ಬಿಜೆಪಿ ನಾಯಕರು ಮೊದಲು ಯತ್ನಾಳ್ ಮಾಡಿರುವ ಆರೋಪಗಳಿಗೆ ಉತ್ತರಿಸಲಿ: ಸಿದ್ದರಾಮಯ್ಯ

Date:

ಕೇಂದ್ರದ ಬಿಜೆಪಿ ನಾಯಕರನ್ನು ಯಡಿಯೂರಪ್ಪನವರು ಬ್ಲಾಕ್ ಮೇಲ್ ಮಾಡಿ ತಮ್ಮ ಮಗನನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಏನಿದು ಬ್ಲಾಕ್ ಮೇಲ್? ಈ ಬಗ್ಗೆ ಯಡಿಯೂರಪ್ಪನವರು ಇಂದಿನ ಸಾರ್ವಜನಿಕ ಸಭೆಯಲ್ಲಿ ವಿವರ ನೀಡಲಿ ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

“ನಮ್ಮ ಸರ್ಕಾರದ ವಿರುದ್ದ ಬಿಜೆಪಿ ಇಂದು ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಯನ್ನು ಸ್ವಾಗತಿಸುತ್ತೇನೆ. ನಮ್ಮ ಸರ್ಕಾರದ ವಿರುದ್ದ ಆರೋಪಗಳನ್ನು ಮಾಡುವ ಮೊದಲು ಬಿಜೆಪಿಯ ಶಾಸಕರೇ ಆಗಿರುವ ಬಸನಗೌಡ ಪಾಟೀಲ ಯತ್ನಾಳ್ ಅವರು ನಿನ್ನೆ ಸದನದ ಒಳಗೆ ಮತ್ತು ಹೊರಗ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುಟುಂಬದ ಮೇಲೆ ಮಾಡಿರುವ ಆರೋಪಕ್ಕೆ ಉತ್ತರಿಸಲಿ ಎಂದು ಪತ್ರಿಕಾ ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ.

“ಬಿ ವೈ ವಿಜಯೇಂದ್ರ, ಇನ್ನೊಬ್ಬ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಆರ್ .ಅಶೋಕ್ ಅವರ ವಿರುದ್ದ ಮಾಡಿರುವ ಆರೋಪಗಳ ಬಗ್ಗೆ ಬಿಜೆಪಿ ನಾಯಕರು ಈ ಪ್ರತಿಭಟನಾ ಸಭೆಯಲ್ಲಿ ಉತ್ತರ ನೀಡಲಿ. ಬಿ.ಎಸ್. ಯಡಿಯೂರಪ್ಪನವರು ಹೈಕಮಾಂಡ್ ಗೆ ಎರಡು ಸಾವಿರ ಕೋಟಿ ರೂಪಾಯಿ ಕಾಣಿಕೆ ನೀಡಿ ಮುಖ್ಯಮಂತ್ರಿಯಾಗಿದ್ದಾರೆ ಎಂದು ಹಿಂದೆ ಆರೋಪಿಸಿದ್ದ ಬಸನಗೌಡ ಪಾಟೀಲ್ ಯತ್ನಾಳ್, ನಿನ್ನೆ ಹೊಸ ಬಾಂಬು ಹಾಕಿದ್ದಾರೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಬಿಜೆಪಿ ನಾಯಕ ವಿ.ಸೋಮಣ್ಣನವರನ್ನು ಸೋಲಿಸಲಿಕ್ಕಾಗಿಯೇ ಬೆಂಗಳೂರಿನಿಂದ ಅವರನ್ನು ಓಡಿಸಿ ಮೈಸೂರಿನ ಎರಡು ಕ್ಷೇತ್ರಗಳಲ್ಲಿ ಚುನಾವಣಾ ಸ್ಪರ್ಧಿಸುವಂತೆ ಮಾಡಿ ಸೋಲಿಸಿದ್ದಾರೆ ಎಂದು ಇಲ್ಲಿಯವರೆಗೆ ಆರೋಪಿಸುತ್ತಾ ಬಂದಿರುವ ಯತ್ನಾಳ್ ಅವರು ಈಗ ಬಸವರಾಜ ಬೊಮ್ಮಾಯಿ ಅವರನ್ನೂ ಸೋಲಿಸಲು ಬಿ.ವೈ.ವಿಜಯೇಂದ್ರ ಹಣ ಕೊಟ್ಟು ಕಳಿಸಿದ್ದರು ಎಂದು ಗುರುತರವಾದ ಇನ್ನೊಂದು ಆರೋಪ ಮಾಡಿದ್ದಾರೆ” ಎಂದು ಹೇಳಿದ್ದಾರೆ.

