ಕರ್ನಾಟಕಕ್ಕೆ ತಮ್ಮ ಹೆಸರು ಇಟ್ಟುಕೊಳ್ಳಲಿ: ಸಿದ್ದರಾಮಯ್ಯ ವಿರುದ್ಧ ಎಚ್‌ಡಿಕೆ ವ್ಯಂಗ್ಯ

Date:

ರಸ್ತೆಗೆ ತಮ್ಮ ಹೆಸರು ನಾಮಕರಣ ಮಾಡುವ ವಿಷಯ ವಿವಾದದ ಸ್ವರೂಪ ಪಡೆದುಕೊಂಡರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾಣಮೌನಕ್ಕೆ ಶರಣಾಗಿದ್ದಾರೆ. ರಸ್ತೆಗೆ ತಮ್ಮ ಹೆಸರಿಡಬೇಕು ಎನ್ನುವ ಆಕಾಂಕ್ಷೆ ಬಹುಶಃ ಸಿಎಂ ಅವರಿಗೆ ಇರಬಹುದು. ಅದಕ್ಕೆ ಅವರು ಜಾಣಮೌನಕ್ಕೆ ಶರಣಾಗಿ ತಮ್ಮ ಪಕ್ಷದ ಕಾರ್ಯಕರ್ತರನ್ನು ಚಿತಾವಣೆ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದರು.

ಮೈಸೂರಿನಲ್ಲಿ ಶನಿವಾರ ದಿಶಾ ಸಭೆಗೂ ಮೊದಲು ಮಾಧ್ಯಮಗಳ ಜತೆ ಮಾತನಾಡಿದ ಅವರು, “ಒಂದು ವೇಳೆ ಯಾವುದಾರೂ ರಸ್ತೆ ಅಥವಾ ಬಡಾವಣೆಗೆ ತಮ್ಮ ಹೆಸರು ಇಟ್ಟುಕೊಳ್ಳಬೇಕು ಎನ್ನುವ ಮನಸ್ಸಿದ್ದರೆ, ದೇವನೂರು ಬಡಾವಣೆಗೆ, ಕೆಸರೆ ಗ್ರಾಮಕ್ಕೆ ಸಿಎಂ ಸಿದ್ದರಾಮಯ್ಯ ಅವರ ಹೆಸರಿಡಲಿ. ಅಲ್ಲಿಯೇ ಅಲ್ಲವೇ ಅವರು ಬಹುದೊಡ್ಡ ಸಾಧನೆ ಮಾಡಿರುವುದು” ಎಂದು ವ್ಯಂಗ್ಯವಾಡಿದರು.

ಕರ್ನಾಟಕಕ್ಕೆ ಸಿದ್ದರಾಮಯ್ಯ ಹೆಸರು ಇಡಲಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿದ್ದರಾಮಯ್ಯ ಅವರ ಹೆಸರನ್ನು ರಸ್ತೆಗೆ ಮಾತ್ರವಲ್ಲ, ಮೈಸೂರಿಗೇ ಇಡಬೇಕು ಎಂದು ಶಾಸಕರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿ, “ಮೈಸೂರಿಗೆ ಏಕೆ, ಇಡೀ ಕರ್ನಾಟಕಕ್ಕೆ ಇಟ್ಟುಬಿಡಿ. ಈಗಷ್ಟೇ 15% ಏರಿಕೆ ಮಾಡಿದ್ದಾರೆ, ಅದುವೇ ತಾನೇ ಇವರು ರಾಜ್ಯಕ್ಕೆ ಕೊಟ್ಟಿರುವ ಕೊಡುಗೆ. ಮೈಸೂರು ರಾಜಮನೆತನ, ದೇವರಾಜ ಅರಸು ಅವರು ಬಹುದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಅದಕ್ಕೆ ಇವರ ಹೆಸರು ಇಡಬೇಕು” ಎಂದು ಟಾಂಗ್ ಕೊಟ್ಟರು.

