ಕುಳುವ ಸಮುದಾಯವನ್ನು ಎಸ್.ಸಿ ಪಟ್ಟಿಯಿಂದ ತೆಗೆಯಲು ಸಾಧ್ಯವೇ ಇಲ್ಲ: ಸಿಎಂ ಸಿದ್ದರಾಮಯ್ಯ

Date:

ಕುಳುವ ಸಮುದಾಯವನ್ನು ಪರಿಶಿಷ್ಟ ಜಾತಿಯ ಪಟ್ಟಿಯಿಂದ ತೆಗೆಯಲು ಸಾಧ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆಯ ಮಾತುಗಳನ್ನು ಆಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.

ಕುಳುವ ಸಮಾಜದ ಹಲವರಲ್ಲಿ ತಮ್ಮನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಹೊರಗೆ ಇಡಬಹುದು ಎನ್ನುವ ಆತಂಕ ಹಲವರಲ್ಲಿದೆ. ಆದರೆ, ನಾನು ಹೇಳ್ತಾ ಇದ್ದೇನೆ. ಆ ಆತಂಕ ಬೇಡ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿಕ್ಷಣ ಹೆಚ್ಚಾದಷ್ಟೂ ಜಾತಿ ವ್ಯವಸ್ಥೆ ನಶಿಸಬೇಕಿತ್ತು. ಆದರೆ ಹಾಗೇ ಉಳಿದುಕೊಂಡಿದೆ. ಬಸವಾದಿ ಶರಣರು 12ನೇ ಶತಮಾನದಲ್ಲೇ ಜಾತಿ ವ್ಯವಸ್ಥೆ ಮತ್ತು ತಾರತಮ್ಯದ ವಿರುದ್ಧ ಕ್ರಾಂತಿ ಮಾಡಿದ್ದರು. ನುಲಿಯ ಚಂದಯ್ಯ ಬಸವಾದಿ ಶರಣರಲ್ಲಿ ಪ್ರಮುಖರು. ಶರಣರಲ್ಲೇ ಅಗ್ರಗಣ್ಯರು. ಹೀಗಾಗಿ ಬಸವಣ್ಣನವರಿಗೆ ನುಲಿಯ ಚಂದಯ್ಯರ ಬಗ್ಗೆ ಬಹಳ ಅಭಿಮಾನ ಪ್ರೀತಿ ಇತ್ತು ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಹಿಂಡೆನ್‌ಬರ್ಗ್ 2.0? ಒಸಿಸಿಆರ್‌ಪಿ ವರದಿಯ ನಂತರ ಅದಾನಿ ಷೇರುಗಳು ತೀವ್ರ ಕುಸಿತ

ಸನಾದಿ ಅಪ್ಪಣ್ಣ ಕೂಡ ಕುಳುವ ಸಮಾಜದವರು. ಡಾ. ರಾಜ್ ಕುಮಾರ್ ಅವರ ಅಭಿನಯದ ಸನಾದಿ ಅಪ್ಪಣ್ಣ ಸಿನಿಮಾವನ್ನು ನಾನು ಹಲವು ಬಾರಿ ನೋಡಿದ್ದೇನೆ. ನನಗೆ ರಾಜ್ ಕುಮಾರ್ ಅವರ ಸಿನಿಮಾವನ್ನು ಬರಿ ಒಂದು ಸಾರಿ ನೋಡಿದರೆ ಸಮಾಧಾನ ಆಗುತ್ತಿರಲಿಲ್ಲ. ಅದಕ್ಕೇ ಪದೇ ಪದೇ ನೋಡುತ್ತಿದ್ದೆ ಎಂದರು.

ಸಮಾಜದಲ್ಲಿ ಸ್ವಾರ್ಥಿಗಳಿಂದ ಜಾತಿ ವ್ಯವಸ್ಥೆ ರೂಪುಗೊಂಡಿತು. ಯಾವ್ಯಾವ ಕಸುಬನ್ನು ಯಾರು ಮಾಡುತ್ತಿದ್ದಾರೋ ಅದದೇ ಕಸುಬನ್ನೇ ಮಾಡಿಕೊಂಡಿರಲಿ. ಅವರ್ಯಾರೂ ಪ್ರಗತಿ ಕಾಣಬಾರದು ಎನ್ನುವ ಸ್ವಾರ್ಥ ಜಾತಿ ವ್ಯವಸ್ಥೆಗೆ ಕಾರಣ ಎಂದರು.

ಧರ್ಮವನ್ನು ಅರ್ಥ ಮಾಡಿಕೊಳ್ಳಲು ದೊಡ್ಡ ಗ್ರಂಥಗಳನ್ನು ಓದುವ ಅಗತ್ಯವಿಲ್ಲ. ಮನುಷ್ಯ ಮನುಷ್ಯನನ್ನು ಪ್ರೀತಿಸುವುದೇ ಧರ್ಮ. ಜಾತಿ-ಧರ್ಮದ ಹೆಸರಲ್ಲಿ ಮನುಷ್ಯರನ್ನು ದ್ವೇಷಿಸುವುದೇ ಅಧರ್ಮ. ಧರ್ಮದ ಬಗ್ಗೆ ಭಾಷಣ ಮಾಡುವುದು ಸುಲಭ. ಆದರೆ ಧರ್ಮವಂತರಾಗಿ ಬದುಕುವುದು ಕಷ್ಟ. ಧರ್ಮದ ಬಗ್ಗೆ ಭಾಷಣ ಮಾಡುವವರು ಧರ್ಮವಂತರಾಗಿ ಬದುಕುತ್ತಿದ್ದಾರಾ ಎಂದು ಸಿಎಂ ಪ್ರಶ್ನಿಸಿದರು.

ಸಾಣೇಹಳ್ಳಿ ಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು ವಹಿಸಿದ್ದರು.

ಕೊರಮ ಕೊರಚ ಕೊರವ ಸಮುದಾಯಗಳ ಒಕ್ಕೂಟದ ರಾಜ್ಯಾಧ್ಯಕ್ಷರಾದ ಶಿವಾನಂದ ಎಂ ಭಜಂತ್ರಿ, ಸಮುದಾಯದ ಮುಖಂಡರುಗಳಾದ ಎಕೆಎಂಎಸ್ ನ ಪಲ್ಲವಿ, ಬಿ.ಎಸ್. ಆನಂದಕುಮಾರ್ ಏಕಲವ್ಯ, ಆದರ್ಶ್ ಯಲ್ಲಪ್ಪ, ಎಂ.ವೆಂಕಟೇಶ್, ಜಿ.ಚಂದ್ರಣ್ಣ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿದ್ದರು.

ನುಲಿಯ ಚಂದಯ್ಯ ಭವನಕ್ಕೆ ನಿವೇಶನ ಮತ್ತು ಅನುದಾನ

ನುಲಿಯ ಚಂದಯ್ಯ ಭವನ ನಿರ್ಮಾಣಕ್ಕೆ ಅಗತ್ಯ ನಿವೇಶನ ಮತ್ತು ಅನುದಾನ ನೀಡಬೇಕು ಎನ್ನುವ ಸಮುದಾಯದ ಬೇಡಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿದರು. ಬೇಡಿಕೆ ಈಡೇರಿಕೆಯ ಭರವಸೆಯನ್ನು ವೇದಿಕೆಯಲ್ಲೇ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...