IRCTC ಹೋಟೆಲ್ ಹಗರಣ: ಲಾಲೂ, ತೇಜಸ್ವಿ ಯಾದವ್ ವಿರುದ್ಧ ದೋಷಾರೋಪ, ಪ್ರಕರಣವೇನು?

Date:

ಐಆರ್‌ಸಿಟಿಸಿ(IRCTC) ಹಗರಣದ ಆರೋಪದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಯಾದವ್, ಅವರ ಪುತ್ರ ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್ ಮತ್ತು ಲಾಲೂ ಪತ್ನಿ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ವಿರುದ್ಧ ದೆಹಲಿ ಕೋರ್ಟ್‌ ದೋಷಾರೋಪವನ್ನು ಹೊರಿಸಿದೆ. ಬಿಹಾರ ಚುನಾವಣೆಗೆ ಕೆಲವೇ ವಾರಗಳ ಮುನ್ನ ನಡೆದ ಈ ಬೆಳವಣಿಗೆ ತೀವ್ರ ರಾಜಕೀಯ ಚರ್ಚೆಗೆ ಗ್ರಾಸವಾಗುತ್ತಿದೆ.

ಐಆರ್‌ಸಿಟಿಸಿ ಹೊರಡಿಸಿದ ಟೆಂಡರ್‌ಗಳನ್ನು ವಿತರಿಸುವಾಗ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ವಂಚನೆ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ ಹಲವು ಪ್ರಕರಣಗಳಡಿ ಲಾಲೂ ಕುಟುಂಬದ ವಿರುದ್ಧ ವಿಚಾರಣೆ ನಡೆಯುತ್ತಿದೆ. “ನೀವು ನಿಮ್ಮ ತಪ್ಪನ್ನು ಒಪ್ಪಿಕೊಳ್ಳುತ್ತೀರಾ” ಎಂದು ಕೋರ್ಟ್ ಪ್ರಶ್ನಿಸಿದ್ದು, ಲಾಲೂ ಕುಟುಂಬ ನಾವು ತಪ್ಪಿತಸ್ಥರಲ್ಲ ಎಂದು ವಾದಿಸಿದೆ.

ಇದನ್ನು ಓದಿದ್ದೀರಾ? ಇಂದಿರಾ ಗಾಂಧಿ ನಮ್ಮನ್ನು ಜೈಲಿಗೆ ಹಾಕಿದ್ದರು, ಆದರೆ ಯಾವತ್ತೂ ನಿಂದಿಸಲಿಲ್ಲ: ಲಾಲೂ ಯಾದವ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂಡಿಯನ್ ರೈಲ್ವೆ ಕೇಟರಿಂಗ್ ಅಂಡ್ ಟೂರಿಸಂ ಕಾರ್ಪೊರೇಷನ್(IRCTC) ಭಾರತೀಯ ರೈಲ್ವೆ ಇಲಾಖೆಯ ಅಂಗಸಂಸ್ಥೆಯಾಗಿದ್ದು, 1999ರಲ್ಲಿ ಸ್ಥಾಪಿಸಲಾಗಿದೆ. ರೈಲು ಟಿಕೆಟ್ ಬುಕ್ಕಿಂಗ್, ರೈಲ್ವೆ ಕ್ಯಾಟರಿಂಗ್ ಸೇವೆ ಮತ್ತು ಪ್ರವಾಸೋದ್ಯಮದಂತಹ ವಿವಿಧ ಸೇವೆಗಳನ್ನು ನೀಡುತ್ತದೆ.

ಏನಿದು IRCTC ಹೋಟೆಲ್ ಹಗರಣ?

2004ರಿಂದ 2009ರವರೆಗೆ ಲಾಲೂ ಯಾದವ್ ರೈಲ್ವೆ ಸಚಿವರಾಗಿದ್ದರು. ಈ ವೇಳೆ ರಾಂಚಿ ಮತ್ತು ಪುರಿಯಲ್ಲಿರುವ ಐಆರ್‌ಸಿಟಿಸಿ ಹೋಟೆಲ್‌ಗಳ ನಿರ್ವಹಣೆಗಾಗಿ ನಡೆದ ಟೆಂಡರ್ ಪ್ರಕ್ರಿಯೆಯ ಮೇಲೆ ನೇರವಾಗಿ ಪ್ರಭಾವ ಬೀರಿದ್ದರು ಎಂದು ಆರೋಪಿಸಲಾಗಿದೆ. ವಿಜಯ್ ಮತ್ತು ವಿನಯ್ ಕೊಚಾರ್ ಎಂಬವರ ಒಡೆತನದ ಸುಜಾತಾ ಹೋಟೆಲ್ ಎಂಬ ಖಾಸಗಿ ಸಂಸ್ಥೆಗೆ ಈ ಟೆಂಡರ್ ಮಾಡಿಕೊಡಲು ಲಾಲೂ ಅವರು ಶೆಲ್ ಕಂಪನಿ ಮೂಲಕ ಪಟನಾದಲ್ಲಿ ಮೂರು ಎಕರೆ ಭೂಮಿಯನ್ನು ಪಡೆದಿದ್ದರು ಎಂದು ಆರೋಪಿಸಲಾಗಿದೆ. ಈ ಭೂಮಿಯನ್ನು ತೇಜಸ್ವಿ ಯಾದವ್ ಮತ್ತು ರಾಬ್ರಿ ದೇವಿ ಹೆಸರಿನಲ್ಲಿ ನೋಂದಾಯಿಸಲಾಗಿದೆ. ಸುಜಾತಾ ಹೋಟೆಲ್ ಮತ್ತು ಇನ್ನೊಂದು ಕಾರ್ಪೊರೇಟ್ ಸಂಸ್ಥೆಯನ್ನೂ ಈ ಪ್ರಕರಣದಲ್ಲಿ ಹೆಸರಿಸಲಾಗಿದೆ.

