ಶಾಸಕಾಂಗ ಸಭೆ | ರಾಜ್ಯಪಾಲರ ನಡೆಗೆ ಖಂಡನೆ; ಸಿಎಂ ಸಿದ್ದರಾಮಯ್ಯರ ಬೆನ್ನಿಗೆ ನಿಂತ ಕಾಂಗ್ರೆಸ್‌ ಶಾಸಕರು

Date:

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ವಿರುದ್ಧ ಕಾನೂನು ಹೋರಾಟಕ್ಕೆ ನೈತಿಕ ಬೆಂಬಲ ನೀಡುವ ನಿಟ್ಟಿನಲ್ಲಿ ಗುರುವಾರ ಸಂಜೆ ಶಾಸಕಾಂಗ ಸಭೆ ನಡೆಯಿತು.

ಸಿದ್ದರಾಮಯ್ಯ ಅವರನ್ನು ಪದಚ್ಯುತಗೊಳಿಸುವ ವಾತಾವರಣ ನಿರ್ಮಿಸಿ, ಆ ಮೂಲಕ ಕಾಂಗ್ರೆಸ್‌‍ನಲ್ಲಿ ಸೃಷ್ಟಿಯಾಗುವ ರಾಜಕೀಯ ಗೊಂದಲಗಳ ಲಾಭ ಪಡೆಯುವ ಹವಣಿಕೆ ನಡೆಯುತ್ತಿವೆ ಎಂಬ ಆರೋಪಗಳಿವೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪ್ರತಿ ಹಂತದಲ್ಲೂ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಈ ಪೈಕಿ ಶಾಸಕಾಂಗ ಸಭೆಯೂ ಆಗಿದೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಶಾಸಕರ ಅಭಿಪ್ರಾಯ ಸಂಗ್ರಹಿಸಲಾಯಿತು. ರಾಜ್ಯಪಾಲರ ನಡೆ ಬಗ್ಗೆ ಶಾಸಕರು ತೀವ್ರ ಅಸಮಾಧಾನ ಹೊರಹಾಕಿದರು. “ಹೈಕಮಾಂಡ್ ಜೊತೆ ಚರ್ಚಿಸಿ ದೆಹಲಿಯಲ್ಲಿ ಹೋರಾಟ ನಡೆಸೋಣ. ರಾಜ್ಯಪಾಲರನ್ನ ವಾಪಸ್ ಕರೆಸಿಕೊಳ್ಳಿ ಎಂದು ರಾಷ್ಟ್ರಪತಿಗಳನ್ನ ಭೇಟಿ ಮಾಡಿ ಒತ್ತಾಯಿಸೋಣ” ಎಂದು ಶಾಸಕರು ಒಕ್ಕೊರಲಿನಿಂದ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಸಕಾಂಗ ಪಕ್ಷದ ಸಭೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್​, “ಸಭೆಯಲ್ಲಿ ಸರ್ವಾನುಮತದಿಂದ ಶಾಸಕರು ಸಿಎಂಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಶಾಸಕ ಆರ್ ವಿ ದೇಶಪಾಂಡೆ ಸೂಚಿಸಿ ತನ್ವೀರ್ ಸೇಠ್​ ಅನುಮೋದಿಸಿದ್ದಾರೆ. ರಾಜ್ಯಪಾಲರು ಸರಿಯಾದ ತನಿಖೆ ನಡೆಸದೆ ಪ್ರಾಸಿಕ್ಯೂಷನ್​ಗೆ ಕೊಟ್ಟಿದ್ದಾರೆ. ರಾಜ್ಯಪಾಲರ ನಡೆ ಸರ್ವಾನುಮತದಿಂದ ಖಂಡಿಸಿದ್ದೇವೆ” ಎಂದು ತಿಳಿಸಿದರು.

ಶಾಸಕಾಂಗ ಸಭೆ 2

“ಪಕ್ಷದ ಎಲ್ಲ ಶಾಸಕರು ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿದ್ದೇವೆ. ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಸದರು ಭಾಗವಹಿಸಿದ್ದರು. ಸ್ಪೀಕರ್ ಆದೇಶದಂತೆ ಆರು ಶಾಸಕರು ದೆಹಲಿಯಲ್ಲಿ ನಡೆಯುತ್ತಿರುವ ತರಬೇತಿಗೆ ತೆರಳಿದ್ದು, ಉಳಿದ ಎಲ್ಲಾ ಶಾಸಕರು ಈ ಸಭೆಯಲ್ಲಿ ಭಾಗವಹಿಸಿದ್ದರು. ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದೆಲ್ಲೆಡೆ ಪ್ರತಿಭಟನೆ ಮಾಡುತ್ತಿದ್ದಾರೆ. ಅವರಿಗೆ ನಾವು ಅಭಿನಂದನೆ ಸಲ್ಲಿಸುತ್ತೇವೆ” ಎಂದು ಹೇಳಿದರು.

