ಉದ್ಯೋಗಕ್ಕಾಗಿ ಭೂಮಿ ಹಗರಣ: ಸಿಬಿಐ ಆರೋಪ ಪಟ್ಟಿಯಲ್ಲಿ ಬಿಹಾರದ ಡಿಸಿಎಂ ತೇಜಸ್ವಿ ಯಾದವ್ ಹೆಸರು

Date:

ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಸೋಮವಾರ ಹೊಸ ಆರೋಪ ಪಟ್ಟಿ ಸಲ್ಲಿಸಿದೆ. ಆರೋಪ ಪಟ್ಟಿಯಲ್ಲಿ ಬಿಹಾರದ ಉಪ ಮುಖ್ಯಮಂತ್ರಿ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಹಾಗೂ ಆರ್‌ಜೆಡಿ ಅಧ್ಯಕ್ಷ ಹಾಗೂ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರನ್ನು ಹೆಸರಿಸಿದ್ದು, ಇದನ್ನು ನ್ಯಾಯಾಲಯವು ಜುಲೈ 12 ರಂದು ಪರಿಗಣಿಸಲಿದೆ.

ಎಫ್‌ಐಆರ್‌ನಲ್ಲಿ ತೇಜಸ್ವಿ ಯಾದವ್ ಹೆಸರಿಲ್ಲ. ಆದರೆ ತನಿಖೆಯ ಸಂದರ್ಭದಲ್ಲಿ, ಅವರಿಗೆ ಲಾಭದಾಯಕ ಅಪರಾಧದ ಆದಾಯದ ಬಗ್ಗೆ ಪುರಾವೆಗಳು ದೊರಕಿವೆ ಎಂದು ಸಿಬಿಐ ಮೂಲಗಳು ಸುದ್ದಿ ಮಾಧ್ಯಮಗಳಿಗೆ ತಿಳಿಸಿವೆ. ಸಿಬಿಐ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಮಧ್ಯವರ್ತಿ ಮತ್ತು ಫಲಾನುಭವಿಗಳನ್ನು ಹೆಸರಿಸಲಾಗಿದೆ ಹಾಗೂ ಉದ್ಯೋಗಾಕಾಂಕ್ಷಿಗಳು ಹಗರಣದ ಬಗ್ಗೆ ಸಾಕ್ಷ್ಯ ನೀಡಿರುವ ಹೇಳಿಕೆಗಳು ದಾಖಲಾಗಿವೆ.

ಈ ಸುದ್ದಿ ಓದಿದ್ದೀರಾ? ಮಹಾರಾಷ್ಟ್ರ | ಎನ್‌ಸಿಪಿಯಿಂದ ಮೂವರ ಉಚ್ಚಾಟನೆ; 9 ಶಾಸಕರು, ಇಬ್ಬರು ಸಂಸದರ ಅನರ್ಹತೆಗೆ ನಿರ್ಣಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತನಿಖಾ ಸಂಸ್ಥೆಯ ಪ್ರಕಾರ, 2004 ರಿಂದ 2009ರವರೆಗೆ ಲಾಲು ಅವರು ಕೇಂದ್ರ ಸಚಿವರಾಗಿದ್ದ ಅವಧಿಯಲ್ಲಿ ಪಾಟ್ನಾದ 12 ಅಭ್ಯರ್ಥಿಗಳನ್ನು ರೈಲ್ವೆಯಲ್ಲಿ ಗ್ರೂಪ್ ಡಿ ಹುದ್ದೆಗಳಿಗೆ ನೇಮಿಸಲಾಯಿತು. ಈ ನೇಮಕವು ಯಾವುದೇ ಜಾಹೀರಾತು ಅಥವಾ ಸಾರ್ವಜನಿಕ ಸೂಚನೆಯಿಲ್ಲದೆ ನಿಯಮಗಳು ಮತ್ತು ಕಾರ್ಯವಿಧಾನಗಳನ್ನು ಉಲ್ಲಂಘಿಸಿ ಮಾಡಲಾಗಿತ್ತು.

ಈ ನೇಮಕಾತಿಗಳ ಬದಲಾಗಿ, ಆರೋಪಿಗಳು ನಗರ ಮತ್ತು ಇತರೆಡೆಗಳಲ್ಲಿ ಏಳು ನಿವೇಶನಗಳನ್ನು ಹೆಚ್ಚಿನ ರಿಯಾಯಿತಿ ಬೆಲೆಯಲ್ಲಿ ಪಡೆದರು. ಈ ಜಮೀನು ಉದ್ಯೋಗ ಪಡೆದ 12 ಮಂದಿಗೆ ಸೇರಿದ್ದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಗ್ರೂಪ್‌ ಡಿ ಹುದ್ದೆ ಅಭ್ಯರ್ಥಿಗಳ 4 ಜಮೀನುಗಳನ್ನು ಕೇವಲ 7.5 ಲಕ್ಷ ರೂ.ಗೆ ಲಾಲು ಕುಟುಂಬ ಖರೀದಿಸಿತ್ತು. ಅದನ್ನು ಆರ್‌ಜೆಡಿ ನಾಯಕನೊಬ್ಬನಿಗೆ 3.5 ಕೋಟಿ ರೂ.ಗೆ ಲಾಲು ಪತ್ನಿ ರಾಬ್ಡಿ ದೇವಿ ಮಾರಿದ್ದರು. ಬಂದ ಹಣವನ್ನು ಹೆಚ್ಚಾಗಿ ಲಾಲು ಪ್ರಸಾದ್‌ ಯಾದವ್‌ ಅವರ ಪುತ್ರ ತೇಜಸ್ವಿ ಯಾದವ್ ಅವರ ಖಾತೆಗೆ ವರ್ಗಾಯಿಸಲಾಗಿತ್ತು’ ಎಂದು ಇಡಿ ಆರೋಪಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...