ಪುನೀತ್‌ ರಾಜಕುಮಾರ್‌ ಹೃದಯಜ್ಯೋತಿ ಯೋಜನೆಗೆ ಚಾಲನೆ; ತ್ವರಿತ ಚಿಕಿತ್ಸೆ ಭರವಸೆ

Date:

ಹಠಾತ್‌ ಹೃದಯಾಘಾತವಾದಾಗ ತುರ್ತಾಗಿ ಚಿಕಿತ್ಸೆ ನೀಡುವ ಸಲುವಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಕರ್ನಾಟಕ ರತ್ನ ಡಾ.ಪುನೀತ್‌ ರಾಜಕುಮಾರ್‌ ಹೃದಯಜ್ಯೋತಿ ಯೋಜನೆ’ಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಶುಕ್ರವಾರ ಚಾಲನೆ ನೀಡಿದರು.

ಆರೋಗ್ಯ ಇಲಾಖೆ ವತಿಯಿಂದ ಧಾರವಾಡದ ಸತ್ತೂರಿನ ಡಾ.ಡಿ.ವೀರೇಂದ್ರ ಹಗ್ಗಡೆ ಕಲಾ ಕ್ಷೇತ್ರ ಭವನದಲ್ಲಿ ಶುಕ್ರವಾರ ನಡೆದ ಕರ್ನಾಟಕ ರತ್ನ ಡಾ.ಪುನೀತ್‌ ರಾಜಕುಮಾರ್‌ ಹೃದಯಜ್ಯೋತಿ ಯೋಜನೆಗೆ ಚಾಲನೆ ನೀಡಲಾಯಿತು.

ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಸಚಿವರು, “ಹೃದಯಾಘಾತ ಸಂಭವಿಸಿದಾಗ ಸಮುದಾಯ, ತಾಲ್ಲೂಕು ಆಸ್ಪತ್ರೆಗಳಲ್ಲಿ ಇಸಿಜಿ ಮಾಡಿ ತಕ್ಷಣವೇ ಕೃತಕ ಬುದ್ಧಿಮತೆ (ಎಐ) ಮೂಲಕ ಆಘಾತದ ತೀವ್ರತೆ ಪತ್ತೆ ಹಚ್ಚುವ ನಿಟ್ಟಿನಲ್ಲಿ ಕಿಟ್‌ಗಳನ್ನು ಒದಗಿಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆಸ್ಪತ್ರೆಯ ವೈದ್ಯರು ತಜ್ಞರನ್ನು ಫೋನ್‌ನಲ್ಲಿ ಸಂಪರ್ಕಿಸಿ ತಂತ್ರಾಂಶ ಮೂಲಕ ಆಘಾತ ಪ್ರಮಾಣ ಪತ್ತೆ ಹಚ್ಚುತ್ತಾರೆ. ಆರು ನಿಮಿಷದಲ್ಲಿ ಈ ಪ್ರಕ್ರಿಯೆ ನಡೆಸುತ್ತಾರೆ. ಆಘಾತ ತೀವ್ರ ಪ್ರಮಾಣದಲ್ಲಿ ಆಗಿದ್ದರೆ ತಜ್ಞರ ಸಲಹೆ ಪಡೆದು ವೈದ್ಯರು ತಕ್ಷಣವೇ ‘ಟೆನೆಕ್ಟ್‌ಪಾಲ್ಸ್‌’ ಚುಚ್ಚುಮದ್ದು ನೀಡುತ್ತಾರೆ. ಹೃದಯದಲ್ಲಿ ‘ಬ್ಲಾಕ್‌’ ಆಗುವುದನ್ನು ಚುಚ್ಚುಮದ್ದು ತಡೆಯುತ್ತದೆ” ಎಂದು ಹೇಳಿದರು.

“ಮುಂದಿನ ಎರಡು ವರ್ಷಗಳಲ್ಲಿ ರಾಜ್ಯದ ಎಲ್ಲ ತಾಲ್ಲೂಕು ಆಸ್ಪತ್ರೆಗಳಿಗೂ ಈ ಯೋಜನೆ ವಿಸ್ತರಿಸಲಾಗುವುದು. ಪುನೀತ್‌ ರಾಜಕುಮಾರ್‌ ಅವರು ನಟ ಮಾತ್ರವಲ್ಲ ಮನುಷ್ಯತ್ವಕ್ಕೆ ಹೆಸರಾದವರು. ಯೋಜನೆಯನ್ನು ಅರ್ಥಪೂರ್ಣವಾಗಿಸಲು ಇದಕ್ಕೆ ಅವರ ಹೆಸರು ನಾಮಕರಣ ಮಾಡಲಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ ಘೋಷಿಸಿದ ಐದು ಗ್ಯಾರಂಟಿ ಮತ್ತು ಆರ್ಥಿಕತೆಯ ನಿಜನೋಟ

“ಹೃದಯಾಘಾತವಾದಾಗ ಸುವರ್ಣ ಅವಧಿಯಲ್ಲಿ (ಗೋಲ್ಡನ್‌ ಹವರ್‌) ಚಿಕಿತ್ಸೆ ನೀಡಿ ಜೀವ ಉಳಿಸುವುದು ಈ ಯೋಜನೆಯ ಉದ್ದೇಶವಾಗಿದೆ. 15 ಜಿಲ್ಲೆಗಳ 71 ತಾಲ್ಲೂಕು ಆಸ್ಪತ್ರೆಗಳಿಗೆ ಈ ಯೋಜನೆ ಲಿಂಕ್‌ ಮಾಡಲಾಗಿದೆ. ಈ 71 ಆಸ್ಪತ್ರೆಗಳಿಗೆ ಚುಚ್ಚುಮದ್ದುಗಳನ್ನು ಆಸ್ಪತ್ರೆಗೆ ಪೂರೈಸಲಾಗಿದೆ” ಎಂದು ವಿವರಿಸಿದರು.

“ಜನದಟ್ಟಣೆಯ ಸಾರ್ವಜನಿಕ ಸ್ಥಳಗಳಲ್ಲಿ (ಬಸ್‌, ರೈಲು, ವಿಮಾನ ನಿಲ್ದಾಣ, ಕೋರ್ಟ್‌…) ಸ್ವಯಂ ಚಾಲಿತ ಡಿಫಿಬ್ರಿಲೇಟರ್‌ (ಎಇಡಿ) ಸಾಧನಗಳನ್ನು ಅಳವಡಿಸಲು ಸಿದ್ಧತೆ ನಡೆದಿದೆ. ಹೃದಯ ಸ್ತಂಭನ ಆದಾಗ ಶಾಖ ನೀಡಿ ಹೃದಯ ಮತ್ತೆ ಕೆಲಸ ನಿರ್ವಹಿಸುವಂತೆ ಮಾಡಲು ಬಳಸುವ ಸಾಧನ ಇದು” ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್‌.ಲಾಡ್‌, ಶಾಸಕ ಎನ್‌.ಎಚ್‌.ಕೋನರೆಡ್ಡಿ, ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್‌ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...