ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಅಶ್ಲೀಲ ಪದ ಬಳಕೆ ಆರೋಪ, ಸಿ ಟಿ ರವಿ ವಿರುದ್ಧ ಸಭಾಪತಿಗೆ ದೂರು

Date:

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವೇಳೆ ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ ಟಿ ರವಿ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸಿ ಟಿ ರವಿ ಅವರ ಮಾತು ಕೇಳಿ ಲಕ್ಷ್ಮಿ ಹೆಬ್ಬಾಳ್ಕರ್ ಕೆಂಡಾಮಂಡಲವಾಗಿದ್ದಾರೆ. ಇದರಿಂದ ತಮಗಾದ ಅವಮಾನ ತಡೆದುಕೊಳ್ಳಲಾಗದೇ ಕಣ್ಣಿರು ಹಾಕುತ್ತಾ ಪರಿಷತ್ತಿನಿಂದ ಹೊರಗೆ ಹೋಗಿದ್ದಾರೆ. ಹೆಬ್ಬಾಳ್ಕರ್ ಮಾತಿಗೆ ಕಾಂಗ್ರೆಸ್ ಸದಸ್ಯರು ಧ್ವನಿ ಗೂಡಿಸಿದ್ದು, ಹತ್ತು ಬಾರಿ ಅಸಂವಿಧಾನಿಕ ಪದ ಬಳಸಿದ್ದಾರೆ ಎಂದು ಹೆಬ್ಬಾಳ್ಕರ್ ಆರೋಪ ಮಾಡಿದ್ದಾರೆ.

ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಸಿಟಿ ರವಿ ಅಶ್ಲೀಲ ಪದ ಬಳಸಿದ್ದಾರೆ ಎಂದು ಆಕ್ರೋಶಗೊಂಡ ಕಾಂಗ್ರೆಸ್ ಸದಸ್ಯರೆಲ್ಲರೂ ಸದನದಲ್ಲಿ ಕಿಡಿ ಕಾರಿದ್ದಾರೆ. ಸಹ ಸದಸ್ಯರನ್ನು ಕರೆತಂದು ಲಕ್ಷ್ಮಿ ಹೆಬ್ಬಾಳ್ಕರ್ ಸಭಾಪತಿ ಹೊರಟ್ಟಿ ಅವರಿಗೆ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಸಂಸತ್‌ನಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ. ಈ ವಿಷಯದ ಚರ್ಚೆಗೆ ಅವಕಾಶ ನೀಡಬೇಕು’ ಎಂದು ಕಾಂಗ್ರೆಸ್‌ನ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಎಲ್ಲ ಸದಸ್ಯರು ಅಂಬೇಡ್ಕ‌ರ್ ಭಾವಚಿತ್ರ ಹಿಡಿದುಕೊಂಡು ಪಟ್ಟು ಹಿಡಿದರು. ಪ್ರತಿಯಾಗಿ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸಿ.ಟಿ. ರವಿ ಸೇರಿದಂತೆ ಬಿಜೆಪಿ ಸದಸ್ಯರು ಕೂಡಾ ಅಂಬೇಡ್ಕರ್ ಭಾವಚಿತ್ರ ಹಿಡಿದುಕೊಂಡು ‘ಅಂಬೇಡ್ಕರ್ ಅವರನ್ನು ಸೋಲಿಸಿದ್ದು ಕಾಂಗ್ರೆಸ್’ ಎಂದು ಘೋಷಣೆ ಕೂಗಿದರು.

ಸದನದಲ್ಲಿ ಕೋಲಾಹಲ ಉಂಟಾದಾಗ ಕಲಾಪವನ್ನು ಸಭಾಪತಿ ಬಸವರಾಜ ಹೊರಟ್ಟಿ ಮುಂದೂಡಿದರು. ಕಲಾಪ ಮುಂದೂಡಿಕೆಯಾದರೂ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರು ಸದನದ ಒಳಗೆ ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿದರು. ಈ ಗದ್ದಲದ ಮಧ್ಯೆ ಸಿ.ಟಿ. ರವಿ ಅಶ್ಲೀಲ ಪದ ಬಳಸಿದ್ದಾರೆ ಎಂದು ಕಾಂಗ್ರೆಸ್ ಸದಸ್ಯರು ಆರೋಪಿಸಿದರು. ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಸಭಾಪತಿಗೆ ದೂರು ನೀಡಿದ ಬಳಿಕ ಸಭಾಪತಿ, ಆಡಿಯೊ ವಿಡಿಯೊ ಪರಿಶೀಲನೆಗೆ ಸೂಚನೆ ನೀಡಿದ್ದಾರೆ.

ಆ ರೀತಿಯ ಪದ ಬಳಸಿಲ್ಲ: ಸಿ ಟಿ ರವಿ

ಈ ಬಗ್ಗೆ ಪ್ರತಿಕ್ರಿಯಿಸಿ ಸ್ಪಷ್ಟನೆ ನೀಡಿದ ಸಿ.ಟಿ ರವಿ, “‘ಲಕ್ಷ್ಮಿ ಹೆಬ್ಬಾಳ್ಳರಗೆ ನಾನು ಆಕ್ಷೇಪಾರ್ಹ ಪದ ಬಳಸಿಲ್ಲ. ನಾನು ಪದ ಬಳಸಿದ ದಾಖಲೆ ಇದ್ದರೇ ತೆಗೆಯಿರಿ. ನಾನು ಆ ರೀತಿಯ ಪದ ಬಳಸಿಲ್ಲ. ನಾನು ಕಪೋಲ ಕಲ್ಪಿತ ಹೇಳಿಕೆಗಳಿಗೆ ಉತ್ತರ ನೀಡಲ್ಲ” ಎಂದರು.

ಕ್ರಿಮಿನಲ್ ಅಪರಾಧ: ಸಿಎಂ ಸಿದ್ದರಾಮಯ್ಯ

“ವಿಧಾನ ಪರಿಷತ್ ಸದಸ್ಯ ಸಿ. ಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಭ್ಯ ಪದ ಬಳಕೆ ಮಾಡಿದ್ದು , ಅದು ಕ್ರಿಮಿನಲ್ ಅಪರಾಧವಾಗಿದೆ. ಈ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ವಿಧಾನ ಪರಿಷತ್ ಸಭಾಪತಿ ಯವರಿಗೆ ದೂರು ನೀಡಿದ್ದಾರೆ. ಪೊಲೀಸ್‌ ಠಾಣೆಗೂ ದೂರು ನೀಡಲು ಹೋಗುತ್ತಿದ್ದಾರೆ ಎಂದು ತಿಳಿದುಬಂದಿದೆ. ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಲಾಗುವುದು” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...