ಪಡಿತರದಲ್ಲಿ ಅಕ್ಕಿ ಜೊತೆಗೆ ರಾಗಿ, ಜೋಳ ನೀಡಲಿ: ರೈತ ಮುಖಂಡ ಬಡಗಲಪುರ ನಾಗೇಂದ್ರ ಆಗ್ರಹ

Date:

  • ಬಿಜೆಪಿ ಸೋಲಿಸಿದ ರಾಜ್ಯದ ಮೇಲೆ ಕೇಂದ್ರ ದ್ವೇಷ ತೋರುತ್ತಿದೆ
  • ಸ್ಥಳೀಯ ರೈತರಿಂದ ಅಕ್ಕಿ ಖರೀದಿಸಿ ಪ್ರೋತ್ಸಾಹ ನೀಡಲಿ

ಸರ್ಕಾರದ ಅನ್ನಭಾಗ್ಯ ಯೋಜನೆ ಹಾಗೂ ಪಡಿತರ ವಿತರಣೆಯಲ್ಲಿ ಅಕ್ಕಿ ಜೊತೆಗೆ ರಾಗಿ, ಜೋಳ ವಿತರಣೆ ಮಾಡುವಂತಾಗಬೇಕು ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು.

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಅಕ್ಕಿ ಹಂಚಿಕೆ ವಿಚಾರದಲ್ಲಿನ ಕೇಂದ್ರ ಸರ್ಕಾರದ ನಡೆಯನ್ನು ಅವರು ಖಂಡಿಸಿದರು.

“ಪಕ್ಷಗಳ ನಡುವಿನ ರಾಜಕೀಯ ಜಿದ್ದು ಸಾಮಾನ್ಯ. ಆದರೆ ಅಕ್ಕಿ ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜ್ಯದ ಜನರ ವಿರುದ್ಧವೂ ದ್ವೇಷದ ರಾಜಕಾರಣ ಮಾಡಹೊರಟಿದೆ” ಎಂದು ನಾಗೇಂದ್ರ ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗೋದಾಮುಗಳಲ್ಲಿ ದಾಸ್ತಾನು ಇದ್ದರೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ಬಿಡುಗಡೆ ಮಾಡುತ್ತಿಲ್ಲ. ಚುನಾವಣೆಯಲ್ಲಿ ಬಿಜೆಪಿ ಸರ್ಕಾರವನ್ನು ಸೋಲಿಸಿದ ರಾಜ್ಯದ ಮತದಾರರ ಮೇಲೆ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ” ಎಂದರು.

“ಮೊದಲೇ ನಮ್ಮ ರಾಜ್ಯದಲ್ಲಿ ಅಕ್ಕಿ, ರಾಗಿ, ಭತ್ತ ಮುಂತಾದ ಬೆಳೆಗಳಿಗೆ ಬೆಂಬಲ ಸಿಗದೇ ಗಣನೀಯವಾಗಿ ಕಡಿಮೆಯಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಸ್ಥಳೀಯ ರೈತರಿಂದ ಅಕ್ಕಿ ಖರೀದಿಸಿ ಪ್ರೋತ್ಸಾಹಿಸಬೇಕು” ಎಂದು ಅವರು ಒತ್ತಾಯಿಸಿದರು.

“ಇದರ ಜೊತೆಗೆ ಅಗತ್ಯವಿದ್ದ ಕಡೆ ಅಕ್ಕಿ ಇಲ್ಲದಿದ್ದಲ್ಲಿ ಅದರ ಬದಲಿಗೆ ರಾಗಿ ಮತ್ತು ಜೋಳವನ್ನು ಖರೀದಿಸಿ ಬೇಡಿಕೆಗನುಗುಣವಾಗಿ ಪಡಿತರ ವಿತರಣೆ ಮಾಡಬೇಕು” ಎಂದು ಬಡಗಲಪುರ ನಾಗೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ?: ಅನ್ನ ಭಾಗ್ಯ | ರಾಜ್ಯದ ಜೋಳ, ರಾಗಿ, ಕುಚಲಕ್ಕಿ ಹಾಗೂ ಸಿರಿಧಾನ್ಯ ಖರೀದಿಸಿ ಹಂಚಿ: ರೈತ ಸಂಘಗಳ ಮನವಿ

ದಾಸ್ತಾನಿನ ಕೊರತೆ: ಸಿಎಂ ಸಿದ್ದರಾಮಯ್ಯ

ಮತ್ತೊಂದು ಕಡೆ ಅಕ್ಕಿ ಬದಲಿಗೆ ರಾಗಿ, ಜೋಳ ವಿತರಣೆ ಮಾಡುವ ವಿಚಾರದ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ಒದಗಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ರಾಜ್ಯದಲ್ಲಿ ರಾಗಿ, ಜೋಳವನ್ನು 6 ತಿಂಗಳವರೆಗೆ ತಲಾ 2 ಕೆಜಿ ಕೊಡುವಷ್ಟು ಮಾತ್ರ ದಾಸ್ತಾನು ಲಭ್ಯವಿದೆ” ಎಂದು ಹೇಳಿದರು.

“ಹಳೆ ಮೈಸೂರು ಭಾಗದ ಜನರಿಗೆ 2 ಕೆಜಿ ರಾಗಿ ಹಾಗೂ ಹೈದ್ರಾಬಾದ್ ಕರ್ನಾಟಕ ಹಾಗೂ ಮುಂಬೈ ಕರ್ನಾಟಕದ ಭಾಗದ ಜನರಿಗೆ 2 ಕೆಜಿ ಜೋಳ ನೀಡಬಹುದು. ಇನ್ನುಳಿದ 3 ಕೆಜಿ ಅಕ್ಕಿಯನ್ನು ರಾಜ್ಯದ ಜನರಿಗೆ ನೀಡಬೇಕಾಗುತ್ತದೆ. ಹೀಗಾಗಿ ಅಗತ್ಯಕ್ಕನುಗುಣವಾಗಿ ಅಕ್ಕಿ ಬದಲಿಗೆ ಬೇರೆ ಆಹಾರ ಧಾನ್ಯಗಳ ಖರೀದಿ ಮತ್ತು ಪೂರೈಕೆ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ” ಎಂದು ಸಿದ್ದರಾಮಯ್ಯ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...