ಮಣಿಪುರ ಹಿಂಸಾಚಾರ | ರಾಷ್ಟ್ರಪತಿ ದ್ರೌಪದಿ ಮುರ್ಮು ತಕ್ಷಣ ಮಧ್ಯ ಪ್ರವೇಶಿಸಲಿ: ಐವನ್ ಡಿ ಸೋಜ

Date:

  • ‘ದೇಶದ ಪ್ರಧಾನಿ, ಮಣಿಪುರ ಸಿಎಂ ತಳೆದಿರುವ ನಿಲುವು ನಾಚಿಗೇಡು’
  • ರಾಜ್ಯ ಬಿಜೆಪಿ ಸ್ಥಿತಿ ನಾವಿಕನಿಲ್ಲದ ಹಡಗಿನಂತಾಗಿದೆ: ಐವನ್ ಡಿ ಸೋಜ

ಮಣಿಪುರದ ಘಟನೆಯ ಬಗ್ಗೆ ದೇಶದ ಪ್ರಧಾನಿ ಮತ್ತು ಅಲ್ಲಿನ ಮುಖ್ಯಮಂತ್ರಿ ತಳೆದಿರುವ ನಿಲುವು ನಾಚಿಗೇಡು. ಅಲ್ಲಿ ಹಿಂಸೆ ದೌರ್ಜನ್ಯ ಹತ್ತಿಕ್ಕುವ ಬದಲು ಪ್ರಧಾನ ಮಂತ್ರಿ ಗುಜರಾತ್, ಛತ್ತೀಸ್ ಗಡದ ಉದಾಹರಣೆ ನೀಡುತ್ತಿದ್ದಾರೆ ಎಂದು ಮಾಜಿ ಶಾಸಕ ಮತ್ತು ಎಐಸಿಸಿ ಮುಖಂಡ ಐವನ್ ಡಿ ಸೋಜ ವಾಗ್ದಾಳಿ ನಡೆಸಿದರು.

ಮಂಗಳೂರಿನಲ್ಲಿ ಮಾತನಾಡಿದ ಅವರು, “ಮಣಿಪುರದಲ್ಲಿ ನಡೆಯುತ್ತಿರುವ ದೌರ್ಜನ್ಯ ಹಿಂಸೆ ಸೇರಿದಂತೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗಟ್ಟಿದೆ. ಇಂತಹ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ತಕ್ಷಣ ಮಧ್ಯ ಪ್ರವೇಶ ಮಾಡಿ ಪರಿಸ್ಥಿತಿ ಯನ್ನು ನಿಯಂತ್ರಿಸಬೇಕು. ಅಲ್ಲಿನ ಆದಿವಾಸಿ ಬುಡಕಟ್ಟು ಸೇರಿದಂತೆ ಜನ ಸಾಮಾನ್ಯರ ರಕ್ಷಣೆಗೆ ಮುಂದಾಗಬೇಕು” ಎಂದು ಒತ್ತಾಯಿಸಿದರು.

‘ಚುನಾವಣಾ ಪ್ರಚಾರ’ಕ್ಕೆತೆರಳುವ ನಮ್ಮದೇಶದ ಪ್ರಧಾನಿ ಮಣಿಪುರದ ಸಮಸ್ಯೆ ಬಗೆಹರಿಸಲು ಎಷ್ಟು ಸಮಯ ನೀಡುತ್ತಿದ್ದಾರೆ? ಅಲ್ಲಿ ಮಾನ ವೀಯತೆಯ ಕುರುಹು ಇಲ್ಲದಂತೆ ಹಿಂಸಾಚಾರ ನಡೆಯುತ್ತಿದೆ. ದೇಶದ ಬಿಜೆಪಿಯ ಮಹಿಳಾ ಸಂಸದರು, ಸಚಿವರು ಮಹಿಳಾ ದೌರ್ಜನ್ಯದ ಬಗ್ಗೆ ಮೌನವಹಿಸಿರುವುದು ನಾಚಿಗೇಡು” ಎಂದು ಹರಿಹಾಯ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾವಿಕನಿಲ್ಲದ ಹಡಗು ಬಿಜೆಪಿ

“ರಾಜ್ಯದಲ್ಲಿ ಬಿಜೆಪಿ ನಾವಿಕನಿಲ್ಲದ ಹಡಗಿನಂತಾಗಿದೆ. ದೇಶದ ಯಾವುದೇ ರಾಜ್ಯದಲ್ಲಿ ಕರ್ನಾಟಕ ಹೊರತಾಗಿ ವಿಪಕ್ಷಗಳು ನಾಯಕನಿಲ್ಲದೆ ಬಜೆಟ್ ಅಧಿವೇಶನ ನಡೆದ ಉದಾಹರಣೆಗಳಿಲ್ಲ” ಎಂದರು.

“ಗಮನ ಸೆಳೆಯಬೇಕಾದ ಸದನದಲ್ಲಿ ಸಭಾಪತಿ ಅವಕಾಶ ನೀಡಿದ ನಂತರ ಮುಖಂಡರ ಜೊತೆ ಮಾತುಕತೆ ನಡೆದ ಬಳಿಕವೂ ಜನತೆ ತಲೆ ತಗ್ಗಿಸುವ ರೀತಿಯಲ್ಲಿ ಶಾಸಕರು ಕಾಗದವನ್ನು ಹರಿದು ಸಭಾಧ್ಯಕ್ಷ ರ ಮುಖದ ಮೇಲೆ, ಪೀಠದ ಮೇಲೆ ಎಸೆದು ಅನುಚಿತವಾಗಿ ವರ್ತಿಸಿದ್ದಾರೆ. ಅದಕ್ಕಾಗಿ ಅಮಾನತು ಗೊಂಡಿದ್ದಾರೆ. ಸ್ಪೀಕರ್ ಸರಿಯಾದ ಕ್ರಮ ಕೈ ಗೊಂಡಿದ್ದಾರೆ” ಎಂದು ಯು ಟಿ ಖಾದರ್ ನಡೆ ಸಮರ್ಥಿಸಿಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...