“ಆತ್ಮವಿಶ್ವಾಸದಿಂದ ಮಾತನಾಡಿರುವ ಯತ್ನಾಳ್ ಬೊಮ್ಮಾಯಿ ಅವರನ್ನು ದೇವರ ಮೇಲೆ ಆಣೆಗೆ ಕರೆದಿದ್ದನ್ನು ನೋಡಿದರೆ ಆರೋಪದಲ್ಲಿ ಸತ್ಯಾಂಶ ಇದ್ದ ಹಾಗಿದೆ. ಚುನಾವಣೆಯ ಕಾಲದಲ್ಲಿ ಈ ರೀತಿಯ ಹಣ ಸಂದಾಯ ಮಾಡುವುದು ಕಾನೂನಿನ ದೃಷ್ಟಿಯಿಂದಲೂ ಶಿಕ್ಷಾರ್ಹ ಅಪರಾಧವಾಗಿದೆ” ಎಂದು ತಿಳಿಸಿದ್ದಾರೆ.

“ಬಿಜೆಪಿಯಲ್ಲಿನ ದಕ್ಷಿಣದ ಕೆಲವು ನಾಯಕರು ತಮ್ಮಲ್ಲಿರುವ ಹಣದ ಬಲದಿಂದ ಅಧಿಕಾರದ ಸ್ಥಾನಗಳನ್ನು ಪಡೆಯುತ್ತಿದ್ದಾರೆ ಎಂದು ಆರೋಪಿಸುವ ಮೂಲಕ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಆರ್. ಅಶೋಕ್ ಅವರ ಬಗ್ಗೆಯೂ ಅನುಮಾನ ಹುಟ್ಟಿಸುವಂತೆ ಮಾಡಿದ್ದಾರೆ” ಎಂದಿದ್ದಾರೆ.

“ಬಸನಗೌಡ ಪಾಟೀಲ್ ಯತ್ನಾಳ್ ಅವರು ನಿರಂತರವಾಗಿ ತಮ್ಮ ಪಕ್ಷದವರ ವಿರುದ್ದವೇ ಮಾಡಿಕೊಂಡು ಬಂದಿರುವ ಆರೋಪಗಳು ಗಂಭೀರ ಸ್ವರೂಪದ್ದಾಗಿದೆ. ಇದಕ್ಕೆ ಉತ್ತರ ನೀಡಬೇಕಾಗಿರುವುದು ರಾಜ್ಯ ಬಿಜೆಪಿ ನಾಯಕರ ಕರ್ತವ್ಯವಾಗಿದೆ. ಇದನ್ನು ತಿಳಿದುಕೊಳ್ಳುವ ಹಕ್ಕು ರಾಜ್ಯದ ಜನತೆಗಿದೆ” ಎಂದು ಒತ್ತಾಯಿಸಿದ್ದಾರೆ.

