ಕುಮಾರಸ್ವಾಮಿ ಅವರೇ, ಜನ ನಿಮ್ಮನ್ನು ನೋಡಿ ನಗುತ್ತಿದ್ದಾರೆ: ಡಿಸಿಎಂ ಡಿ ಕೆ ಶಿವಕುಮಾರ್ ಕುಟುಕು

Date:

  • ಬ್ಲೂ ಫಿಲಂ ಆರೋಪದ ಬಗ್ಗೆ ಕುಮಾರಸ್ವಾಮಿಗೆ ತಿರುಗೇಟು
  • ‘ಕುಮಾರಸ್ವಾಮಿ ಹತಾಶೆ ಈ ರೀತಿಯಾಗಿ ಮಾತನಾಡಿಸುತ್ತಿದೆ’

ಕುಮಾರಸ್ವಾಮಿ ಅವರು ಏನೇನೋ ಮಾತಾಡಿ ಅವರ ಗೌರವ ಅವರೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಅವರಿಗೆ ಒಳ್ಳೆಯದಾಗುವುದಿಲ್ಲ. ಜನ ಅವರನ್ನು ನೋಡಿ ನಗುತ್ತಾರೆ ಎಂದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ವಿಷಾದ ವ್ಯಕ್ತಪಡಿಸಿದರು.

ಕುಮಾರಸ್ವಾಮಿಯವರು ನಿಮ್ಮ ವಿರುದ್ಧ ಬ್ಲೂ ಫಿಲಂ ಆರೋಪದ ಬಗ್ಗೆ ಮತ್ತೆ ಪ್ರಶ್ನೆ ಎತ್ತಿದ್ದಾರೆ ಎಂದು ಕೇಳಿದಾಗ ಡಿ ಕೆ ಶಿವಕುಮಾರ್, ಸದಾಶಿವನಗರದ ನಿವಾಸದ ಎದುರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಮಾಜಿ ಮುಖ್ಯಮಂತ್ರಿಯ ಮಾತಿಗೆ ತೂಕ, ಗೌರವ ಇರಬೇಕು. ನಾನು ಕ್ಷೇತ್ರಕ್ಕೆ ಹೋಗದಿದ್ದರೂ ನನ್ನನ್ನು 1,23,000 ಮತಗಳ ಅಂತರದಿಂದ ಗೆಲ್ಲಿಸಿದ್ದಾರೆ. ನನ್ನ ಕನಕಪುರ ಕ್ಷೇತ್ರದ ಜನತೆ ನನ್ನ ಮೇಲೆ ಅಷ್ಟೊಂದು ನಂಬಿಕೆ ಇಟ್ಟಿದ್ದಾರೆ. ಕುಮಾರಸ್ವಾಮಿಯವರು ಹತಾಶರಾಗಿದ್ದಾರೆ. ಅವರ ಹತಾಶೆ ಅವರನ್ನು ಈ ರೀತಿಯಾಗಿ ಮಾತನಾಡಿಸುತ್ತಿದೆ” ಎಂದು ತಿರುಗೇಟು ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಡಿ ಕೆ ಶಿವಕುಮಾರ್ ಹೀಗೆ ಮಾಡಿದ್ದರೇ ಎಂದು ನಿಮ್ಮ ಕಾರ್ಯಕರ್ತರನ್ನೇ ಕೇಳಿ. ನಾನು ಈ ರೀತಿಯ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದೆ ಎಂದು ನಮ್ಮ ಕ್ಷೇತ್ರದ ಜನರು ಹಾಗೂ ನಿಮ್ಮ ಕಾರ್ಯಕರ್ತರು ಹೇಳಿದರೆ, ಈ ಕೂಡಲೇ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ” ಎಂದು ಸವಾಲು ಹಾಕಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೇಂದ್ರದ ಏಜೆಂಟರಾಗಿರುವ ರಾಜ್ಯಪಾಲರುಗಳಿಗೆ ಸುಪ್ರೀಮ್ ಚಾವಟಿ!

ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಆಗುತ್ತಿರುವ ಅನ್ಯಾಯ ಸರಿಪಡಿಸಲಿ

ಬಿಜೆಪಿ ಬರ ಪ್ರವಾಸ ಮಾಡಲು ಸಜ್ಜಾಗುತ್ತಿದೆ ಎಂದು ಕೇಳಿದಾಗ “ಕೇಂದ್ರ ಸರ್ಕಾರದಿಂದ, ರಾಜ್ಯ ಸರ್ಕಾರಕ್ಕೆ ಆಗುತ್ತಿರುವ ಅನ್ಯಾಯವನ್ನು ಮೊದಲು ಸರಿಪಡಿಸಲಿ. ರಾಜ್ಯದ ಎಲ್ಲಾ ಸಂಸದರನ್ನು ಕರೆದುಕೊಂಡು ಹೋಗಿ ಬರ ಪರಿಹಾರಕ್ಕೆ ಕೇಂದ್ರದಿಂದ ಹಣ ಬಿಡುಗಡೆ ಮಾಡಿಸಲಿ” ಎಂದು ಹೇಳಿದರು.

“ಕೇಂದ್ರ ಸರ್ಕಾರವೇ ಈಗಾಗಲೇ ಬರ ಪರಿಸ್ಥಿತಿಯ ಕುರಿತು ವರದಿ ನೀಡಿದೆ. ಪ್ರವಾಸ ಮಾಡುವವರನ್ನು ನಾವು ಬೇಡ ಎಂದು ಹೇಳುವುದಿಲ್ಲ. ಪಕ್ಷ ಕಟ್ಟಿಕೊಳ್ಳಲಿ, ಪ್ರವಾಸ ಮಾಡಲಿ, ನಮಗೇನು ತೊಂದರೆ ಇಲ್ಲ. ನೂರು ದಿನ ಇರುವ ಉದ್ಯೋಗ ಖಾತ್ರಿ ಯೋಜನೆಯ ಮಾನವ ದಿನಗಳನ್ನು 150 ದಿನಕ್ಕೆ ಹೆಚ್ಚಳ ಮಾಡಲಿ. ಆಗ ಈ ದೇಶಕ್ಕೆ ಬಿಜೆಪಿ ಒಳ್ಳೆಯದನ್ನು ಮಾಡುತ್ತಿದೆ ಎಂದು ಈ ದೇಶದ ಜನ ಮತ್ತು ನಾವು ನಂಬುತ್ತೇವೆ” ಎಂದು ಕುಹಕವಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...