‘ಆಲ್ ಈಸ್ ವೆಲ್’ ನಾಟಕ ಬದಿಗಿಡಲಿ, ಆರ್ಥಿಕ ಸ್ಥಿತಿ ಬಗ್ಗೆ ಸಿಎಂ ಶ್ವೇತಪತ್ರ ಹೊರಡಿಸಲಿ: ವಿಜಯೇಂದ್ರ

Date:

ಮುಖ್ಯಮಂತ್ರಿಗಳು ಆಲ್ ಈಸ್ ವೆಲ್ ನಾಟಕ ಬದಿಗಿಡಬೇಕು. ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದರು.

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಬುಧವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ರಾಜ್ಯದಲ್ಲಿ ಕ್ರೋಢೀಕೃತ ಹಣ ಉಪಯೋಗ ಆಗುತ್ತಿದೆಯೇ ದುರುಪಯೋಗ ಆಗುತ್ತಿದೆಯೇ? ಎಂದು ಪ್ರಶ್ನಿಸಿದರು.

“ಗ್ಯಾರಂಟಿಗಳ ಬಗ್ಗೆ ನಮ್ಮ ವಿರೋಧವಿಲ್ಲ. ಅದರ ಅನುಷ್ಠಾನ ಆಗಲೇಬೇಕು. ಯುವನಿಧಿ ಬಗ್ಗೆ ಚಕಾರ ಎತ್ತುತ್ತಿಲ್ಲ. ಪರಿಶಿಷ್ಟ ಜಾತಿ, ಪಂಗಡದ ಹಣವನ್ನು ಗ್ಯಾರಂಟಿಗೆ ಬಳಸಿದ್ದಾರೆ. ಇದರ ವಿರುದ್ಧ ಆ ಸಮಾಜದ ಮುಖಂಡರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ನಮಗೆ ಅನ್ಯಾಯ ಮಾಡದಿರಿ ಎಂದು ತಾಕೀತು ಮಾಡಿ ಮನವಿ ಸಲ್ಲಿಸಿದ್ದಾರೆ” ಎಂದು ಗಮನ ಸೆಳೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಖ್ಯಮಂತ್ರಿಗಳು ಸುಳ್ಳಿನ ಸರದಾರ. ಸರಕಾರದ ಯೋಗ್ಯತೆಗೆ ಬೆಂಗಳೂರಿನ ಒಂದು ಗುಂಡಿ ಮುಚ್ಚಲು ಸಾಧ್ಯವಾಗುತ್ತಿಲ್ಲ. ಭೂಗತ ಟನೆಲ್ ಬಗ್ಗೆ ಮಾತನಾಡುತ್ತೀರಿ, ಆದರೆ ಶಾಸಕರಿಗೆ ಅಭಿವೃದ್ಧಿ ಅನುದಾನ ನೀಡುತ್ತಿಲ್ಲ” ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಸಿಎಂ ಕುರ್ಚಿಗಾಗಿ ಭರ್ಜರಿ ಪೈಪೋಟಿ

“ಸಿಎಂ ಕುರ್ಚಿಗಾಗಿ ಭರ್ಜರಿ ಪೈಪೋಟಿ ನಡೆದಿದೆ. ಸಿದ್ದರಾಮಯ್ಯನವರು ಪೂರ್ಣಾವಧಿ ಸಿಎಂ ಎಂದು ಹಲವರು ಬ್ಯಾಟಿಂಗ್ ಮಾಡುತ್ತಿದ್ದಾರೆ. ಅವರೆಲ್ಲ ಸಿದ್ದರಾಮಯ್ಯನವರ ಪರ ಇದ್ದಾರೆ ಎಂಬ ಭ್ರಮೆಯಿಂದ ಹೊರಕ್ಕೆ ಬರಬೇಕಿದೆ. ಅವರೆಲ್ಲರೂ ಸಿಎಂ ಹುದ್ದೆಯ ಆಕಾಂಕ್ಷಿಗಳು” ಎಂದು ವಿಜಯೇಂದ್ರ ಹೇಳಿದರು.

“ಒಂದೆಡೆ ಕಾಂಗ್ರೆಸ್ ಹೈಕಮಾಂಡ್ ಸುಪ್ರೀಂ ಎನ್ನುತ್ತಾರೆ. ಇನ್ನೊಂದೆಡೆ ಸಿದ್ದರಾಮಯ್ಯನವರ ಬೆಂಬಲಿಗರು ಹೈಕಮಾಂಡಿಗೇ ಎಚ್ಚರಿಕೆ ನೀಡಿದ್ದಾರೆ. ತಮ್ಮ ಮಾತು ಕೇಳದಿದ್ದರೆ ನಮ್ಮ ದಾರಿ ನಮಗೆ ಎಂಬ ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ಮುಂದಿನ ದಿನಗಳಲ್ಲಿ ನಡೆಯಲಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಂತು ಬೇಸಿಗೆ, ತತ್ವಾರ ತಂತು ನೀರಿಗೆ, ಅನುಕೂಲ ಅವಕಾಶವಾದಿಗಳಿಗೆ!

ಜನರೇನು ಭಿಕ್ಷುಕರಾ?

“ಲೋಕಸಭಾ ಚುನಾವಣೆ ಬಂದಾಗ ಗ್ಯಾರಂಟಿ ಹಣ ನೀಡುತ್ತಾರೆ. ಉಪ ಚುನಾವಣೆ ಬಂದಾಗಲೂ ಗ್ಯಾರಂಟಿ ಅನುಷ್ಠಾನಕ್ಕೆ ಬರುತ್ತದೆ. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ಬಂದಾಗ ಹಣ ಕೊಡುವ ಸಾಧ್ಯತೆ ಇದೆ. ರಾಜ್ಯದ ಜನರನ್ನು ಕಾಂಗ್ರೆಸ್‌ನವರು ಭಿಕ್ಷುಕರು ಅಂದುಕೊಂಡಿದ್ದೀರಾ” ಎಂದು ಪ್ರಶ್ನಿಸಿದರು.

ಬರಗಾಲದ ಸ್ಥಿತಿ ಬಗ್ಗೆ ಎಚ್ಚೆತ್ತುಕೊಳ್ಳಿ

“ರಾಜ್ಯದಲ್ಲಿ ಭೀಕರ ಬರಗಾಲದ ಸೂಚನೆಗಳು ಈಗಾಗಲೇ ಕಾಣುತ್ತಿವೆ. ಮುಖ್ಯಮಂತ್ರಿಗಳು, ಸರಕಾರ ಎಚ್ಚೆತ್ತುಕೊಳ್ಳಲಿ. ನಿದ್ರೆಯಲ್ಲಿರುವ ಸರಕಾರವು ಕುಡಿಯುವ ನೀರಿನ ಸಮಸ್ಯೆಯನ್ನು ಕೂಡಲೇ ಬಗೆ ಹರಿಸಬೇಕು” ಎಂದು ಒತ್ತಾಯಿಸಿದರು.

ಸಂಸದ ಪಿ.ಸಿ. ಮೋಹನ್, ಮಾಜಿ ಸಚಿವರಾದ ಗೋಪಾಲಯ್ಯ, ಶಾಸಕ ಉದಯ ಗರುಡಾಚಾರ್, ರಾಜ್ಯ ಮುಖ್ಯ ವಕ್ತಾರ ಅಶ್ವಥ್ ನಾರಾಯಣ್, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...