ಪಶ್ಚಿಮ ಬಂಗಾಳ | ಪರಿಶಿಷ್ಟ ಪಂಗಡ ಸ್ಥಾನಮಾನಕ್ಕೆ ಆಗ್ರಹಿಸಿ ಕುಡ್ಮಿ ಸಮುದಾಯ ಪ್ರತಿಭಟನೆ

Date:

  • ಖೇಮಸುಲಿ ರೈಲು ನಿಲ್ದಾಣದಲ್ಲಿ ಕುಡ್ಮಿ ಸಮುದಾಯ ಪ್ರತಿಭಟನೆ
  • ಸಮುದಾಯದ 25 ಸಾವಿರ ಮಂದಿ ಪ್ರತಿಭಟನೆಯಲ್ಲಿ ಭಾಗಿ

ಪಶ್ಚಿಮ ಬಂಗಾಳದ ಪಶ್ಚಿಮ ಮೇದಿನಿಪುರದಲ್ಲಿಯ ಖೇಮಸುಲಿ ರೈಲು ನಿಲ್ದಾಣದ ಹಳಿಗಳ ಮೇಲೆ ಮತ್ತು ರಸ್ತೆಯಲ್ಲಿ ಕುಡ್ಮಿ ಸಮುದಾಯ ಜನರು ಭಾನುವಾರ (ಏಪ್ರಿಲ್‌ 9) ಪ್ರತಿಭಟನೆ ನಡೆಸಿದರು.

ಕಳೆದ ಐದು ದಿನಗಳಿಂದ ಖೇಮಸುಲಿ ರೈಲು ನಿಲ್ದಾಣ ಮತ್ತು ರಸ್ತೆಗಳ ಮೇಲೆ ಪ್ರತಿಭಟನೆ ನಡೆಸುತ್ತ ತಮ್ಮ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ಪಟ್ಟಿಗೆ ಸೇರಿಸಬೇಕು ಎಂದು ಕುಡ್ಮಿ ಜನಾಂಗ ಒತ್ತಾಯಿಸಿದೆ.

“ಸ್ವಾತಂತ್ರ್ಯ ಪೂರ್ವದಲ್ಲಿ ಸಮುದಾಯಕ್ಕೆ ಎಸ್‌ಟಿ ಸ್ಥಾನಮಾನವಿತ್ತು. 1950ರಲ್ಲಿ ಕೇಂದ್ರ ಸರ್ಕಾರ ಕುಡ್ಮಿ ಜನಾಂಗ ಹೊರತುಪಡಿಸಿ 12 ಬುಡಕಟ್ಟು ಸಮುದಾಯಗಳಿಗೆ ಎಸ್‌ಟಿ ಸ್ಥಾನಮಾನ ನೀಡಿ ಅಧಿಸೂಚನೆ ಹೊರಡಿಸಿತು. ನಮಗೆ ಇತರ ಹಿಂದುಳಿದ ಸಮುದಾಯ (ಒಬಿಸಿ) ಸ್ಥಾನಮಾನ ನೀಡಲಾಯಿತು. ರಾಜ್ಯದಲ್ಲಿನ 43 ಸಮುದಾಯಗಳಿಗೆ ಎಸ್‌ಟಿ ಸ್ಥಾನಮಾನವಿರುವಂತೆ ನಮ್ಮ ಸಮುದಾಯಕ್ಕೂ ಈ ಮಾನ್ಯತೆ ನೀಡಬೇಕೆಂದು ನಾವು ಹೋರಾಡುತ್ತಿದ್ದೇವೆ” ಎಂದು ಆದಿವಾಸಿ ಕುಡ್ಮಿ ಸಮಾಜ ಕೇಂದ್ರ ಸಮಿತಿ ಜಂಟಿ ಕಾರ್ಯದರ್ಶಿ ಸಂಜಯ್‌ ಮಹತೊ ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೂರದ ಸಲ್ಬೋನಿ, ಕೇಶಿಯಾರಿ ಗ್ರಾಮಗಳಿಂದ ಕುಡ್ಮಿ ಜನಾಂಗದ ಸುಮಾರು 25 ಸಾವಿರ ಮಂದಿ ಖೇಮಸುಲಿಗೆ ಆಗಮಿಸಿ ಪ್ರತಿಭಟಿಸುತ್ತಿದ್ದಾರೆ.

ಕುಡ್ಮಿ ಜನಾಂಗದವರು ಎಸ್‌ಟಿ ಬೇಡಿಕೆಗೆ ಆಗ್ರಹಿಸಿ ಕಳೆದ ವರ್ಷ ಸೆಪ್ಟೆಂಬರ್‌ನಲ್ಲೂ ಪ್ರತಿಭಟಿಸಿದ್ದರು. ಅವರು 123 ಗಂಟೆಗಳ ಕಾಲ ನಿರಂತರ ಹೋರಾಟ ನಡೆಸಿದ್ದರು.

ಈ ಸುದ್ದಿ ಓದಿದ್ದೀರಾ? ಎನ್‌ಸಿಇಆರ್‌ಟಿ | ಪಠ್ಯ ಪರಿಷ್ಕರಣೆಗೆ ಸಮ್ಮತಿಸದ ಕೇರಳ ಸರ್ಕಾರ

“ರಾಜ್ಯದ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಸರ್ಕಾರ ಕೇಂದ್ರಕ್ಕೆ ಈ ಕುರಿತು ಪತ್ರ ಬರೆದಿದೆ. ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಈ ಕುರಿತು ಮಸೂದೆ ಅಂಗೀಕರಿಸಿದೆ. ಸಮುದಾಯವನ್ನು ಎಸ್‌ಟಿಗೆ ಸೇರಿಸುವ ಬಗ್ಗೆ ರಾಜ್ಯ ಸರ್ಕಾರ ಅಚಲ ನಿರ್ಧಾರ ಪ್ರಕಟಿಸಬೇಕು” ಎಂದು ಕುಡ್ಮಿ ನಾಯಕರೊಬ್ಬರು ಹೇಳಿದರು.

ರಾಜ್ಯದ ಬಂಕುರಾ, ಪಶ್ಚಿಮ ಮೇದಿನಿಪುರ ಹಾಗೂ ಝಾರ್‌ಗ್ರಾಮ್‌ ಜಿಲ್ಲೆಗಳಲ್ಲಿ ಕುಡ್ಮಿ ಸಮುದಾಯ ಜನರು ಸುಮಾರು 55 ಲಕ್ಷದಷ್ಟು ಜನಸಂಖ್ಯೆ ಹೊಂದಿದ್ದಾರೆ. ಕೃಷಿ ಹಾಗೂ ಪಶು ಪಾಲನೆ ಇವರ ಪ್ರಾಥಮಿಕ ವೃತ್ತಿ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...