“ಕರ್ನಾಟಕದ ಜನತೆ 136 ಸ್ಥಾನಗಳನ್ನು ನೀಡಿ ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಜನರ ಆಶೀರ್ವಾದದಿಂದ ರಚಿಸಲಾಗಿರುವ ಈ ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸಲು ಪ್ರಯತ್ನಿಸುತ್ತಿವೆ. ಅವರು ಏನೇ ಪ್ರಯತ್ನಿಸಿದರು ಸರ್ಕಾರವನ್ನು ಜಗ್ಗಿಸಲು ಅವರಿಂದ ಸಾಧ್ಯವಿಲ್ಲ. ಇಡೀ ಕಾಂಗ್ರೆಸ್ ಶಾಸಕಾಂಗ ಪಕ್ಷ ಸಿದ್ದರಾಮಯ್ಯ ಅವರ ಪರವಾಗಿ ಇದೆ” ಎಂದರು.

“ಶುಕ್ರವಾರ (ಆ.23) ಹೈಕಮಾಂಡ್ ನಾಯಕರ ಭೇಟಿಗೆ ಸಮಯ ಪಡೆದಿದ್ದು, ನಾನು ಹಾಗೂ ಮುಖ್ಯಮಂತ್ರಿಗಳು ರಾಜ್ಯದ ವಿದ್ಯಮಾನಗಳ ಬೆಳವಣಿಗೆ ಕುರಿತು ಚರ್ಚೆ ಮಾಡಲಿದ್ದೇವೆ. ರಾಜ್ಯಪಾಲರ ನಡವಳಿಕೆ ವಿರುದ್ಧ ನ್ಯಾಯಾಲಯದಲ್ಲೂ ಮೇಲ್ಮನವಿ ಸಲ್ಲಿಸಿದ್ದೇವೆ. ನಮಗೆ ನ್ಯಾಯಾಲಯದಲ್ಲಿ ನಂಬಿಕೆ ಇದೆ. ಕಾನೂನು ಹಾಗೂ ಸಂವಿಧಾನ ವಿರುದ್ಧವಾಗಿ ನೀಡಿರುವ ಆದೇಶದಿಂದ ನಮಗೆ ರಕ್ಷಣೆ ಸಿಗುವ ನಿರೀಕ್ಷೆಯಿದೆ” ಎಂದು ತಿಳಿಸಿದರು.

“ಇಂಡಿಯಾ ಮೈತ್ರಿಕೂಟ ಬೆಂಬಲ ಇದೆಯೇ ಎಂದು ಕೇಳಿದಾಗ, “ಇಂಡಿಯಾ ಮೈತ್ರಿಕೂಟ ಹುಟ್ಟಿದ್ದೇ ಇಲ್ಲಿ. ಇಲ್ಲಿ ಹುಟ್ಟಿ 234 ಸೀಟುಗಳನ್ನು ದೇಶದಲ್ಲಿ ಪಡೆದಿದೆ. ಸದ್ಯ ನಮ್ಮ ರಾಜ್ಯದಲ್ಲಿ ಒಗ್ಗಟ್ಟಿನಿಂದ ಹೋರಾಟ ಮಾಡಲಿದ್ದೇವೆ. ನಾಳೆ ದೆಹಲಿಗೆ ಭೇಟಿ ನೀಡಿ ಚರ್ಚೆ ಮಾಡಿದ ನಂತರ ಉಳಿದ ವಿಚಾರ ತಿಳಿಸುತ್ತೇವೆ” ಎಂದು ತಿಳಿಸಿದರು.

“ರಾಜ್ಯಪಾಲರ ನಿರ್ಣಯವನ್ನು ಸಚಿವ ಸಂಪುಟ ಸಭೆ ಖಂಡಿಸಿರುವುದು ಯಾವ ಸಂದೇಶ ರವಾನಿಸಲಿದೆ ಎಂದು ಕೇಳಿದಾಗ, “ರಾಜ್ಯಪಾಲರಲ್ಲಿ ನಾವು ಮಾಡಿಕೊಳ್ಳುವ ಮನವಿ, ಆಗ್ರಹ ಎಂದರೆ, ರಾಜ್ಯಪಾಲರು ತಮ್ಮ ಅನುಮತಿಯನ್ನು ಹಿಂಪಡೆಯಬೇಕು. ಆಗ ಸಂವಿಧಾನ ರಕ್ಷಣೆ ಮಾಡಿ, ಕಾನೂನಿಗೆ ಗೌರವ ನೀಡಿದಂತಾಗುತ್ತದೆ. ಈ ವಿಚಾರವಾಗಿ ನಾವು ಕಾನೂನು ಹೋರಾಟಕ್ಕೂ ಮುಂದಾಗಿದ್ದು, ರಾಜ್ಯಪಾಲರು ಮುಖಭಂಗದಿಂದ ಪಾರಾಗಬೇಕಾದರೆ ಈಗಲೂ ತಮ್ಮ ನಿರ್ಣಯವನ್ನು ಹಿಂಪಡೆಯಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...