ಕುಂಭಮೇಳ ಭೇಟಿ ನನ್ನ ವೈಯಕ್ತಿಕ ವಿಚಾರ: ಡಿಸಿಎಂ ಡಿ ಕೆ ಶಿವಕುಮಾರ್

Date:

ಗಂಗೆಯಲ್ಲಿ ಮಿಂದ ತಕ್ಷಣ ಡಿ ಕೆ ಶಿವಕುಮಾರ್​ ಅವರ ಪಾಪಗಳೆಲ್ಲ ಕಳೆದುಹೋಗುತ್ತಾ? ಎಂಬ ವಿಪಕ್ಷ ನಾಯಕ ಆರ್​ ಅಶೋಕ್​ ಹೇಳಿಕೆಗೆ ಡಿಸಿಎಂ ಡಿಕೆ ಶಿಕವಕುಮಾರ್​ ತಿರುಗೇಟು ನೀಡಿದ್ದಾರೆ.

ಕುಂಭಮೇಳಕ್ಕೆ ಹೋಗುವುದು ಬಿಡುವುದು ನನ್ನ ವೈಯಕ್ತಿಕ ವಿಚಾರ. ನನ್ನ ವೈಯಕ್ತಿಕ ನಂಬಿಕೆ, ಭಕ್ತಿ ಬಗ್ಗೆ ಮಾತನಾಡುವ ನೈತಿಕತೆ ಯಾರಿಗೂ ಇಲ್ಲ. ಎಲ್ಲರಿಗೂ ಅವರದ್ದೇ ಆದ ಭಕ್ತಿ, ನಂಬಿಕೆಗಳು ಇರುತ್ತವೆ ಎಂದು ವಾಗ್ದಾಳಿ ನಡೆಸಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದು ನಮ್ಮ ಧರ್ಮ-ಕರ್ಮ, ನಮ್ಮ ಆಚಾರ-ವಿಚಾರ ಮತ್ತು ನಮ್ಮ ನಂಬಿಕೆ. ಗಂಗೆ, ಕಾವೇರಿ, ಕೃಷ್ಣ ಮತ್ತು ಭ್ರಹ್ಮಪುತ್ರ ನದಿಗಳು ಯಾರ ಸ್ವತ್ತು ಅಲ್ಲ. ಹಾಗಾದರೆ, ಅವರು ಅಶೋಕ್ ಅಂತ ಯಾಕೆ ಹೆಸರು ಇಟ್ಟುಕೊಂಡಿದ್ದಾರೆ. ಅಶೋಕ್ ಬದಲು ಕಲ್ಲು ಮಣ್ಣು ಎಂದು ಹೆಸರು ಇಟ್ಟುಕೊಳ್ಳಬಹುದಲ್ಲ. ನನ್ನ ನಂಬಿಕೆ ಬಗ್ಗೆ ಮಾತಾಡುವ ಅಶೋಕ್​ ಅವರಿಗೆ ಏನೋ ಸಮಸ್ಯೆ ಇರಬೇಕು. ಮೊದಲು ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಲಿ. ನನ್ನ ಹೆಸರು ಹೇಳದಿದ್ರೆ ಕೆಲವರಿಗೆ ನಿದ್ದೆ ಬರುವುದಿಲ್ಲ, ಉತ್ಸಾಹ ಬರಲ್ಲ ಎಂದು ಆಕ್ರೋಶಗೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಪಂಚದಲ್ಲಿ ಹಲವಾರು ಧಾರ್ಮಿಕ ಆಚರಣೆ, ನಂಬಿಕೆಗಳಿವೆ. ನಾನು ನನ್ನ ದೇವರನ್ನು ನಂಬುತ್ತೇನೆ. ಕೆಲವರು ಹಸ್ತ ನೋಡಿಕೊಳುತ್ತಾರೆ, ಇನ್ನೂ ಕೆಲವರು ನೀರು, ಆಕಾಶ, ಸೂರ್ಯನನ್ನು ನಂಬುತ್ತಾರೆ. ಇದರಲ್ಲಿ ಸರಿ ತಪ್ಪು ಎಂಬುದಿಲ್ಲ, ಅವರವರ ನಂಬಿಕೆ ಅಷ್ಟೇ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನಿದ್ರಿಸುವ ಸಚಿವರು, ಪ್ರಶ್ನಿಸದ ಸಂಸದರು- ಕರ್ನಾಟಕದ ಹಿತ ಕಾಪಾಡುವವರು ಯಾರು?

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಅವರು, ಅವರ ವಿಚಾರ ಹೇಳಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್​ ಹೇಳಿದರು.

ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ವಿಚಾರವಾಗಿ ಮಾತನಾಡಿದ ಅವರು, ಎರಡನೇ ವಿಮಾನ ನಿಲ್ದಾಣಕ್ಕೆ ನಮ್ಮ ಕೈಗಾರಿಕಾ ಸಚಿವರು ಸ್ಥಳ ಹುಡುಕಾಡುತ್ತಿದ್ದಾರೆ. ಇನ್ನು, ಈ ಬಗ್ಗೆ ನನ್ನ ಮತ್ತು ಮುಖ್ಯಮಂತ್ರಿಗಳ ಬಳಿ ಚರ್ಚೆ ಮಾಡಿಲ್ಲ. ಅಂತಿಮ ನಿರ್ಧಾರವಾಗಿಲ್ಲ ಎಂದರು.

ಬೆಂಗಳೂರಿನಲ್ಲಿ ನೀರಿನ ದರ​ ಏರಿಕೆ ಮಾಡಬೇಕೆಂಬ ಪ್ರಸ್ತಾಪ ಬಂದಿದೆ. ಮುಂದಿನ ಸಂಪುಟ ಸಭೆಯಲ್ಲಿ ಕಾವೇರಿ ನೀರಿನ ದರ​ ಏರಿಕೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...