ಕಾನೂನು ಪ್ರಕಾರವೇ ಜಿಂದಾಲ್‌ಗೆ ಜಮೀನು ಮಾರಾಟ: ಕೈಗಾರಿಕೆ ಸಚಿವ ಎಂ‌ ಬಿ ಪಾಟೀಲ್ ಸಮರ್ಥನೆ

Date:

ಜಿಂದಾಲ್ ಉಕ್ಕು ಕಂಪನಿಗೆ ಕೋರ್ಟ್ ನಿರ್ದೇಶನ ಮತ್ತು ಅದನ್ನು ಅನುಸರಿಸಿ ಹೊರಡಿಸಿದ ಸರಕಾರಿ ಆದೇಶ ಹಾಗೂ ಸಂಪುಟ ಸಭೆಯ ನಿರ್ಣಯದಂತೆಯೇ ಕಾನೂನಿಗೆ ಅನುಸಾರವಾಗಿ 3,677 ಎಕರೆ ಭೂಮಿಯನ್ನು ಗುತ್ತಿಗೆ ಮಾರಾಟ ಮಾಡಲಾಗುತ್ತಿದೆ. ಈ ವಿಚಾರದಲ್ಲಿ ಸರಕಾರದ್ದು ಎಳ್ಳಷ್ಟೂ ತಪ್ಪಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ‌ ಬಿ ಪಾಟೀಲ್ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡರು.

ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಬಳ್ಳಾರಿ ಜಿಲ್ಲೆಯಲ್ಲಿ ಕಾರ್ಖಾನೆ ಹೊಂದಿರುವ ಜಿಂದಾಲ್ ಕಂಪನಿಗೆ ನಾವೇನೂ ರಿಯಾಯಿತಿ ಕೊಟ್ಟಿಲ್ಲ. ಮಾರುಕಟ್ಟೆ ಬೆಲೆ ಹಿಂದೆ ಏನಿದೆಯೋ ಅದನ್ನು ನಿಗದಿಪಡಿಸಿದ್ದೇವೆ. ಕಂಪನಿ ಕೂಡ ಸರಕಾರದ ಷರತ್ತುಗಳನ್ನು ಪಾಲಿಸಿದೆ” ಎಂದರು.

“ರಾಜ್ಯದಲ್ಲಿ ಇರುವ ಒಂದು ಲಕ್ಷ ಕೈಗಾರಿಕೆಗಳಿಗೆ ಯಾವ ನಿಯಮ ಹೇಳಿದ್ದೇವೋ ಅದನ್ನೇ ಜಿಂದಾಲ್‌ಗೂ ಅನ್ವಯಿಸಲಾಗಿದೆ. ಇನ್ನು ಆರು ತಿಂಗಳಲ್ಲಿ ರಾಜ್ಯದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದೆ. ಜಿಂದಾಲ್ ರಾಜ್ಯದಲ್ಲಿ 90 ಸಾವಿರ ಕೋಟಿ ರೂಪಾಯಿ ಹೂಡಿದ್ದು, 50 ಸಾವಿರ ಉದ್ಯೋಗ ಕೊಟ್ಟಿದೆ. ಇಂತಹ ಸಂದರ್ಭದಲ್ಲಿ ಸರಕಾರದ ಕಡೆಯಿಂದ ಹೂಡಿಕೆದಾರರಿಗೆ ತಪ್ಪು ಸಂದೇಶ ಹೋಗಬಾರದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೈಗಾರಿಕಾ ನೀತಿಯಂತೆ ಗುತ್ತಿಗೆ ಮಾರಾಟ

“ಸರಕಾರವು ಉದ್ಯಮಿಗಳಿಗೆ ಜಮೀನು ಕೊಡುತ್ತದೆ. ಅದರಲ್ಲಿ ಹತ್ತು ವರ್ಷಗಳಲ್ಲಿ ಶೇ 51ರಷ್ಟು ಭೂಮಿಯನ್ನು ಅವರು ಬಳಸಿಕೊಂಡು, ಕಂಪನಿಯನ್ನು ಸಕ್ರಿಯವಾಗಿ ಇಟ್ಟಿರಬೇಕು. ಆಗ ಕೈಗಾರಿಕಾ ನೀತಿಯಂತೆ ಗುತ್ತಿಗೆ ಮಾರಾಟ ಮಾಡಲಾಗುತ್ತದೆ. ಇದರಲ್ಲಿ ಜಿಂದಾಲ್ ಎಲ್ಲೂ ಎಡವಿಲ್ಲ” ಎಂದರು.