ಕೇಂದ್ರ ತನಿಖಾ ದಳ(ಸಿಬಿಐ) 2006ರಲ್ಲಿ ಈ ಪ್ರಕರಣದ ವಿಚಾರಣೆಯನ್ನು ಆರಂಭಿಸಿದೆ. ಆದರೆ 2017ರ ಜುಲೈವರೆಗೆ ಲಾಲೂ ಯಾದವ್ ವಿರುದ್ಧ ಪ್ರಕರಣ ದಾಖಲಾಗಿರಲಿಲ್ಲ. ತನಿಖೆ ಭಾಗವಾಗಿ ಸಿಬಿಐ ಪಟನಾ, ದೆಹಲಿ, ರಾಂಚಿ ಮತ್ತು ಗುರುಗ್ರಾಮದಲ್ಲಿರುವ ಲಾಲೂ ಮತ್ತು ಅವರ ಕುಟುಂಬಕ್ಕೆ ಸಂಬಂಧಿಸಿದ ಹಲವು ಸ್ಥಳಗಳಲ್ಲಿ ಶೋಧ ನಡೆಸಿದೆ.

ದೆಹಲಿಯ ರೌಸ್ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿದ್ದು, ಲಾಲೂ ಯಾದವ್ ಸೇರಿದಂತೆ ಎಲ್ಲಾ ಆರೋಪಿಗಳ ವಿರುದ್ಧ ಸಾಕಷ್ಟು ಪುರಾವೆಗಳಿವೆ ಎಂದು ಸಿಬಿಐ ಹೇಳಿಕೊಂಡಿದೆ. ಆದರೆ ಈ ಒಪ್ಪಂದವನ್ನು ನ್ಯಾಯಯುತವಾಗಿ ನಡೆಸಲಾಗಿದೆ ಎಂದು ಲಾಲೂ ಕುಟುಂಬ ವಾದಿಸಿದೆ. ಇಂದು ಬೆಳಿಗ್ಗೆ ತೀರ್ಪು ನೀಡಿದ ಕೋರ್ಟ್ ‘ನಡೆದಿರಬಹುದು ಎನ್ನಲಾದ ವಂಚನೆಯನ್ನು ವಂಚನೆ ಎಂದು ಪರಿಗಣಿಸಿ ವಿಚಾರಣೆ ನಡೆಸಬೇಕು’ ಎಂದು ಹೇಳಿದೆ. ಯಾದವ್ ಕುಟುಂಬದ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 420 ಮತ್ತು 120ಬಿ (ವಂಚನೆ ಮತ್ತು ಅಪ್ರಾಮಾಣಿಕವಾಗಿ ಆಸ್ತಿ ಹಸ್ತಾಂತರಕ್ಕೆ ಪ್ರೇರೇಪಿಸುವುದು) ಪ್ರಕರಣ ದಾಖಲಾಗಿದೆ. ಈ ಆರೋಪಗಳ ಅಡಿಯಲ್ಲಿ ಏಳು ವರ್ಷದಿಂದ ಜೀವಾವಧಿವರೆಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಬಹುದು.

ಸದ್ಯ ದೋಷಾರೋಪ ಹೊರಿಸಲಾಗಿದ್ದು, ನ್ಯಾಯಾಲಯವು ಲಾಲೂ ಯಾದವ್ ಮತ್ತು ಇತರ ಆರೋಪಿಗಳ ವಿರುದ್ಧದ ಸಾಕ್ಷ್ಯಗಳನ್ನು ಪರಿಶೀಲಿಸಲಿದೆ. ಕೋರ್ಟ್ ಮುಂದಿನ ದಿನಾಂಕ ನಿಗದಿಪಡಿಸಿದ ನಂತರ ಔಪಚಾರಿಕ ವಿಚಾರಣೆ ಪ್ರಾರಂಭವಾಗಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...