ವಿಧಾನ ಪರಿಷತ್ಗೆ ನಾಮನಿರ್ದೇಶನ ಮಾಡಲು ಮಾಜಿ ಸಚಿವೆ ಉಮಾಶ್ರೀ, ಎಂ.ಆರ್ ಸೀತಾರಾಂ ಮತ್ತು ಜಾರಿ ನಿರ್ದೇಶನಾಲಯದ ಮಾಜಿ ಅಧಿಕಾರಿ ಸುಧಾಮ್ ದಾಸ್ ಅವರನ್ನು ಕಾಂಗ್ರೆಸ್ ಆಯ್ಕೆ ಮಾಡಿದೆ. ರಾಜ್ಯ ಕಾಂಗ್ರೆಸ್ ನಾಯಕರು ಸಿದ್ದಪಡಿಸಿದ್ದ ಆಯ್ಕೆ ಪಟ್ಟಿಯನ್ನು ಪರಿಶೀಲಿಸಿರುವ ಕೈ ಪಕ್ಷದ ಹೈಕಮಾಂಡ್ ಈ ಮುವರನ್ನು ನಾಮನಿರ್ದೇಶನ ಮಾಡಲು ಒಪ್ಪಿಗೆ ನೀಡಿದೆ.
ಮೊದಲು ಸೀತಾರಾಂ, ಸುಧಾಮ್ ದಾಸ್ ಮತ್ತು ಎಐಸಿಸಿ ಕಾರ್ಯದರ್ಶಿ ಮನ್ಸೂರ್ ಅಲಿ ಖಾನ್ ಅವರನ್ನು ನಾಮನಿರ್ದೇಶನ ಮಾಡಲು ರಜ್ಯ ಕಾಂಗ್ರೆಸ್ ನಾಯಕರು ಪ್ರಸ್ತಾಪಿಸಿದ್ದರು. ಆದರೆ, ಮನ್ಸೂರ್ ಅವರನ್ನು ಕೈಬಿಟ್ಟಿರುವ ಉಮಾಶ್ರಿ ಅವರನ್ನು ಆಯ್ಕೆ ಮಾಡಲು ಸೂಚಿಸಿದೆ ಎಂದು ತಿಳಿದುಬಂದಿದೆ.
ಸಿನಿಮಾ ಕ್ಷೇತ್ರದಿಂದ ಉಮಾಶ್ರೀ, ಶಿಕ್ಷಣ ಕ್ಷೇತ್ರದಿಂದ ಸೀತಾರಾಂ ಹಾಗೂ ಸಮಾಜಸೇವಾ ಕ್ಷೇತ್ರದಿಂದ ಸುಧಾಮ್ ದಾಸ್ ಅವರನ್ನು ಆಯ್ಕೆ ಮಾಡಲಾಗಿದೆ.




