ಲಕ್ಷ್ಮಣ ಸವದಿ ಕಾಂಗ್ರೆಸ್‌ ಪರವಾಗಿದ್ದಾರೆ, ಅವರು ಪಕ್ಷ ಬಿಡುವುದಿಲ್ಲ: ಸಚಿವ ಸತೀಶ ಜಾರಕಿಹೊಳಿ

Date:

“ಜಗದೀಶ ಶೆಟ್ಟರ್ ಅವರದು ಬೇರೆ ಪ್ರಕರಣ, ಲಕ್ಷ್ಮಣ ಸವದಿ ಅವರದು ಬೇರೆ ಕೇಸ್‌. ಒಂದು ಕೇಸ್‌ ಅನ್ನು ಇನ್ನೊಂದಕ್ಕೆ ಹೋಲಿಸಲಾಗದು. ಶಾಸಕರಾದ ಲಕ್ಷ್ಮಣ ಸವದಿ ನಮ್ಮ ಪಕ್ಷದ ಪರವಾಗಿದ್ದಾರೆ. ಅವರು ಕಾಂಗ್ರೆಸ್‌ ಬಿಡುವುದಿಲ್ಲ” ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಸವದಿ ಬಿಜೆಪಿ ಸೇರುತ್ತಾರೆ ಎಂಬುದು ಸುಳ್ಳು. ಎಲ್ಲ ಕೇಸ್‌ ಬೇರೆ ಬೇರೆ ಇರುತ್ತವೆ. ಜಗದೀಶ್‌ ಶೆಟ್ಟರ್‌ ಕೇಸ್‌ಗೆ ಹೋಲಿಕೆ ಬೇಡ” ಎಂದರು.

ಲಕ್ಷ್ಮಣ ಸವದಿ ಅವರಿಗೆ ಮಂತ್ರಿ ಸ್ಥಾನದ ಆಫರ್ ನೀಡಲಾಗಿದೆಯೇ ಎಂಬ ಪ್ರಶ್ನೆಗೆ, “ಒಳ್ಳೆಯವರಿಗೆ ಅವಕಾಶವಿದೆ. ಅವರಿಗೂ ಸಾಮರ್ಥ್ಯವಿದೆ. ಆ ಬಗ್ಗೆ ಇನ್ನೂ ಸಮಯವಿದೆ. ಉತ್ತಮ ಕೆಲಸ ಮಾಡಿದ್ದಾರೆ. ಸಚಿವ ಸ್ಥಾನ ಸಿಗುವ ಅವಕಾಶಗಳು ಮುಂದಿನ ದಿನಗಳಲ್ಲಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲೋಕಸಭೆ ಚುನಾವಣೆ ವಿಚಾರವಾಗಿ ಮಾತನಾಡಿ, ಬೆಳಗಾವಿ ಲೋಕಸಭೆ ಕ್ಷೇತ್ರದ ಟಿಕೆಟ್‌ಗೆ ಇಬ್ಬರ ಹೆಸರು ಕೊಟ್ಟಿದ್ದೇವೆ. ಆದರೆ, ಒಬ್ಬರ ಹೆಸರನ್ನು ಪಕ್ಷದ ಹೈಕಮಾಂಡ್ ಅಂತಿಮಗೊಳಿಸಬೇಕಿದೆ. ಈ ವಿಚಾರವಾಗಿ ಮುಖ್ಯಮಂತ್ರಿ ಜತೆಗೆ, ಇನ್ನೊಂದು ಸುತ್ತಿನ ಚರ್ಚೆ ಆಗಬೇಕಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗರ ರಥ, ರಕ್ತ ಮತ್ತು ಭಾರತ ರತ್ನ

“ಚಿಕ್ಕೋಡಿ ಕ್ಷೇತ್ರದಿಂದ ನಾನು ಸ್ಪರ್ಧಿಸುವುದಿಲ್ಲ. ಪ್ರತಿ ಬಾರಿ ಒದಿಸಿಕೊಳ್ಳಲು ನಾನೇನೂ ಫುಟ್‌ಬಾಲ್‌ ಅಲ್ಲ” ಎಂದಿರುವ ಪ್ರಕಾಶ ಹುಕ್ಕೇರಿ ಮಾತಿಗೆ ಪ್ರತಿಕ್ರಿಯಿಸಿ, “ಪ್ರಕಾಶ್ ಹುಕ್ಕೇರಿ ಸ್ಪರ್ಧಿಸುವುದಿಲ್ಲ ಎಂದಾಗ ಸ್ಪರ್ಧಿಸುತ್ತಾರೆ. ಸ್ಪರ್ಧಿಸುತ್ತೇನೆ ಎಂದಾಗ ಸ್ಪರ್ಧಿಸಲ್ಲ. ಅವರ ಕೋಡ್‌ ಲಾಂಗ್ವೇಜ್‌ ನಮಗೆ ಗೊತ್ತಿದೆ” ಎಂದರು.

ಧ್ವಜ ವಿಚಾರವಾಗಿ ಮಾತನಾಡಿ, “ರಾಜ್ಯ ಅಭಿವೃದ್ಧಿಯಾಗಬೇಕು, ಸಮಾನತೆ ಬರಬೇಕು. ಈ ಧ್ವಜಗಳ ಹಾವಳಿ ಬಂದ್ ಆಗಬೇಕು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...