ಪ್ರಜ್ವಲ್ ಪ್ರಕರಣದಿಂದ ದೇವೇಗೌಡರು ತುಂಬಾ ನೊಂದಿದ್ದಾರೆ: ಮೊದಲ ಬಾರಿಗೆ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ

Date:

ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಹಾಗೂ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ , “ಪ್ರಜ್ವಲ್ ಪ್ರಕರಣದಿಂದ ದೇವೇಗೌಡ ಹಾಗೂ ಅವರ ಪತ್ನಿ ತುಂಬಾ ನೊಂದುಕೊಂಡಿದ್ದಾರೆ” ಎಂದಿದ್ದಾರೆ.

ಬೆಂಗಳೂರಿನ ಪದ್ಮನಾಭನಗರ ನಿವಾಸದಲ್ಲಿ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡರ ಆರೋಗ್ಯವನ್ನು ವಿಚಾರಿಸಿದ ಬಳಿಕ ಮಾತನಾಡಿದ ಅವರು, “ಕುಮಾರಸ್ವಾಮಿ, ದೇವೇಗೌಡರು ಹಲವಾರು ವರ್ಷಗಳಿಂದ ರಾಜಕೀಯದಲ್ಲಿ ಇದ್ದಾರೆ. ವಿಶೇಷವಾಗಿ ದೇವೇಗೌಡರ ವೈಯಕ್ತಿಕ ಬದುಕು ತೆರೆದ ಪುಸ್ತಕ. ಅದರಲ್ಲಿ ಮುಚ್ಚುಮರೆ ಇಲ್ಲ. ದೇವೇಗೌಡರಾಗಲಿ, ಅಜ್ಜಿ ಚೆನ್ನಮ್ಮ ಅವರಾಗಲಿ ನಮ್ಮಂತ ಯುವಕರಿಗೆ ಸ್ಫೂರ್ತಿ. ದಂಪತಿ ಯಾವ ರೀತಿ ಬಾಳಿ ಬದುಕಬೇಕು ಅನ್ನೋದಕ್ಕೆ ಅವರಿಗಿಂತ ಉದಾಹರಣೆ ಯಾರು ನನಗೆ ಕಾಣುವುದಿಲ್ಲ. ಆದರೆ, ಈ ಪೆನ್‌ಡ್ರೈವ್ ಘಟನೆಯಿಂದ ತುಂಬಾ ನೊಂದಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇವೇಗೌಡರಿಗೆ 91 ವರ್ಷ. ಸಹಜವಾಗಿ ಇಂತಹ ವಿಷಯ ಕೇಳಿದ ಮೇಲೆ ದೇವೇಗೌಡರ ಮೇಲೆ ಯಾವ ರೀತಿ ಪರಿಣಾಮ ಆಗಿರುತ್ತೆ, ಅಘಾತವಾಗಿರುತ್ತೆ ಅಂತ ಯಾರು ಊಹೆ ಮಾಡಲು ಸಾಧ್ಯವಿಲ್ಲ. ದೇವೇಗೌಡರು ಸಾಕಷ್ಟು ನೊಂದಿದ್ದಾರೆ. ಇಡೀ ರಾಜ್ಯದ ಜನತೆಗೂ ಕೂಡಾ ದೇವೇಗೌಡ ಮನಸಿನ ಮೇಲೆ ಯಾವ ರೀತಿ ಪರಿಣಾಮ ಬೀರಿರಬೇಕು ಅಂತ ಎಲ್ಲರಿಗೂ ಗೊತ್ತಿರುವ ವಿಷಯ” ಎಂದರು.

“ನನಗೆ ಒಂದು ವಿಷಯಕ್ಕೆ ದುಃಖ ಆಗಿದೆ. ಆ ವಿಡಿಯೋಗಳನ್ನು ನೋಡಲು ನಾನು ಧೈರ್ಯ ಮಾಡಲಿಲ್ಲ, ನನ್ನ ಸ್ನೇಹಿತರು ಫೋನ್‌ ಮಾಡಿ ಹೇಳಿದರು. ಬ್ಲರ್‌ ಮಾಡದೇ ವಿಡಿಯೋ ಹರಿಬಿಟ್ಟಿದ್ದಾರೆ. ಆ ಹೆಣ್ಣು ಮಕ್ಕಳ ಮುಖ ಕಾಣುವ ರೀತಿ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಈ ರೀತಿ ವಿಡಿಯೋ ಬಿಡುಗಡೆ ಮಾಡಿರುವವರ ಮೇಲೆ ಕ್ರಮ ಆಗಬೇಕು” ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

ಇದನ್ನು ಓದಿದ್ದೀರಾ? ಈ ದಿನ ಸಮೀಕ್ಷೆ | ‘ಬಿಜೆಪಿ ಬಂದ ಬಳಿಕವೂ ಭ್ರಷ್ಟಾಚಾರ ಕಡಿಮೆಯಾಗಿಲ್ಲ’ ಎಂದ ಉತ್ತರ ಕರ್ನಾಟಕದ ಮಂದಿ!

“ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವೇಗೌಡ, ಕುಮಾರಸ್ವಾಮಿಯವರನ್ನ ಎಳೆದು ತರೋದು ಸರಿಯಲ್ಲ. ತಪ್ಪು ಮಾಡಿದವರು ತಲೆ ಬಾಗಲೇಬೇಕು. ತಪ್ಪಿಸಿಕೊಳ್ಳುವ ಪ್ರಶ್ನೆ ಇಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈಗಾಗಲೇ ಎಸ್‌ಐಟಿ ರಚನೆ ಮಾಡಿದ್ದು, ತನಿಖೆ ಆಗುತ್ತಿದೆ. ಕಾನೂನಿಗಿಂತ ಯಾರೂ ದೊಡ್ಡವರಿಲ್ಲ. ಅಂತಿಮವಾಗಿ ಎಸ್‌ಐಟಿ ವರದಿ ಬಂದ ಮೇಲೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳುತ್ತಾರೆ. ಅದರ ಬಗ್ಗೆ ನಾನು ಹೆಚ್ಚಿಗೆ ಮಾತನಾಡಲ್ಲ. ಅಂತಿಮವಾಗಿ ತನಿಖಾ ವರದಿ ಬಂದ ಮೇಲೆ ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ” ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...