ನನ್ನ ಚುನಾವಣೆಯ ಉದ್ದೇಶ ಯಶಸ್ವಿ, ಸಂಸದ ರಾಘವೇಂದ್ರ ಬಂಧನವಾಗಲಿ: ಕೆ ಎಸ್‌ ಈಶ್ವರಪ್ಪ

Date:

ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಅವರು ಚುನಾವಣೆ ವೇಳೆ ನನಗೆ ಸಭೆ ನಡೆಸಲು ಬಿಟ್ಟಿಲ್ಲ. ಸಾಮಾಜಿಕ ಜಾಲತಾಣದಲ್ಲಿ ತಿರುಚಿದ ವಿಡಿಯೋ ಮಾಡಿ, ನನ್ನ ಪರವಾಗಿ ಬಿಜೆಪಿಗೆ ಮತ ಹಾಕಿ ಎನ್ನುವ ರೀತಿಯಲ್ಲಿ ಸುದ್ದಿ ಹಬ್ಬಿಸಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮವಾಗಬೇಕು ಎಂದು ಪಕ್ಷೇತರ ಅಭ್ಯರ್ಥಿ ಕೆ ಎಸ್‌ ಈಶ್ವರಪ್ಪ ಹೇಳಿದರು.

ಶಿವಮೊಗ್ಗದಲ್ಲಿ ಗುರುವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ರಾಘವೇಂದ್ರ ವಿರುದ್ಧ ಕ್ರಮ ಕೈಗೊಳ್ಳದೆ ಇದ್ದರೆ ಹೋರಾಟ ಮಾಡುತ್ತೇನೆ. ನನ್ನ ಸೋಲಿಸಲು ಅವರಿಂದ ಷಡ್ಯಂತ್ರ ನಡೆದಿದೆ. ತಕ್ಷಣ ಅವರನ್ನು ಬಂಧಿಸಬೇಕು” ಎಂದು ಆಗ್ರಹಿಸಿದರು.

“ಈ ಬಗ್ಗೆ ಡಿಸಿ, ಎಸ್ಪಿಗೆ ನಾನು ದೂರು ನೀಡಿದ್ದೇನೆ. ಈ ಸುಳ್ಳು ಸುದ್ದಿಯಿಂದ ನನಗೆ ಮತಗಳ ಅನ್ಯಾಯವಾಗಿದೆ. ಸುಳ್ಳು ಸುದ್ದಿಯಿಂದ ನನಗೆ ಮತ ನೀಡಲು ಬಂದವರಿಗೆ ಗೊಂದಲವಾಗಿ, ಮತದಾನ ಕಡಿಮೆಯಾಗಿದೆ. ಇದು ರಾಘವೇಂದ್ರ ಅವರ ಕುತಂತ್ರ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಘವೇಂದ್ರ ಅವರನ್ನು ಬಂಧಿಸಲು ಒಂದು ವಾರ ಗಡುವು ನೀಡುತ್ತೇನೆ. 15 ನೇ ತಾರೀಖಿನೊಳಗೆ ಕ್ರಮ ಕೈಗೊಳ್ಳದೆ ಹೋದರೆ ಹೋರಾಟ ಮಾಡುತ್ತೇವೆ. ಈ ಬಗ್ಗೆ ಸಮಗ್ರ ತನಿಖೆ ಆಗಬೇಕು, ರಾಘವೇಂದ್ರ ಮೇಲೆ ಎಫ್ಐಆರ್ ದಾಖಲಿಸಬೇಕು” ಎಂದಯ ಒತ್ತಾಯಿಸಿದರು.

“ನನ್ನ ಚುನಾವಣೆಯ ಉದ್ದೇಶ ಯಶಸ್ವಿಯಾಗಿದೆ. ಜಿಲ್ಲೆಯ ಮತದಾರರಿಗೆ ಧನ್ಯವಾದ ತಿಳಿಸುತ್ತೇನೆ. ಬೇರೆ ಪಕ್ಷ ಕಟ್ಟಲು ನಾನು ಯಡಿಯೂರಪ್ಪ ಅಲ್ಲ. ಪಕ್ಷ ಶುದ್ದೀಕರಣದ ಸಿದ್ದಾಂತ ಮುಂದುವರಿಸುತ್ತೇನೆ. ಸಿದ್ಧಾಂತ, ಹಿಂದುತ್ವದ ಮುಂದೆ ಯಾರು ದೊಡ್ಡವರಲ್ಲ. ಸಿದ್ದಾಂತಕ್ಕೆ ಪೆಟ್ಟು ಬಿದ್ದಾಗ ನಾನು ಚುನಾವಣೆಗೆ ಸ್ಪರ್ಧಿಸಿದ್ದೇನೆ. ಸಿಟಿ ರವಿ, ಪ್ರತಾಪ್ ಸಿಂಹ, ಅನಂತ್ ಕುಮಾರ್ ಅವರ ಧ್ವನಿಯಾಗಿ ನಾನು ನಿಂತಿದ್ದೇನೆ. ಒಂದೇ ತಿಂಗಳಲ್ಲಿ ನಾನು ಸಾಕಷ್ಟು ಪರಿವರ್ತನೆ ತಂದಿದ್ದೇನೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...