ಮುನಿರತ್ನ ಬಗ್ಗೆ ಒಕ್ಕಲಿಗ ಸಮುದಾಯದ ಮುಖ್ಯಸ್ಥರು, ಸ್ವಾಮೀಜಿಗಳು ಮಾತನಾಡಲಿ: ಡಿ ಕೆ ಶಿವಕುಮಾರ್‌

Date:

ಒಕ್ಕಲಿಗ ಸಮುದಾಯದ ಕುರಿತು ಮುನಿರತ್ನ ಆಡಿರುವ ಮಾತಿನ ಬಗ್ಗೆ ಸಮುದಾಯದ ಮುಖ್ಯಸ್ಥರು, ಸ್ವಾಮೀಜಿಗಳು, ಹಿರಿಯರು ಮಾತನಾಡಬೇಕು. ಅದರ ಬಗ್ಗೆ ಆರ್ ಅಶೋಕ್ ಹಾಗೂ ಬಿಜೆಪಿ ನಾಯಕರು ಮಾತನಾಡಬೇಕು ಎಂದು ಡಿಸಿಎಂ ಡಿ‌ ಕೆ ಶಿವಕುಮಾರ್ ಹೇಳಿದರು.

ಅಮೆರಿಕ ಪ್ರವಾಸದಿಂದ ಮರಳಿರುವ ಅವರು, ಮಂಗಳವಾರ ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿ, “ಶಾಸಕ ಮುನಿರತ್ನ ಅವಹೇಳನ ಬಗ್ಗೆ ಮಾತನಾಡಲು ದೊಡ್ಡ ದೊಡ್ಡ ನಾಯಕರಿದ್ದಾರೆ. ಇಂತಹ ವಿಚಾರದಲ್ಲಿ ಬಿಜೆಪಿಯವರೇ ಮಾತನಾಡುವುದು ಸೂಕ್ತ. ಮುನಿರತ್ನ ಮಾತನಾಡಿರುವುದು ಸರಿಯೋ ತಪ್ಪೋ? ಒಳ್ಳೆಯದೋ, ಕೆಟ್ಟದ್ದೋ ಎಂಬುದನ್ನು ತಿಳಿಸಬೇಕು” ಎಂದು ಒತ್ತಾಯಿಸಿದರು.

ಪೊಲೀಸರ ಬಂಧನಕ್ಕೆ ಮುಂಚಿತವಾಗಿ ನನ್ನ ವಿಚಾರದಲ್ಲಿ ಅಣ್ಣ- ತಮ್ಮರ ಆಟ ಶುರುವಾಗಿದೆ ಎನ್ನುವ ಮುನಿರತ್ನ ಹೇಳಿಕೆ ಬಗ್ಗೆ ಕೇಳಿದಾಗ, “ನನಗೆ ಈ ವಿಚಾರ ಗೊತ್ತಿಲ್ಲ. ನನಗೆ ಇನ್ನು ಸರಿಯಾಗಿ ಮಾಹಿತಿ ಗೊತ್ತಿಲ್ಲ. ಸಾಂವಿಧಾನಿಕ ಹುದ್ದೆ ಹೊಂದಿರುವ ಆರ್ ಅಶೋಕ್, ವಿಜಯೇಂದ್ರ, ಕೇಂದ್ರ ಸಚಿವರು ಇದ್ದಾರೆ. ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಲಿ”ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಹುಲ್ ಗಾಂಧಿ ಅವರ ಭೇಟಿಗೆ ಯಾರ ಅನುಮತಿ ಬೇಕು?

ಅಮೆರಿಕದಲ್ಲಿ ರಾಹುಲ್ ಗಾಂಧಿ ಅವರ ಭೇಟಿ ಹಾಗೂ ಚರ್ಚೆಯ ವಿಚಾರದ ಬಗ್ಗೆ ಕೇಳಿದಾಗ, “ನಮ್ಮ ಪಕ್ಷದ ನಾಯಕರನ್ನು ಭೇಟಿಯಾಗಲು ಯಾರ ಅನುಮತಿ ಕೇಳಬೇಕು? ರಾಹುಲ್ ಗಾಂಧಿ ಅವರ ಬಳಿ ಏನು ಮಾತನಾಡಿದೆ ಎಂದು ನಿಮಗೆ (ಮಾಧ್ಯಮದವರಿಗೆ) ಹೇಳಲಾಗುತ್ತದೆಯೇ? ನನ್ನ ತಮ್ಮ, ಹೆಂಡತಿ ಮತ್ತು ಸ್ವಾಮೀಜಿಯವರ ಬಳಿ ಏನು ಮಾತನಾಡುತ್ತೇನೆ ಎಂಬುದನ್ನು ನಿಮ್ಮ ಬಳಿ ಹೇಳಲು ಆಗುತ್ತದೆಯೇ?” ಎಂದು ಹೇಳಿದರು.

ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಾಟೆ ಪ್ರಕರಣದ ಬಗ್ಗೆ ಪ್ರಶ್ನಿಸಿದಾಗ, “ಸರ್ಕಾರ, ಪೊಲೀಸ್ ಇಲಾಖೆಯು ಕಾನೂನು ಪ್ರಕಾರ ಏನು ಕ್ರಮ ತೆಗೆದುಕೊಳ್ಳಬೇಕೊ ಅದನ್ನು ಮಾಡುತ್ತದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...