ್ಲಿ ನಾಮಪತ್ರ ಸಲ್ಲಿಸಲು ಹೊರಟಿದ್ದರಿಂದ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಕಾರ್ಯಕರ್ತರ ನಡುವೆ ಕಲ್ಲು ತೂರಾಟ ಕೂಡ ನಡೆದಿದೆ. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಲಾಠಿ ಚಾರ್ಜ್ ನಡೆಸಿ, ಗುಂಪನ್ನು ಚದುರಿಸಿದ್ದರಿಂದ ಹೆಚ್ಚಿನ ಘರ್ಷಣೆ ನಡೆಯುವುದನ್ನು ತಪ್ಪಿಸಿದ್ದಾರೆ.

ತೆಲಂಗಾಣದಲ್ಲಿ ನ.30 ರಂದು ಚುನಾವಣೆ ನಡೆಯಲಿದ್ದು, 119 ಸ್ಥಾನಗಳಿಗೆ ಕಣದಲ್ಲಿರುವ ಅಭ್ಯರ್ಥಿಗಳ ಭವಿಷ್ಯವು ಡಿಸೆಂಬರ್ 3ರಂದು ನಿರ್ಧಾರವಾಗಲಿದೆ. ಒಟ್ಟು ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಯು ನಡೆಯಲಿದ್ದು, ಡಿ.3ರಂದೇ ಎಲ್ಲ ರಾಜ್ಯಗಳಿಗೆ ಮತ ಎಣಿಕೆ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...