“ಮೈಸೂರು ನಗರಕ್ಕೆ, ಇಡೀ ರಾಜ್ಯದ ಅಭಿವೃದ್ಧಿಗೆ ಯಾರು ಎಷ್ಟು ಕೊಡುಗೆ ಕೊಟ್ಟಿದ್ದಾರೆ ಎನ್ನುವುದು ರಾಜ್ಯದ ಜನರಿಗೆ ಗೊತ್ತಿದೆ. ಸರ್ಕಾರ ಮತ್ತು ಸಿದ್ದರಾಮಯ್ಯ ಅವರು ಒಡೆಯರ್ ಅವರ ಮನೆತನಕ್ಕೆ ಅಪಮಾನ ಮಾಡುತ್ತಿದೆ. ರಸ್ತೆಯಲ್ಲಿ ಬಿಸಿಲಿನಲ್ಲಿ ನಿಂತು ಯಾಕೆ ಪ್ರತಿಭಟನೆ ಮಾಡುತ್ತೀರಾ ಎಂದು ಬಿಜೆಪಿ ಗೆಳೆಯರಿಗೆ ಕೇಳಿದ್ದೇನೆ. ಇಲ್ಲಿ ಸಿಎಂ ಅವರೇ ಚಿತಾವಣೆ ಮಾಡುತ್ತಿದ್ದಾರೆ ಎನ್ನುವುದು ನನ್ನ ಅಭಿಪ್ರಾಯ. ಪ್ರಿನ್ಸೆಸ್ ರಸ್ತೆ ಬದಲಾವಣೆ ಮುನ್ನಲೆಗೆ ಬಂದಾಗಲೂ ಸಿಎಂ ಮೌನವಾಗಿದ್ದಾರೆ! ಅವರು ಜಾಣಮೌನ ವಹಿಸಿದ್ದಾರೆ. ಸುಖಾಸುಮ್ಮನೆ ಮಹಾರಾಜರ ಹೆಸರು ಇರುವ ರಸ್ತೆಯ ಹೆಸರು ತೆಗೆಯುವ ಬದಲು ಕೆಸರೆ ಗ್ರಾಮಕ್ಕೆ ಸಿದ್ದರಾಮಯ್ಯ ಅವರ ಹೆಸರನ್ನು ಇಟ್ಟರೆ ಆಯಿತು” ಎಂದು ತರಾಟೆಗೆ ತೆಗೆದುಕೊಂಡರು.

ಜನರ ಹೃದಯದಲ್ಲಿರಬೇಕು

“ನಾನು ಈ ಹಿಂದೆ ಬಿಜೆಪಿ ಜತೆ ಸೇರಿ ಸರಕಾರ ಮಾಡಿದ್ದೆ. ಮುಖ್ಯಮಂತ್ರಿಯಾಗಿ ನಾನು ಮೈಸೂರಿಗೆ ಎಷ್ಟು ಕೊಡುಗೆ ನೀಡಿದ್ದೇನೆ? ಸಿದ್ದರಾಮಯ್ಯ ಅವರು ಡಿಸಿಎಂ ಆಗಿ, ಪ್ರತಿಪಕ್ಷ ನಾಯಕರಾಗಿ, ಎರಡು ಅವಧಿಗೆ ಸಿಎಂ ಆಗಿ ಏನು ಕೊಡುಗೆ ನೀಡಿದ್ದಾರೆ ಎನ್ನುವ ಬಗ್ಗೆ ಚರ್ಚೆ ನಡೆಯಲಿ. 2006-2007ರಲ್ಲಿ ನಾನು ಮೈಸೂರಿಗೆ ಸಾಕಷ್ಟು ಅನುದಾನ ಕೊಟ್ಟಿದ್ದೇನೆ. ಎಷ್ಟು ಮನೆ ಮಂಜೂರು ಮಾಡಿದ್ದೇನೆ, ಎಷ್ಟು ರಾಜಕಾಲುವೆ ಅಭಿವೃದ್ಧಿ ಮಾಡಿದ್ದೇನೆ, ಜೆ ನರ್ಮ್ ಯೋಜನೆ ಮೂಲಕ ₹2000 ಕೋಟಿ ಅನುದಾನವನ್ನು ಮೈಸೂರಿಗೆ ತಂದಿದ್ದೇನೆ. ಅದೆಲ್ಲ ಮಾಡಿದ್ದು ನಾನೇ ಎಂದು ಎಲ್ಲಾದರೂ ಹೇಳಿದ್ದೇನೆಯೇ? ಅದಕ್ಕೆ ಹಾದಿಬೀದಿಗೆ ನನ್ನ ಹೆಸರು ಇಡಿ ಎಂದು ಕೇಳಲು ಆಗುತ್ತದೆಯೇ? ನಾವೇನು ಕೆಲಸ ಮಾಡಿದ್ದೇವೆ ಎಂಬ ಆತ್ಮತೃಪ್ತಿ ಇರಬೇಕು, ಅದು ಜನರ ಹೃದಯದಲ್ಲಿರಬೇಕು” ಎಂದರು.