“ನಾವು ತಮಿಳುನಾಡು, ಮಹಾರಾಷ್ಟ್ರ, ಗುಜರಾತ್, ಆಂಧ್ರಪ್ರದೇಶ ಮತ್ತು ತೆಲಂಗಾಣಗಳಿಂದ ಕೈಗಾರಿಕಾ ಕ್ಷೇತ್ರದಲ್ಲಿ ಭಾರೀ ಪೈಪೋಟಿ ಎದುರಿಸುತ್ತಿದ್ದೇವೆ. ಎಷ್ಟೋ ರಾಜ್ಯಗಳು ಉದ್ದಿಮೆಗಳಿಗೆ ಉಚಿತವಾಗಿ ಭೂಮಿ ಕೊಡುತ್ತಿವೆ. ಹಿಂದೆ ಜಿಂದಾಲ್ ಕಂಪನಿಗೆ ಭೂಮಿಯನ್ನು ಲೀಸ್ ಕಂ ಸೇಲ್ ಮಾಡಲು ಕೆಲವರು ಯಾಕೆ ವಿರೋಧಿಸಿದರೋ ಗೊತ್ತಿಲ್ಲ” ಎಂದು ಹೇಳಿದರು.

“ಹಿಂದೆ ನಾವು ಜಿಂದಾಲ್ ವಿರುದ್ಧವೇನೂ ಪ್ರತಿಭಟಿಸಿಲ್ಲ. ಆಗ ನಾವು ಜನಾರ್ದನ ರೆಡ್ಡಿ ವಿರುದ್ಧವಷ್ಟೇ ದನಿ ಎತ್ತಿದ್ದೆವು. ಜತೆಗೆ ಈಗ ಜಿಂದಾಲ್‌ಗೆ ಕೊಡುತ್ತಿರುವ ಭೂಮಿಯಲ್ಲಿ ಗಣಿಗಾರಿಕೆಯೇನೂ ನಡೆಯುತ್ತಿರಲಿಲ್ಲ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ರಾಜ್ಯಪಾಲರ ಕಚೇರಿ ಬಿಜೆಪಿ ಕಚೇರಿ ಆಗಿದೆ

“ಮುಡಾ ಹಗರಣದ ವಿಚಾರದಲ್ಲಿ ರಾಜ್ಯಪಾಲರು ಸ್ವಂತ ವಿವೇಚನೆಯಿಂದ ನಡೆದುಕೊಂಡಿಲ್ಲ. ರಾಜಭವನ ಈಗ ಬಿಜೆಪಿ ಕಚೇರಿಯಾಗಿದೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರ ತಪ್ಪೇನೂ ಇಲ್ಲ” ಎಂದು ಇದೇ ವೇಳೆ ಹೇಳಿದರು.

“ಮುಡಾ ಹಗರಣದ ನೆಪದಲ್ಲಿ ಸರಕಾರವನ್ನು ಉರುಳಿಸಲು ಬಿಜೆಪಿ ಮತ್ತು ಜೆಡಿಎಸ್ ನೋಡುತ್ತಿವೆ. ಆದರೆ ಅವರು ತಲೆ ಕೆಳಗೆ ಮಾಡಿಕೊಂಡು ನಿಂತರೂ ಅದು ಸಾಧ್ಯವಿಲ್ಲ. ನಮ್ಮ ಪಕ್ಷದ ಹೈಕಮಾಂಡ್ ಈ ವಿಚಾರದಲ್ಲಿ ಕೆಲವು ಸಲಹೆ ಸೂಚನೆ ನೀಡಲಿದೆ” ಎಂದರು.

“ಟಿ ಜೆ ಅಬ್ರಹಾಂ ನೀಡಿದ ದೂರಿನ ಮೇರೆಗೆ ತರಾತುರಿಯಲ್ಲಿ ಕ್ರಮ ಕೈಗೊಂಡ ರಾಜ್ಯಪಾಲರು, ಶಶಿಕಲಾ‌ ಜೊಲ್ಲೆ, ಮುರುಗೇಶ ನಿರಾಣಿ, ಜನಾರ್ದನ ರೆಡ್ಡಿ ಮತ್ತು ಎಚ್ ಡಿ ಕುಮಾರಸ್ವಾಮಿ ವಿಚಾರದಲ್ಲಿ ವರ್ಷಗಳೇ ಉರುಳಿದರೂ ಏಕೆ ಸುಮ್ಮನಿದ್ದಾರೆ” ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...