“ರಾಜ್ಯದ ಬಿಜೆಪಿ ನಾಯಕರು ಪ್ರತಿಭಟನೆ ಮಾಡಬೇಕಾಗಿರುವುದು ಬೆಳಗಾವಿಯಲ್ಲಿ ಅಲ್ಲ, ಈ ನಾಯಕರು ಮೊದಲು ಇವರದ್ದೇ ಪಕ್ಷದ 25 ಸಂಸದರನ್ನು ದೆಹಲಿಗೆ ಕಳಿಸಿ ಬರಪರಿಹಾರವನ್ನು ಶೀಘ್ರದಲ್ಲಿ ಬಿಡುಗಡೆಮಾಡುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿಯವರ ಮನೆ ಮುಂದೆ ಧರಣಿ ನಡೆಸುವಂತೆ ಮಾಡಲಿ. ಅವರಿಗೇನಾದರೂ ಪ್ರಧಾನಿ ಬಗ್ಗೆ ಅಂಜಿಕೆ ಇದ್ದರೆ ಅವರ ದನಿಗೆ ದನಿಗೂಡಿಸಲು ನನ್ನ ಸಂಪುಟದ ಸದಸ್ಯರ ಜೊತೆ ನಾನು ಅವರ ಜೊತೆ ಸೇರಿಕೊಳ್ಳುತ್ತೇನೆ. ಸುಮ್ಮನೆ ಇಲ್ಲಿ ಪ್ರಚಾರಕ್ಕಾಗಿ ಕೂಗಾಡಿದರೆ ಏನೂ ಪ್ರಯೋಜನವಾಗದು” ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.

“ರಾಜ್ಯದ ಬಿಜೆಪಿ ನಾಯಕರ ದಮ್ಮು ತಾಕತ್ ಎಲ್ಲವೂ ಮೊನ್ನೆ ಸದನದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಯಲಾಗಿದೆ. ಉತ್ತರ ಕರ್ನಾಟಕದ ಅಭಿವೃದ್ದಿ ಯೋಜನೆಗಳ ಬಗ್ಗೆ ಚರ್ಚೆ ನಡೆಯಬೇಕಾಗಿದ್ದ ಸಮಯವನ್ನು ಅನಗತ್ಯವಾದ ಪ್ರತಿಭಟನೆಯ ಮೂಲಕ ಬಿಜೆಪಿ ಶಾಸಕರು ವಿಧಾನಸಭೆಯಲ್ಲಿ ಪೋಲು ಮಾಡಿದ್ದಾರೆ. ಉತ್ತರ ಕರ್ನಾಟಕದ ಬಗ್ಗೆ ಪ್ರೀತಿ-ಕಾಳಜಿ ಇದ್ದಿದ್ದರೆ ಇಂತಹ ಮೂರ್ಖತನದ ಕೆಲಸವನ್ನು ಮಾಡುತ್ತಿರಲಿಲ್ಲ. ಇಂತಹವರಿಗೆ ಉತ್ತರ ಕರ್ನಾಟಕದ ಬಗ್ಗೆ ಮಾತನಾಡುವ ಯಾವ ಹಕ್ಕಿದೆ” ಎಂದು ಪ್ರಶ್ನಿಸಿದ್ದಾರೆ.

“ಹೊಸ ವಿಧಾನಸಭೆ ರಚನೆಗೊಂಡು 150 ದಿನಗಳಾಗುವ ವರೆಗೆ ವಿರೋಧಪಕ್ಷದ ನಾಯಕನನ್ನು ಮಾಡುವ ಯೋಗ್ಯತೆ ಬಿಜೆಪಿಗೆ ಇಲ್ಲ. ಈಗಲೂ ವಿವಾದ ಬಗೆಹರಿದಿಲ್ಲ. ವಿರೋಧ ಪಕ್ಷದ ನಾಯಕರಾಗಿ ಆರ್. ಅಶೋಕ್ ಅವರನ್ನಾಗಲಿ, ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರನ್ನಾಗಲಿ ಬಹುಸಂಖ್ಯೆಯ ಬಿಜೆಪಿಯ ಶಾಸಕರು ಒಪ್ಪಿಕೊಂಡಿಲ್ಲ. ತಮ್ಮ ಊಟದೆಲೆಯಲ್ಲಿ ಆನೆ ಸತ್ತು ಬಿದ್ದಿರುವಾಗ ನಮ್ಮ ಪಕ್ಷದ ಎಲೆಯಲ್ಲಿನ ನೊಣವನ್ನು ಹುಡುಕಿಕೊಂಡು ಓಡಾಡುತ್ತಿರುವ ಹಾಗಿದೆ ರಾಜ್ಯದ ಬಿಜೆಪಿ ನಾಯಕರ ದುಸ್ಥಿತಿ” ಎಂದು ಟೀಕಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...