ನಮ್ಮ ಶಾಸಕರು ಒಗ್ಗಟ್ಟಾಗಿದ್ದಾರೆ

ಅಪರೇಷನ್ ಹಸ್ತದ ವಿಚಾರ ಕುರಿತು ಖಾರವಾಗಿ ಪ್ರತಿಕ್ರಿಯಿಸಿ, “ಅದು ನಡೆಯುತ್ತಲೇ ಇದೆ. ನಮ್ಮ ಪಕ್ಷದಲ್ಲಿ 18 ಶಾಸಕರಿದ್ದಾರೆ. ಎಲ್ಲರೂ ಒಗ್ಗಟ್ಟಾಗಿ ಒಟ್ಟಿಗೆ ಇದ್ದಾರೆ. ಅದನ್ನೇ ಶಾಸಕ ಹರೀಶ್ ಗೌಡ ಹೇಳಿದ್ದಾರೆ. ಬೆಳಗಾವಿಯಲ್ಲಿ ಶಾಸಕರು ಕೂತು ಮಾತನಾಡಿದ್ದಾರೆ. ನಮ್ಮ ಶಾಸಕರು ನಮ್ಮ ಜೊತೆ ಇರುತ್ತಾರೆ. ಮನೆ ಎಂದ‌ ಮೇಲೆ ಮುನಿಸು ಇರೋದಿಲ್ಲವೇ? ಶಾಸಕ ಜಿ.ಟಿ.ದೇವೇಗೌಡರ ನಡುವಿನ ಮುನಿಸು ಗಂಡ ಹೆಂಡತಿಯ ಮುನಿಸು. ಗಂಡ- ಹೆಂಡತಿ ಜಗಳ ಉಂಡು ಮಲಗುವ ತನಕ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ” ಎಂದರು.

“ನಿಖಿಲ್ ಕುಮಾರಸ್ವಾಮಿ ಅವರು ಜೆಡಿಎಸ್ ರಾಜ್ಯಾಧ್ಯಕ್ಷರಾಗುವ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆ ನಡೆದಿಲ್ಲ. ಇನ್ನು ನಮ್ಮ ಪಕ್ಷದಲ್ಲಿ ಸಾಂಸ್ಥಿಕ ಚುನಾವಣೆಗಳು ನಡೆಯಬೇಕು. ಆ ನಂತರ ರಾಜ್ಯಾಧ್ಯಕ್ಷರನ್ನು ಚುನಾವಣೆ ಮೂಲಕ ಆಯ್ಕೆ ಮಾಡುತ್ತೇವೆ” ಎಂದು ಕುಮಾರಸ್ವಾಮಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...